ಸಂಪಾದಕೀಯ :

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಶ್ರೀ ಡಿ.ಎಸ್‌ ಕರ್ಕಿಯವರ  ಶಿವಯೋಗಮಂದಿರ ಕುಇತು ಬರೆದ ಲೇಖನದ  ಸಾಲುಗಳು ಅತ್ಯಂತ ಅರ್ಥಪೂರ್ಣ ಮತ್ತು ಸುಂದರವಾಗಿವೆ

ಇದೋ ಮಂದಿರ ಶಿವಮಂದಿರ

ಶಿವಯೋಗದ ಮಂದಿರ

ಪ್ರಕೃತಿಯ ಪರಮಾನಂದದ

ಸುಧೆ ಸೂಸುವ ಚಂದಿರ

…….

ಶಿವಯೋಗಮಂದಿರ ! ಸುಂದರವಾದ ಸ್ಥಳಕ್ಕೆ ತುಂಬಾ ಸಮಂಜಸವಾದ ಹೆಸರು, ಶಿವ, ಯೋಗ, ಮಂದಿರ- ಈ ಮೂರರಲ್ಲಿ ನಮಗೆ ಮೂರೂ ಬೇಕು. ಮಹೇಶ್ವರನ ಹೆಸರುಗಳಲ್ಲಿ ‘ಶಿವ’ ಎಂಬ ಹೆಸರು ಎಷ್ಟು ಚಿಕ್ಕದೋ ಅಷ್ಟೇ ಅರ್ಥಪೂರ್ಣವಾದುದು. ಸತ್ಯಂ, ಶಿವಂ ಸುಂದರಂ-ಎಂಬ ಜೀವನದ ಸರ್ವೋತ್ಕೃಷ್ಟ ತತ್ವಗಳಲ್ಲಿ ‘ಶಿವ’ ಶಬ್ದವು ಮಧ್ಯವರ್ತಿಯಾಗಿ, ಎಂದರೆ ಸತ್ಯವನ್ನು ಸೌಂದರ್ಯವನ್ನು ಸಮರಸಗೊಳಿಸುವ ಶುಭ ಸತ್ವವಾಗಿ ಸಮಾವೇಶವಾಗಿದೆಯೆಂಬುದನ್ನು ನೆನೆಯಬೇಕು. ಮಹಾದೇವನ ಮಂಗಲಮಯವಾದ, ಕರುಣಾ ಪೂರ್ಣವಾದ ಮಹೋನ್ನತವಾದ ಸ್ವರೂಪವನ್ನು ‘ಶಿವ’ ಶಬ್ದವು ಎರಡೆಂದರೆ ಎರಡೇ ಅಕ್ಷರಗಳಲ್ಲಿ ನಿರೂಪಿಸುತ್ತದೆ. ‘ಶಿವ’ ಶಬ್ದಕ್ಕೆ ‘ಶುಭ’ ಎಂಬ ಅರ್ಥವೂ ಉಂಟು. ಹೀಗೆ ಶುಭದಿಂದ ಪ್ರಾರಂಭವಾಗುತ್ತದೆ ‘ಶಿವಯೋಗಮಂದಿರದ ಹೆಸರು ಶುಭಕ್ಕೆ ‘ಯೋಗ’ದ ಯೋಗ ದೊರೆತು ಆನಂದದ ಆಗರವಾದಂತಿದೆ ಶಿವಯೋಗಮಂದಿರ.

ಶಿವಯೋಗಮಂದಿರದ ರಚನೆಗಾಗಿ ಸುಂದರವಾದ ಸನ್ನಿವೇಶವನ್ನು ಆಯ್ದ ಪ್ರತಿಭೆ ಸಾಮಾನ್ಯವಾದುದಲ್ಲ. 

ಸೌಂದರ್ಯರ್ಯಾನುಭವವನ್ನು ಶಿವಾನುಭವವನ್ನು ತನ್ನಲ್ಲಿ ಸಮರಸಗೊಳಿಸಿಕೊಂಡ ಪ್ರತಿಭೆಯದು. ಅದು  ಹಾನಗಲ್ಲ ಕುಮಾರ ಸ್ವಾಮಿಗಳಮಹಾ ವ್ಯಕ್ತಿತ್ವವನ್ನು ಬೆಳಗಿದ ಪ್ರತಿಭೆ……

ಶ್ರೀಕುಮಾರ ತರಂಗಿಣಿ  ೨೦೨೩ ಜೂನಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ ಬೋಧವ ಕೊಡು ದೇವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-25 : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕಾರುಣಿಕ ಯುಗಪುರುಷ ಧಾರವಾಹಿ : ಭಾಗ 3 ಉದಂತ ಉದಯ, ಉಜ್ವಲಂತ ಉತ್ಕ್ರಮಣ: ಲೇಖಕರು: ಪೂಜ್ಯ ಜ.ಚ.ನಿ
  4. ನೇಮ-ನಿತ್ಯ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಸುಕುಮಾರ ಗುರುಕುಮಾರ ನಿವೇದನ ಕಾವ್ಯ : ರಚನೆ: ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು.ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ.
  6. ಧ್ಯಾನ ಮತ್ತು ಅನುಷ್ಠಾನ : ಲೇಖಕರು : ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು
  7. ದಯಾನಿಧಿ ಹಾನಗಲ್ಲ ಶ್ರೀ ಕುಮಾರೇಶ : ಲೇಖಕರು: ಚಿಂದೋಡಿ ಬಂಗಾರೇಶ.ರಂಗಭೂಮಿ ಕಲಾವಿದರು,ಚಿತ್ರ ನಿರ್ದೇಶಕ ಕಲಾವಿದರು,ರಾಜ್ಯ ಪ್ರಶಸ್ತಿ ಪುರಸ್ಕೃತರು
  8. ಆಡಿಯೋ೧ :
  9. ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ)  ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗೆ ಲೋಕಾರ್ಪಣೆಯ ಸವಿನೆನಪು
  10. ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ
  11. ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು
  12. ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.
  13. ಶ್ರೀ ಜಗದ್ಗುರು  ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ
  14. ಪೂಜ್ಯರ ಆಶೀರ್ವಚನ ೧೪-೦೫-೨೦೨೧
  15. ಆಡಿಯೋ ೨ : ವಿಶೇಷ ಉಪನ್ಯಾಸ ಪೂಜ್ಯ ಶ್ರೀಕುಮಾರೇಶ್ವರರು ಗೌರವಿಸಿದ ಮಹನಿಯರು” 

               ಪರಮಪೂಜ್ಯ ಶ್ರೀ ಅಭಿನವ ಸಿದ್ಧಾರೂಡ  ಮಹಾಸ್ವಾಮಿಗಳಿಂದ  ಶಾಂತಾಶ್ರಮ ಹುಬ್ಬಳ್ಳಿ.

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

Related Posts