ಸಂಗ್ರಹ -ಸೌಜನ್ಯ -ಮಹಾಜಂಗಮ
(ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳು ಒಂದು ಅಧ್ಯಯನ ಡಾ.ಜಿ.ಕೆ.ಹಿರೇಮಠ)
- ಮೋಹಕ್ಕಿಂತ ಸುಡುವ ಬೆಂಕಿಯಿಲ್ಲ ,
- ದ್ವೇಷಕ್ಕಿಂತ ಚುಚ್ಚುವ ಅಲಗಿಲ್ಲ .
- ಭ್ರಾಂತಿಗಿಂತ ಬೇರೆ ಪಾಶವಿಲ್ಲ .
- ದುರಾಸೆಗಿಂತ ಬೇರೆ ಶತ್ರುವಿಲ್ಲ
- ಕಲ್ಲಿನಲ್ಲಿರುವ ನಿರಾಶೆ ಕನಕದಲ್ಲಿಯೂ ಬರಬೇಕು .
- ಪರಮತದ ಅಪಚಾರಕ್ಕೆ ಕೈ ಹಾಕಬಾರದು . ಸ್ವಮತದ ಅಪಜಯಕ್ಕೆ ಕೈಕಟ್ಟಿಕೊಂಡು ಕೂಡ್ರಬಾರದು .
- ಜಾತ್ರೆಗಳಲ್ಲಿ ಜರಗುವ ಜೀವವಧೆಯನ್ನು ನಿಲ್ಲಿಸಬೇಕು
- ಜೀವದಯಾ ಸಂಘಕ್ಕೆ ಸಹಾಯ ನೀಡಬೇಕು .
- ಗೋಲಿಯಾಟದಲ್ಲಿ ಗುರಿಯಿಡುವದರ ಮೂಲಕ ದೃಷ್ಟಿಶುದ್ಧಿ ಮಾಡಿಕೊಳ್ಳಬೇಕು .
- ಡೊಂಬರಾಟದಿಂದ ಹಟಯೋಗದ ಮರ್ಮವರಿಯಬೇಕು .
- ನಿಜಗುಣರ ಷಟ್ಶಾಸ್ತ್ರದ ಅಧ್ಯಯನ ಮಾಡಬೇಕು .
- ಅರ್ಚನ , ಅರ್ಪಣ , ಅನುಭಾವಗಳು ನಿತ್ಯವೂ ನಡೆಯಬೇಕು .
- ದೃಷ್ಟಿಯನ್ನು ಒಂದೇ ಕಡೆಗೆ ನಿಲ್ಲಿಸುವುದು ಯೋಗ ಸಾಧನೆಯಿಂದ ಸಾಧ್ಯ .
- ಒಳ್ಳೇ ಧೈಯವನ್ನು ಸಾಧಿಸಲು ಸದಾ ಪ್ರಯತ್ನಿಸುತ್ತಿರಬೇಕು .
- ಧರ್ಮದಿಂದ ಸದಾಚಾರದಿಂದ ನಡೆಯುವವನೇ ಮಾನವ .
- ಸಾಧಕರಾದವರು ಬ್ರಾಹ್ಮೀ ಮುಹೂರ್ತದಲ್ಲಿ ಏಳಬೇಕು .
- ನಿತ್ಯವೂ ಪ್ರಾತಃಕಾಲದಲ್ಲಿ ಆಸನ ಹಾಕಬೇಕು .
- ಪ್ರಾಣಾಯಾಮ ಮಾಡಬೇಕು .
- ಪರಮಾತ್ಮನನ್ನು ಧ್ಯಾನಿಸಿ ಮಲಗಬೇಕು .
- ಬಾಹ್ಯಾದ್ವೈತಕ್ಕೆ ಮನಸ್ಸು ಹಾಕಬಾರದು .
- ಗುರುವಚನವನ್ನು ಮೀರಬಾರದು .
- ಆಹಾರ – ಶುದ್ಧಿಯೇ ಸತ್ವಶುದ್ಧಿ .
- ಜಗದ್ಗುರುತ್ವ ಪಡೆದವರು ಸಮಾಜ – ಸೇವಾಕಾರ್ಯನಿರತರಾಗಬೇಕು .
- ಮಠಾಧಿಕಾರಿಗಳ ಆಚಾರ ವಿಚಾರಗಳನ್ನು ಸುಧಾರಿಸುವುದೇ ಶಿವಯೋಗ ಮಂದಿರದ ಮೂಲೋದ್ದೇಶ .
- ಶಕ್ತಿ ವಿಶಿಷ್ಟಾದ್ವೈ ತ ಸಿದ್ಧಾಂತವನ್ನು ತುಲನಾತ್ಮಕವಾಗಿ ವಿವೇಚಿಸಿ ಶಿಕ್ಷಣವನ್ನು ನೀಡುವುದು ಶಿವಯೋಗಮಂದಿರದ ಮುಖ್ಯೋದ್ದೇಶ .
- ಭಾರತದ ಎಲ್ಲ ವೀರಶೈವಮಠಗಳು ‘ ‘ ಶಿವಯೋಗ ಮಂದಿರ ‘ ‘ ಗಳಾಗಬೇಕು .
- ದೇಶ ವಿದೇಶಗಳಲ್ಲಿ ಶಕ್ತಿವಿಶಿಷ್ಟಾದ್ವೈ ತ ಪ್ರಚಾರ ಮಾಡಬೇಕು .
- ವಿರಕ್ತರಾದವರು ಕಾಮ , ಕ್ರೋಧ , ಲೋಭ , ಮೋಹ , ಮದ , ಮತ್ಸರ ತೊರೆಯಬೇಕು .
- ಸತ್ಯಕ್ಕಾಗಿ ಮಿತಭಾಷಿಯಾಗಿರಬೇಕು .
- ದುರ್ಗುಮ ತುಂಬಿರುವ ಮೌನ ಅಪಾಯಕಾರಿ .
- ಗುರು – ವಿರಕ್ತರು ಸಮಾಜಸೇವೆ ಮಾಡಬೇಕು .
- ದ್ವಿತೀಯ ಶಂಭು ಬಸವಣ್ಣನ ತತ್ವ ಪ್ರಚಾರ ಮಾಡಬೇಕು
- ಸಮಾಜಕ್ಕಾಗಿ ದೇಹ ಸವೆಯಿಸಬೇಕು
- ಘಟದಿಂದ ಮಠ ಬೆಳಗಬೇಕಲ್ಲದೆ ಮಠದಿಂದ ಘಟ ಬೆಳಗಬಾರದು .
- ಗೋಸಂರಕ್ಷಣೆಯನ್ನು ಮಠಾಧಿಪತಿಗಳು ಮಾಡಬೇಕು .
- ವಿಭೂತಿಯ ಮಹಿಮೆಯನ್ನು ತಿಳಿಯಬೇಕು