ಸಂಪಾದಕೀಯ :ಪಥಿಕನ ಟಿಪ್ಪಣೆಗಳು

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

 

ಸಹೃದಯ ಓದುಗರಿಗೆ ,

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಇಂದು ಕನ್ನಡಿಗರೆಲ್ಲಾ ಒಟ್ಟಿಗೆ ಇದ್ದೇವೆ. ಇದಕ್ಕೆ ಕಾರಣ ಕರ್ನಾಟಕದ ಏಕೀಕರಣ. ಹೌದು.. ಈಗಿನ ಕರ್ನಾಟಕ 20ಕ್ಕೂ ಹೆಚ್ಚು ವಿವಿಧ ಪ್ರಾಂತ್ಯಗಳಾಗಿ ಹರಿದು ಹಂಚಿ ಹೋಗಿತ್ತು. ಮುಂದೊಂದು ದಿನ ದೊಡ್ಡ ದೊಡ್ಡ ಹೋರಾಟಗಳು ನಡೆದು ಕರ್ನಾಟಕ ಏಕೀಕರಣ ಆಗಿ ಕರ್ನಾಟಕ ರಾಜ್ಯ ಹುಟ್ಟಿಕೊಂಡಿತು.

ಏಕೀಕರಣ ಚಳುವಳಿ 19ನೇ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳು ಮಾತ್ರ ಇದ್ದವು.

ಛಿದ್ರ ಛಿದ್ರವಾಗಿ ಹರಿದು ಯಾವ್ಯಾವುದೋ ಪ್ರಾಂತ್ಯಗಳಿಗೆ ಸೇರಿದ್ದೆಲ್ಲವ್ರನ್ನೂ ಒಂದುಗೂಡಿಸಬೇಕು ಅನ್ನೋ ಕಲ್ಪನೆಯೇ ಒಂದು ಅದ್ಭುತವಾಗಿತ್ತು. ಆರಂಭದಲ್ಲಿ ಯಾರೂ ಕೂಡ ಇದಕ್ಕೆ ನೀರು ಮತ್ತು ಸೊಪ್ಪು ಹಾಕದಿದ್ದರೂ ಮುಂದೊಂದು ದಿನ ಕಲ್ಪನೆಗಳಿಗೆ ಹೊಸ ಬೇರು, ಚಿಗರು ಮೊಳಕೆಯೊಡೆಯುವ ಕಾಲ ಕೂಡ ಪರಿಪಕ್ವವಾಗಿತ್ತು.

ಈ ತಿಂಗಳ ಸುಕುಮಾರ ಸಂಚಿಕೆ ಈ ಇತಿಹಾಸದ ಮೇಲೊಂದು ಹೊಸ ಬೆಳಕನ್ನು ಚಲ್ಲುತ್ತಿದೆ, ಅದು ಕರ್ನಾಟಕದ ಏಕೀಕರಣಕ್ಕೆ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆ….

ಪೂಜ್ಯ ಹಾನಗಲ್ಲ  ಕುಮಾರ ಶಿವಯೋಗಿಗಳವರು ಕರ್ನಾಟಕ ಏಕೀಕರಣ ಎಂಬ ವಿಷಯದ ಮೇಲೆ ಹೋರಾಟ ಮಾಡದೇ ಇರಬಹದು .ಆದರೆ ಒಂದು ಕರ್ನಾಟಕದ ಬಹುಸಂಖ್ಯಾತ  ಸಮುದಾಯದ ಏಕಿಕರಣಕ್ಕೆ ಮಾಡಿದ ಹೋರಾಟ ಮತ್ತು ಅದರ ಫಲಶೃತಿಯ ಪರಿಣಾಮಗಳು ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆಗೆ ಅಂತರ್ಗಾಮಿಯಾಗಿ ಚೈತನ್ಯವನ್ನು ತುಂಬಿತು ಎನ್ನುವದರಲ್ಲಿ ಎರಡು ಮಾತಿಲ್ಲ.

ನವಂಬರ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಮಾನವಾ, ನೀನಾರೋ ? ಕಾಯಾ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೮ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕರ್ನಾಟಕದ ಏಕೀಕರಣಕ್ಕೆ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆ:ಲೇಖಕ ಶ್ರೀಕಂಠ.ಚೌಕೀಮಠ.
  4. ಪುರುಷಾರ್ಥ ಚತುಷ್ಟಯ : ಲೇಖಕರು ಪರಮಪೂಜ್ಯ ಶ್ರೀ ಜಗದ್ಗುರು ತೋಂಟದ ಡಾ.ಸಿದ್ಧರಾಮ ಮಹಾಸ್ವಾಮಿಗಳು, ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ.
  5. ತೋಂಟದ ಸಿದ್ಧಲಿಂಗ ಶಿವಯೋಗಿಗಳ  ಜೀವನ ಹಾಗೂ ಸಂದೇಶ ಲೇಖಕರು: ಡಾ. ವಿ. ಜಿ. ಪೂಜಾರ
  6. ಷಣ್ಮುಖ ಶಿವಯೋಗಿಗಳು; ಇತಿವೃತ್ತ ಮತ್ತು ಕೃತಿಗಳು : ಲೇಖಕರು ಡಾ||  ಸಿ .ನಾಗಭೂಷಣ
  7. ಪೂರ್ಣತ್ವಕಾರ ಶ್ರೀಷ.ಬ್ರ. ಲಿಂ ಡಾ||ಗುರುಸಿದ್ಧ ದೇವ ಶಿವಾಚಾರ್ಯ ಮಹಾಸ್ವಾಮಿಗಳು, ಲೇಖಕರು ಶ್ರೀ ಮಲ್ಲನಗೌಡ  ಹಿರೇಸಕ್ಕರಗೌಡ್ರ , ಗದಗ
  8. ಶ್ರೀ ಹಾನಗಲ್ಲ ಕುಮಾರೇಶ್ವರರ ಪದಗಳು ರಚನೆ: ಶ್ರೀ ವೇ. ಮೂ.ಲಿಂ.ಪಂಡಿತ ಚೆನ್ನಬಸವ ಶಾಸ್ತ್ರಿಗಳು.
  9. ಸುಕುಮಾರಗೆ ಸುಪ್ರಭಾತ. ರಚನೆ: ಡಾ. ಶಿವಯೋಗಿ ದೇವರು ಕಾರಂಜಿಮಠ ಬೆಳಗಾವಿ
  10. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

Related Posts