ಆಶೀರ್ವಚನ

ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ

ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು

ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.

ಶ್ರೀ ಜಗದ್ಗುರು  ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ

ಪೂಜ್ಯರ ಆಶೀರ್ವಚನ

     ಕೈಬರಹದ ಸುಕುಮಾರ ಪತ್ರಿಕೆಯು ಸಾಧಕರಿಂದ ಪ್ರಾರಂಭವಾಯಿತು. ೧೯೩೩ರಲ್ಲಿ ಶಿವಯೋಗಮಂದಿರಕ್ಕೆ ಆಗಮಿಸಿದ ಶತಾಯುಗಳಾದ ಸಿದ್ಧಗಂಗಾ ಸ್ವಾಮಿಗಳವರ ಅಮೃತ ನುಡಿಗಳು ಹೀಗಿವೆ

 “ಇದರಲ್ಲಿ ಇರುವ ಸಾಮಾಜಿಕ, ನೀತಿಬೋಧಕ ಹಾಗೂ ತಾತ್ವಿಕ ಲೇಖನಗಳು ಸಾಧಕರ ಅನುಪಮ ಶ್ರದ್ಧಾ, ಭಾಷಾಸೌಷ್ಠವ, ಕನ್ನಡ ಪ್ರೇಮ ಮತ್ತು ವಿದ್ಯಾ ನಿಪುಣತೆ ಇವುಗಳನ್ನು ಉತ್ಕಟವಾಗಿ ಸ್ಪಷ್ಟಿಕರಿಸುತ್ತದೆ. ಇದರಲ್ಲಿ ಬರೆದಿರುವ ಚಿತ್ರಗಳು ಮುದ್ದಾಗಿಯು ಮನೋಹರವಾಗಿಯೂ ಇವೆ. ಸಣ್ಣ ಸಣ್ಣ ಕವನಗಳು ಹೃದಯಂಗಮನವಾಗಿ ಮಹಾಮಂದಿರದ ಸನ್ನಿವೇಷದ ಮಹತ್ವವನ್ನು ವರ್ಣಿಸತಕ್ಕವಾಗಿವೆ,”

ಈ ಕೈಬರಹ ಸುಕುಮಾರ ಪತ್ರಿಕೆಯು ೧೯೫೦ ಶಿವರಾತ್ರಿಯ ಶುಭ ಸಂದರ್ಭದಲ್ಲಿ ಅಚ್ಚಿನ ಸ್ವರೂಪದಲ್ಲಿ ಪ್ರಕಟವಾಗಿದ್ದು ಎಲ್ಲರಿಗೂ ಸಂತೋಷವಾಯಿತು. ವೀರಶೈವ ಧರ್ಮಕ್ಕೆ ಸಮ್ಮಂದಿಸಿದ ಸಣ್ಣ ಪುಸ್ತಕಗಳನ್ನು ಪ್ರಕಟಿಸಬೇಕೆಂಬ ಶ್ರೀ ಹಾನಗಲ್ಲ ಕುಮಾರ ಶಿವಯೋಗಿಗಳವರ ಸತ್ಯ ಸಂಕಲ್ಪವು ಈಡೇರಿದಂತಾಯಿತು. ಈ ಪತ್ರಿಕೆಯು ಕೆಲವೇ ವರ್ಷಗಳಲ್ಲಿ ಪಂಡಿತರ, ಸಂಶೋಧಕರ, ಸಾಹಿತಿಗಳ ಮೆಚ್ಚುಗೆಗೆ ಪಾತ್ರವಾಯಿತೆಂದು ಹೆಮ್ಮೆಯೆನಿಸುತ್ತದೆ.

     ಈ ಸುಕುಮಾರ ಪತ್ರಿಕೆಯು ಅಂತರ್ಜಾಲದಲ್ಲಿ ಪ್ರಕಟವಾಗಲು ಶ್ರೀ ಹಾನಗಲ್ಲ ಕುಮಾರಶಿವಯೋಗಿ ಸೇವಾ ಸಮಿತಿ ನವದೆಹಲಿ ಇದರ ಅಧ್ಯಕ್ಷರು ಶ್ರೀ ಕುಮಾರೇಶನ ತತ್ವಗಳನ್ನು ದೇಶ ವಿದೇಶಗಳಲ್ಲಿ ಪ್ರಚಾರಪಡಿಸಬೇಕೆಂಬ ಪ್ರಬಲ ಹಂಬಲವಿರುವ ಆದರಣೀಯ ಶ್ರೀಕಂಠ ಚೌಕಿಮಠ ಇವರ ಪಾತ್ರ ಬಹಳ ಮಹತ್ವದ್ದಾಗಿದೆ. ಈ ಪತ್ರಿಕೆಯು ತೀರ್ವವಾಗಿ ಬೆಳೆದು ಅಂತರ್ಜಾಲದಲ್ಲಿ ತನ್ನದೆ ಆದ ವಿಶಿಷ್ಟ ಸ್ಥಾನವನ್ನು ಗಳಸಲೆಂದು ಹಾರೈಸುತ್ತೇವೆ.

Related Posts