ಸಂಪಾದಕೀಯ.: ಪಥಿಕನ ಟಿಪ್ಪಣೆಗಳು

ಶ್ರೀಕಂಠ.ಚೌಕೀಮಠ.ವ್ಯವಸ್ಥಾಪಕ -ಸಂಪಾದಕ.

ಸಹೃದಯರಿಗೆ ನನ್ನ ನಮಸ್ಕಾರಗಳು.

ಬಸವ ಜಯಂತಿಯ ಪವಿತ್ರ ದಿನದಂದು (೧೪ -೦೫-೨೦೨೧) “ ಸುಕುಮಾರ” ಶ್ರೀ ಶಿವಯೋಗಮಂದಿರ ಬ್ಲಾಗ್‌ , ಅಂತರ್ಜಾಲದ ಮೂಲಕ ಹಂಪಿ ಹೇಮಕೂಟ ಶೂನ್ಯಸಿಂಹಾಸನಾಧೀಶ್ವರ ಪೂಜ್ಯ ಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ ಶ್ರೀ ಸನ್ನಿಧಿ ಯವರ ಅಮೃತ ಹಸ್ತದಿಂದ ,ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ ಯಲ್ಲಿ ಲೋಕಾರ್ಪಣೆಗೊಂಡಿತು.

“ ಸುಕುಮಾರ” ಶ್ರೀ ಶಿವಯೋಗಮಂದಿರ ಬ್ಲಾಗ್‌ ನ್ನು ಅಂತರ್ಜಾಲದ ಮೂಲಕಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ ಶ್ರೀ ಸನ್ನಿಧಿ ಯವರ ಅಮೃತ ಹಸ್ತದಿಂದ ,ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ ಯಲ್ಲಿ ಲೋಕಾರ್ಪಣೆಗೊಂಡಿತು.
ಅಪೂರ್ವ ಸಂದರ್ಭದಲ್ಲಿ ಪೂಜ್ಯ ಮುಪ್ಪಿನ ಬಸವಲಿಂಗ ದೇವರು ಶ್ರೀ ಅನ್ನದಾನೇಶ್ವರ ಸಂಸ್ಥಾನಮಠ ಹಾಲಕೆರೆ , ಪೂಜ್ಯ ಕೊಟ್ಟೂರು ದೇಶಿಕರು ದರೂರ, ಪೂಜ್ಯ ನಾಗಭೂಷಣ ದೇವರು ಅಡವಿಅಮರೇಶ್ವರ ಪೂಜ್ಯರು ಉಪಸ್ಥಿತರಿದ್ದರು .

 

ಸುಕುಮಾರ ಬ್ಲಾಗ್‌ ನ ಪ್ರಥಮ ಸಂಚಿಕೆಯನ್ನು ಬಿಡುಗಡೆ ಮಾಡಿ ,ಸಲಹೆ ,ಪ್ರತಿಕ್ರಿಯೆ ,ಪ್ರಶಂಸೆ ಮತ್ತು ಪ್ರೋತ್ಸಾಹದಾಯಕ ಸಂದೇಶಗಳ ಮಹಾಪೂರದಲ್ಲಿ ಮಿಂದೆದ್ದು,ತಪ್ಪುಗಳನ್ನುತಿದ್ದಿಕೊಳ್ಳುತ್ತ ,ಹೊಸ ರೂಪದ ಸುಕುಮಾರ ಬ್ಲಾಗ್‌ ನ ಎರಡನೇ ಸಂಚಿಕೆಯನ್ನು ಬಿಡುಗಡೆಗೊಳಿಸುತ್ತಿದ್ದೇನೆ.

ಪ್ರಸ್ತುತ ೨೦೨೧ನೇ ವರ್ಷ, ಪರಮ ಪೂಜ್ಯ ಲಿಂ.ಅಥಣಿ ಮುರುಘೇಂದ್ರ ಶಿವಯೋಗಿಗಳ ಪುಣ್ಯತಿಥಿ ಶತಮಾನೋತ್ಸವ .ತಮ್ಮ ಭೌತಿಕ ಶರೀರದ ಅಂತಿಮ ದಿನವನ್ನು “ಶಿವರಾತ್ರಿ” ಎಂದು ಸ್ವತಃ ಶಿವಯೋಗಿಗಳೇ ಮುನ್ಸೂಚನೆ ನೀಡಿದ ಪವಿತ್ರ ದಿನ ಕ್ಕೆ ನೂರು ವಸಂತಗಳ ಸಂಸ್ಮರಣೆ ಯಾಗಿರುತ್ತದೆ.

ಪೂಜ್ಯರ ಸ್ಮರಣೆ  ಮತ್ತು ಸುಕುಮಾರ ಬ್ಲಾಗ್‌ ನ ವಿಶೇಷ ಸಂಚಿಕೆಯ ಅರ್ಪಣೆ  ಪೂಜ್ಯದ್ವಯರ ಅವಿನಾಭಾವ ಸಂಬಂಧದ ಫಲಶೃತಿಗಳು.

ಪರಮ ಪೂಜ್ಯ ಲಿಂ.ಅಥಣಿ ಮುರುಘೇಂದ್ರ ಶಿವಯೋಗಿಗಳು ,ಪೂಜ್ಯ ಹಾನಗಲ್ಲ ಕುಮಾರಶಿವಯೋಗಿಗಳಿಗೆ  ಆದರ್ಶಪ್ರಾಯವಾದವರು . ಅಥಣಿ ಶಿವಯೋಗಿಗಳ ಮೇಲಿನ ಶ್ರೀ ಕುಮಾರ ಶಿವಯೋಗಿಗಳ ಗೌರವಕ್ಕೆ ಒಂದು ಘಟನೆಯನ್ನು  ಸ್ಮರಿಸಿಕೊಳ್ಳುತ್ತೇನೆ. ಕವಿರತ್ನ ದ್ಯಾಂಪುರ ಚೆನ್ನ ಕವಿಗಳು ಒಂದೊಮ್ಮೆ ಶ್ರೀ ಕುಮಾರ ಶಿವಯೋಗಿಗಳನ್ನು ಹೊಗಳಿ ಬರೆದ ಪದ್ಯವನ್ನು ಶ್ರೀ ಕುಮಾರ ಶಿವಯೋಗಿಗಳ ಮುಂದೆ ವಾಚನ ಮಾಡಿದರು.ಹೊಗಳಿಕೆಯ ಹಾಡನ್ನು ಕೇಳಿ ಪ್ರಚಾರ ಪ್ರಿಯರಲ್ಲದ ಶ್ರೀ ಕುಮಾರ ಶಿವಯೋಗಿಗಳು ಕೋಪಿಸಿಕೊಂಡು “ಚೆನ್ನಯ್ಯ !! ಇದೇ ಎನು ನಿನ್ನ ಕವಿತ್ವದ ಸದುಪಯೋಗ ? ಸಾಮಾನ್ಯ ವ್ಯಕ್ತಿಯನ್ನು ಹೊಗುಳುವುದೆ? ಕೀರ್ತಿಸಲು ನಿನಗೆ ಶಿವಶರಣರಿಲ್ಲವೆ ? ಅಥಣಿ ಶಿವಯೋಗಿಗಳಂತಃ ಮಹಾತ್ಮರಿಲ್ಲವೆ ?  ಎಂದು ನುಡಿದ ಸನ್ನಿವೇಶ .ಕವಿಗಳು “ಎನ್ನೊಡೆಯ ತಪ್ಪಾಯ್ತು ಮನ್ನಿಸಬೇಕೆಂದು ಎಂದು ಕ್ಷಮೆಯಾಚಿಸಿದ ಪ್ರಸಂಗ ವನ್ನು ಸ್ವತಃ ದ್ಯಾಂಪುರ ಚೆನ್ನ ಕವಿಗಳು ೫-೩-೧೯೪೬ರಂದು ಶಿವಯೋಗಮಂದಿರದ ಜಾತ್ರೆಯ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ  ಪ್ರಾಣ ಬಿಡುವ ಕೊನೆಯ ಕ್ಷಣದಲ್ಲಿ ಹೇಳಿದ ಮಾತುಗಳು.

ಶ್ರೀ ಕುಮಾರ ಶಿವಯೋಗಿಗಳು ಶಿವಯೋಗಮಂದಿರದ ವಾತಾವರಣದಲ್ಲಿ ಬೆಳೆಯುವ ಪ್ರತಿಯೊಬ್ಬ ಸಾಧಕರಲ್ಲಿ ಅಥಣಿ ಶಿವಯೋಗಿಗಳ ವೈರಾಗ್ಯ ಮತ್ತು ಶಿವಯೋಗ ಸಾಧನೆ ಯನ್ನು ಕಾಣಲು ಅಪೇಕ್ಷೆಪಟ್ಟವರು ಮತ್ತು ಆ ಅಪೇಕ್ಷೆಯನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದೂ ಉಂಟು.

ಪೂಜ್ಯ ಅಥಣಿ ಶಿವಯೋಗಿಗಳು ಲಿಂಗೈಕ್ಯರಾದ (೧೯೨೧)ಸಂದರ್ಭದಲ್ಲಿ ಅಥಣಿಗೆ ದಯಮಾಡಿಸಿದ್ದ ಶ್ರೀ ಕುಮಾರ ಶಿವಯೋಗಿಗಳು ಶಿವಯೋಗಿಗಳ ಪಾರ್ಥಿವ ಶರೀರದ ಮುಂದೆ ನಿಂತು ಹಾಡಿದ ಮಂಗಳಾರತಿ ಹಾಡು  “ಕಂಗಳಾಲಯ ಸಂಗಗೆ “ ಹೃದಯದ ಹಾಡಾಗಿ ಪ್ರಸಿದ್ಧಿಯಾಗಿದೆ .

೧೯೨೮  ರಲ್ಲಿ ಧಾರವಾಡ ಮುರುಘಾಮಠ ದ ಲಿಂಗೈಕ್ಯ ಮೃತ್ಯುಂಜಯ ಅಪ್ಪಗಳು ಅಥಣಿಯ ಶಿವಯೋಗಿಗಳ ಪ್ರಾಣ ಕಳೆಯನ್ನು ಶಿಲಾಮೂರ್ತಿಯ ರೂಪದಲ್ಲಿ ಶ್ರೀಮುರುಘಾಮಠದಲ್ಲಿ ಪ್ರತಿಷ್ಠಾಪಿಸುವ ಸಂದರ್ಭದಲ್ಲಿ ಸಮಯ-ಸಮನ್ವಯದ ಸಂಕೇತವಾಗಿ ಶಿವಯೋಗಮಂದಿರದಿಂದ  ಶ್ರೀ ಕುಮಾರ ಶಿವಯೋಗಿಗಳನ್ನು ಆಮಂತ್ರಿಸಿ ಶ್ರೀ ಕುಮಾರ ಶಿವಯೋಗಿಗಳ ಹಸ್ತದಿಂದ ಪೂಜ್ಯ ಅಥಣಿ ಶಿವಯೋಗಿಗಳ ಶಿಲಾಮೂರ್ತಿಗೆ ಪೂಜೆ ಸಲ್ಲಿಸಿದ್ದು ಒಂದು ಐತಿಹಾಸಿಕ ಘಟನೆ.

 

( ಧಾರವಾಡ ಮುರುಘಾಮಠದಲ್ಲಿರುವ  ಪೂಜ್ಯ  ಅಥಣಿಯ ಶಿವಯೋಗಿಗಳ ಶಿಲಾಮೂರ್ತಿ )

ಇಂದಿಗೂ ಧಾರವಾಡದ ಶ್ರೀ ಮುರುಘಾಮಠ ದಲ್ಲಿ ಪೂಜ್ಯ ಅಥಣಿ ಶಿವಯೋಗಿಗಳು ಜಪ ಮಾಡಲು ಬಳಸಿದ ರುದ್ರಾಕ್ಷಿ ಸರದ ಜೊತೆಗೆ ,ಚಿತ್ರದುರ್ಗದ ಲಿಂಗೈಕ್ಯ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳು ಧರಿಸಿದ ವಿಭೂತಿ ಮತ್ತು ಶ್ರೀ ಕುಮಾರ ಶಿವಯೋಗಿಗಳು ಧರಿಸಿದ ವಿಭೂತಿಯನ್ನು ಸಂಗ್ರಹಿಸಿ ಜತನದಿಂದ ಕಾಪಾಡಿಕೊಂಡು ಬಂದಿರುವದು ವಿಭೂತಿಪುರುಷರ ಅವಿನಾಭಾವ ಸಂಬಂಧದ ಸಂಕೇತದ ಕುರುಹುಗಳೆಂದೇ ಎಂದು ಭಾವಿಸುತ್ತೇನೆ

 

.

(ವಿಭೂತಿಪುರುಷರ ಅವಿನಾಭಾವ ಸಂಬಂಧದ ಸಂಕೇತದ ಕುರುಹುಗಳು)

ಪೂಜ್ಯ ಅಥಣಿ ಶಿವಯೋಗಿಗಳ ಸ್ಮರಣೋತ್ಸವ ವಿಶೇಷ ಸಂಚಿಕೆಗೆ ತಮ್ಮ ಅಮೂಲ್ಯ ಲೇಖನಗಳನ್ನು ಕೊಟ್ಟ

ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.ಮುಂಡರಗಿ.

ಪೂಜ್ಯಶ್ರೀ ಜಗದ್ಗುರು ತೋಂಟದ ಡಾ . ಸಿದ್ಧರಾಮ ಸ್ವಾಮಿಗಳು ,ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ

ಪರಮಪೂಜ್ಯ .ಮ.ನಿ.ಪ್ರ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮುರುಘಾಮಠ ಧಾರವಾಡ (ಸಂಗ್ರಹ ಸಹಾಯ: ಲಿಂಗೈಕ್ಯ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮುರುಘಾಮಠ ಚಿತ್ರದುರ್ಗ ಲೇಖನ).

ಪೂಜ್ಯ ಪ್ರಭು ಚೆನ್ನಬಸವ ಸ್ವಾಮಿಗಳು ಮೋಟಗಿ ಮಠ ಅಥಣಿ

ಪೂಜ್ಯ ಮುಪ್ಪಿನ ಬಸವಲಿಂಗ ದೇವರು ಶ್ರೀ ಅನ್ನದಾನೇಶ್ವರ  ಸಂಸ್ಥಾನ ಮಠ ಹಾಲಕೆರೆ

ಶ್ರೀ  ಡಾ.ಪಂಚಾಕ್ಷರಿ ಹಿರೇಮಠ  (ಗ್ರಂಥ ಋಣ : ಕೈವಲ್ಯ ಶ್ರೀ ಸರ್ಪಭೂಷಣ ಶಿವಯೋಗಿಗಳ  ಸ್ಮರಣ ಸಂಪುಟ)

ಶ್ರೀ ಲಿಂ. ಬಿ.ಡಿ.ಜತ್ತಿ  ಮಾಜಿ ರಾಷ್ಟ್ರಪತಿ ಗಳು ಭಾರತ ಸರಕಾರ  ಅವರ ಆತ್ಮ ಕಥೆ “ನನಗೆ ನಾನೇ ಮಾದರಿ”  ಪುಸ್ತಕ ದಿಂದ ಆಯ್ದ ಬರಹ

ಶ್ರೀ ಡಾ . ಬಿ . ಆರ್ . ಹಿರೇಮಠ (ಸುಕುಮಾರ : ಅಗಸ್ಟ ೨೦೦೨)

ಶ್ರೀ  ಡಾ . ಸಿದ್ದಣ್ಣ .ಬ . ಉತ್ನಾಳ (ಗ್ರಂಥ ಋಣ :ಚಿನ್ಮಯ ಚೇತನ ಶ್ರೀ ಮದಥಣಿ ಮುರುಘೇಂದ್ರ ಶಿವಯೋಗಿಗಳು)

ಶ್ರೀ ಪ್ರಕಾಶ ಗಿರಿಮಲ್ಲನವರ,

ಭಕ್ತಿಗೀತೆಯನ್ನು ಸಮರ್ಪಿಸಿದ ಚಿತ್ರದುರ್ಗದ ಕುಮಾರಿ ಚಿನ್ಮಯಿ ರೇವಣಸಿದ್ದಪ್ಪ ಹೆಗಡಾಳ ಹಾಗು ಮಂಗಳಾರತಿ ಯನ್ನು ಸಮರ್ಪಿಸಿದ ಶ್ರೀ ಸಿದ್ಧೇಂದ್ರಕುಮಾರ ಹಿರೇಮಠ ತುಮುಕೂರ ಅವರಿಗೆ,

ಪೂಜ್ಯರಿಗೆ ಮತ್ತು ಮಹನಿಯರಿಗೆ ತುಂಬು ಹೃದಯದ ಕೃತಜ್ಞತೆಗಳು.

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯ ಮುಪ್ಪಿನ ಬಸವಲಿಂಗ ದೇವರು ಶ್ರೀ ಅನ್ನದಾನೇಶ್ವರ  ಸಂಸ್ಥಾನ ಮಠ ಹಾಲಕೆರೆ ಹಾಗು ಪೂಜ್ಯ ಪರ್ವತ ದೇವರು ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

 

Related Posts