“ಅಟ್ಯಾಕ” ಅನ್ನುವುದು ಬಸವ ಭಾಷೆಯೆ ?

“ಅಟ್ಯಾಕ” ಅನ್ನುವುದು ಬಸವ ಭಾಷೆಯೆ ?

ಲೇಖಕ:ಶ್ರೀಕಂಠ.ಚೌಕೀಮಠ

ಕಳೆದ ಹಲವು ತಿಂಗಳುಗಳಿಂದ ಕರ್ನಾಟಕದಲ್ಲಿ “ವಚನ ದರ್ಶನ” ಎಂಬ ಪುಸ್ತಕದ ಪ್ರಚಾರ ಮತ್ತು ಆ ಪುಸ್ತಕಕ್ಕೆ ಪ್ರತಿಯಾಗಿ  “ವಚನದರ್ಶನ ಮಿಥ್ಯ -ಸತ್ಯ” ಪುಸ್ತಕದ ಪ್ರಚಾರಗಳನ್ನು ನಾವೆಲ್ಲ ನೋಡುತ್ತ ಬಂದಿರುತ್ತೇವೆ.

ಒಂದು ಪುಸ್ತಕ ಅದರ ಒಳತಿರಳು  ತಪ್ಪು ಗ್ರಹಿಕೆಯಿಂದ ಕೂಡಿದೆ ಎಂಬ ಒಂದು ಗುಂಪಿನ ವಾದ ದ ಫಲಶೃತಿಯಾಗಿ ಆರಂಭವಾದ ಪ್ರತಿರೋಧಗಳು ಜಾಗತಿಕ ಲಿಂಗಾಯತ ಮಹಾಸಭಾ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ರಾಷ್ಟ್ರೀಯ ಬಸವದಳ, ಲಿಂಗಾಯತ ಸಂಘಟನೆ ಬಸವಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರ ಮೂಲಕ ಆರಂಭ ಗೊಂಡಿದ್ದನ್ನು ನಾವು ನೋಡುತ್ತ ಕೇಳುತ್ತ ಬಂದಿದ್ದೇವೆ.

ಇದೊಂದು ತಾತ್ವಿಕ ಹೋರಾಟ.

ಒಂದು ಪುಸ್ತಕದ ವಿಷಯಗಳನ್ನು ವಿರೋಧಿಸುವ ಮತ್ತು ಅದಕ್ಕೆ ಪೂರಕವಾದ ವಿವರಣೆ ನೀಡುವ ಒಂದು ಅರ್ಥದಲ್ಲಿ  ಆರೋಗ್ಯಕರ ಚಳುವಳಿ.

ಆದರೆ ಈ ಆರೋಗ್ಯಕರ ಚಳುವಳಿಯ ಪ್ರತಿರೋಧದಲ್ಲಿ ಮೊನ್ನೆ ೨೨-೦೪-೨೦೨೫ ರಂದು ಬೆಳಗಾವಿಯಲ್ಲಿ ಜರುಗಿದ  “ವಚನ ದರ್ಶನ ಮಿಥ್ಯ VS ಸತ್ಯ” ಪುಸ್ತಕದ ಕುರಿತಾದ ಕಾರ್ಯಕ್ರಮದಲ್ಲಿ ಗದುಗಿನ ಕೆ.ವಿ.ಎಸ್.ಆರ್‌ ಪದವಿ ಪೂರ್ವ ಕಾಲೇಜಿನ ನಿವೃತ್‌ ಇಂಗ್ಲಿಷ್‌ ಭಾಷೆಯ ಪ್ರಾದ್ಯಾಪಕ ಮತ್ತು ವಚನ ಟಿ,ವಿಯ ಮುಖ್ಯಸ್ಥ ಸಿದ್ದು .ಬ. ಯಾಪಲಪರ್ವಿ ಎನ್ನುವವರು ಅನಾರೋಗ್ಯಕರ ವಾತವರಣ ವನ್ನು ಸೃಷ್ಠಿಸಿದ್ದು ಖಂಡನೀಯ.

ಕಾರ್ಯಕ್ರಮ “ವಚನ ದರ್ಶನ ಮಿಥ್ಯ VS ಸತ್ಯ” ಪುಸ್ತಕಕ್ಕೆ ಸೀಮಿತವಾಗಿದ್ದರೂ ಅನಾವಶ್ಯಕವಾಗಿ ಪುಸ್ತಕಕ್ಕೂ ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳಿಗೂ ಯಾವುದೇ ಸಂಬಂಧವಿಲ್ಲದಿದ್ದರೂ  ಪರಮಪೂಜ್ಯರ ಹೆಸರನ್ನು ಪ್ರಸ್ಥಾಪಿಸಿ : “ಪಂಚಾಚಾರ, ಗಣಾಚಾರದ ಹೆಸರಿನಲ್ಲಿ ಹಾನಗಲ್ಲ ಕುಮಾರ ಸ್ವಾಮಿಗಳ ಮೇಲೆ ಅಟ್ಯಾಕ್ ಮಾಡಿದ ಕೂಡಲೇ ‘ಪಾಪ’ ಕೆಲವರಿಗೆ ನೋವಾಗುತ್ತದೆ, ಅದನ್ನ ಜೆಎಲ್‌ಎಂ ಮತ್ತು ಮಠಾಧೀಶರ ಒಕ್ಕೂಟ ಕ್ಲಿಯರ್ ಮಾಡಲಿ.” ಎಂದು ಮಾತನಾಡುತ್ತ ಈ ಕೆಳಗಿನ ಸಾಲುಗಳ ಮೂಲಕ ಜೆಎಲ್‌ಎಂ ಮತ್ತು ಮಠಾಧೀಶರ ಒಕ್ಕೂಟಕ್ಕೆ ಫತ್ವಾ ಹೊರಡಿಸಿರುವರು

  1. “ಪಂಚಾಚಾರ, ಗಣಾಚಾರದ ಹೆಸರಿನಲ್ಲಿ ಹಾನಗಲ್ಲ ಕುಮಾರ ಸ್ವಾಮಿಗಳ ಮೇಲೆ ಅಟ್ಯಾಕ್ ಮಾಡಿದ ಕೂಡಲೇ ‘ಪಾಪ’ ಕೆಲವರಿಗೆ ನೋವಾಗುತ್ತದೆ, ಅದನ್ನ ಜೆಎಲ್‌ಎಂ ಮತ್ತು ಮಠಾಧೀಶರ ಒಕ್ಕೂಟ ಕ್ಲಿಯರ್ ಮಾಡಲಿ.”
  2. “ಏನು ಸಂಸ್ಕೃತ ವ್ಯಾಮೋಹ ಕೇವಲ ಹಾನಗಲ್ಲ ಕುಮಾರ ಸ್ವಾಮಿಗಳಿಗೆ ಇತ್ತೋ?”
  3. “ಶಿವಯೋಗಮಂದಿರದ ಟೆಕ್ಸ್ಟ್ ಬುಕ್ ಏನು?”
  4. “ಅಲ್ಲಿ ಬಸವಣ್ಣನಿಗೆ ಅಪಮಾನ ಮಾಡಿದ ವ್ಯಕ್ತಿಯ ಟೆಕ್ಸ್ಟ್ ಬುಕ್ ಇದೆ. ಅದು ಯಾಕೆ ಇಡಬಾರದು ಅನ್ನೋದನ್ನ ನಾವು ಚರ್ಚಿಸೋಣ. .”

ಜೆಎಲ್‌ಎಂ ಸಂಘಟನೆಯ ಸಿದ್ದು ಯಾಪಲಪರ್ವಿ ಯ  “ಅಟ್ಯಾಕ” ಎನ್ನುವ ಈ  ಭಯೋತ್ಪಾದಕ ಶಬ್ಧಕ್ಕೆ ನನ್ನ ಮೂಲ ಭೂತ ಪ್ರಶ್ನೆ.

  1. ಸಾರ್ವಜನಿಕವಾಗಿ “ಪಂಚಾಚಾರ, ಗಣಾಚಾರದ ಹೆಸರಿನಲ್ಲಿ ಹಾನಗಲ್ಲ ಕುಮಾರ ಸ್ವಾಮಿಗಳ ಮೇಲೆ ಅಟ್ಯಾಕ್ ಮಾಡಿದ ಕೂಡಲೇ ‘ಪಾಪ’ ಕೆಲವರಿಗೆ ನೋವಾಗುತ್ತದೆ, ಅದನ್ನ ಜೆಎಲ್‌ಎಂ ಮತ್ತು ಮಠಾಧೀಶರ ಒಕ್ಕೂಟ ಕ್ಲಿಯರ್ ಮಾಡಲಿ.” ಎಂದು ಹೇಳಲಿಕ್ಕೆ ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರು ಮಾಡಿದ ಅಪರಾಧ ವೇನು ? .

ಸಮಾಜಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ ಮಹಾನ್‌ ಸಂತನಮೇಲೆ ಸಿದ್ದು ಯಾಪಲಪರ್ವಿಯಂತವರು ಮಾತನಾಡುವ ಮುನ್ನ ಜಾಗೃತ ಅವಸ್ಥೆಗೆ ಬಂದು ಎಚ್ಚರದಿಂದ  ಮಹಾತ್ಮರ ಬಗ್ಗೆ ಮಾತನಾಡಲಿ.

  1. ಪೂಜ್ಯರ ಭೌತಿಕ ಶರೀರ ಮಹಾಲಿಂಗದಲ್ಲಿ ಐಕ್ಯವಾಗಿ ೯೫ ವರ್ಷ ಕಳೆದರೂ ಪೂಜ್ಯರ ಮೇಲೆ “ಅಟ್ಯಾಕ್” ಎನ್ನುವ ಶಬ್ಧದ ಪ್ರಯೋಗ ಎಷ್ಟು ಸಮಂಜಸ ?‘ಪಾಪ’ ಕೆಲವರಿಗೆ ನೋವಾಗುತ್ತದೆ ಎಂದು ಹೇಳಿದ ಸಿದ್ದು .ಬ. ಯಾಪಲಪರ್ವಿಯವರಿಗೆ ಈ ಮೂಲಕ ತಿಳಿಸುವದೇನೆಂದರೆ ಇದು  ಕುಮಾರೇಶನ  ಅನುಯಾಯಿಗಳ ಬರೀ ನೋವಲ್ಲ ರಕ್ತ ಕ್ರಾಂತಿಗೆ,  ಸಿದ್ದು .ಬ. ಯಾಪಲಪರ್ವಿ  ಹಾಕಿದ ಮುನ್ನುಡಿ ಮತ್ತು ಈ ಮೂಲಕ ಉದ್ಭವವಾಗುವ ಎಲ್ಲ ಅಹಿತಕರ ಘಟನೆಗಳಿಗೆ ಈ ಕಾರ್ಯಕ್ರಮದ ಸಂಘಟಕರಾದ ಜೆಎಲ್‌ಎಂ ಮತ್ತು ಮಠಾಧೀಶರ ಒಕ್ಕೂಟ ನೇರ ಹೊಣೆಯಾಗುತ್ತಾರೆ.

 

  1. “ಏನು ಸಂಸ್ಕೃತ ವ್ಯಾಮೋಹ ಕೇವಲ ಹಾನಗಲ್ಲ ಕುಮಾರ ಸ್ವಾಮಿಗಳಿಗೆ ಇತ್ತೋ?” ಎಂದು ಕೇಳುವ ಈ ಇಂಗ್ಲೀಷ ಪ್ರಾಧ್ಯಾಪಕರಿಗೆ ಪಿತ್ತ ನೆತ್ತಿಗೇರಿದಂತೆ ಕಾಣುತ್ತದೆ.ತಾನು ಪಾಶ್ಚ್ಯಾತ್ಯ ಭಾಷೆ ಇಂಗ್ಲೀಷ ಓದಿದರೆ ಮತ್ತು ಕಲಿಸಿದರೆ  ನಡೆಯುತ್ತದೆ ಆದರೆ ಜನ ಭಾರತದ ಮೂಲ ಭಾಷೆ ಸಂಸ್ಕೃತ ಓದಿದರೆ ಮತ್ತು ಓದಿಸಿದರೆ  ಅಪರಾಧವೆಂಬಂತೆ ವ್ಯಂಗವಾಗಿ ಮಾತನಾಡಿರುವ  ಸಿದ್ದು ಯಾಪಲಪರ್ವಿ  ಆಯಾ ಕಾಲ ಘಟ್ಟದ ಭಾಷಾ ಅಧ್ಯಯನ ಆಯಾ ಕಾಲಘಟ್ಟದ ಅನಿವಾರ್ಯತೆಯಿಂದಲೇ ನಡೆಯುತ್ತದೆಯೇ ಹೊರತು ವಯಸ್ಸು ಮುಚ್ಚಿಕೊಳ್ಳಲು  ಬಳಸುವ ಹೇರ ಡ್ರೈಯರ ಬಣ್ಣದಂತಲ್ಲ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳತಕ್ಕದ್ದು.

ಸಂಸ್ಕೃತ ಭಾಷೆಯ ಅಧ್ಯಯನವನ್ನು ಅಪಹಾಸ್ಯಗೊಳಿಸುವ ಪ್ರಯತ್ನವು ಜ್ಞಾನದ ಮೇಲೆ ಬೀರುವ ಅಪಮಾನವಾಗಿದೆ. ಸಿದ್ದು ಯಾಪಲಪರ್ವಿ   ಪಾಶ್ಚಾತ್ಯ ಭಾಷೆಯ ಅಧ್ಯಾಪಕರಾಗಿದ್ದರೂ, ಭಾರತೀಯ ಭಾಷೆಗಳ ವಿರುದ್ಧ ಅಭಿಮಾನ ಕೊರತೆಯು ಗಂಭೀರ ವಾದುದ್ದು.

  1. ಶಿವಯೋಗಮಂದಿರದ ಟೆಕ್ಸ್ಟ್ ಬುಕ್ ಏನು ? ಎಂದು ಪ್ರಶ್ನಿಸಿದ ಸಿದ್ದು ಯಾಪಲಪರ್ವಿ    ಶಿವಯೋಗಮಂದಿರದ ಹಲವು ಪ್ರಕಟಣೆಗಳಲ್ಲಿ ಶಿವಯೋಗಮಂದಿರದ ಅಧ್ಯಯನದ ಕುರಿತು ಅಲ್ಲಿ ಬಳಸುವ ಪಠ್ಯಪುಸ್ತಕಗಳ ಕುರಿತು ಪಾರದರ್ಶಕವಾಗಿ ಸಾರ್ವಜನಿಕಗೊಳಿಸಿದ್ದರೂ ಮತ್ತು ೨೨-೦೪-೨೦೨೫ ರಂದು ಬೆಳಗಾವಿಯಲ್ಲಿ ಜರುಗಿದ  ಕಾರ್ಯಕ್ರಮದ ನೇತೃತ್ವವನ್ನು ಶ್ರೀ ಶಿವಯೋಗಮಂದಿರದ ಸಾಧಕರೇ ವಹಿಸಿದ್ದರೂ  ಶಿವಯೋಗಮಂದಿರದ ಪಠ್ಯಪುಸ್ತಕಗಳ ಕುರಿತು ಗುಮಾನಿ ಮತ್ತು ಅನುಮಾನ ವ್ಯಕ್ತಪಡಿಸಿದ್ದು ಕುಚೋದ್ಯತನವೇ ಹೊರತು ಬೇರೆ ಏನೂ ಇಲ್ಲ.ಅವುಗಳ ಕುರಿತು ಜನಸಮ್ಮುಖದಲ್ಲಿ ಶಂಕೆ ವ್ಯಕ್ತಪಡಿಸುವುದು ದುರಭಿಪ್ರಾಯದಿಂದ ಕೂಡಿದ ನಡೆ.

 

  1. “ಅಲ್ಲಿ ಬಸವಣ್ಣನಿಗೆ ಅಪಮಾನ ಮಾಡಿದ ವ್ಯಕ್ತಿಯ ಟೆಕ್ಸ್ಟ್ ಬುಕ್ ಇದೆ. ಅದು ಯಾಕೆ ಇಡಬಾರದು ಅನ್ನೋದನ್ನ ನಾವು ಚರ್ಚಿಸೋಣ. .” ಎಂದು ಹೇಳಿದ ಸಿದ್ದು .ಬ. ಯಾಪಲಪರ್ವಿಯವರ ವಿಚಿತ್ರ ಆಪಾದನೆ. ಇಷ್ಟೆಲ್ಲಾ ಸಾರ್ವಜನಿಕವಾಗಿ ಮಾತನಾಡಿ ಅಡ್ಡಗೋಡೆಯ ಮೇಲೆ ದೀಪವನ್ನಿಟ್ಟಂತೆ  ಸಾರ್ವಜನಿಕರಲ್ಲಿ ಶಿವಯೋಗಮಂದಿರದ ಬಗೆಗೆ ತಪ್ಪು ಕಲ್ಪನೆ ಬರುವಂತೆ ಪ್ರಚೋದನೆ ಮಾಡುವದಕ್ಕಿಂತ ಬದಲು ನೇರವಾಗಿ ಪುಸ್ತಕದ ಹೆಸರು ಮತ್ತು ಲೇಖಕನ ಹೆಸರು ಹೇಳಬಹುದಿತ್ತಲ್ಲವೆ?

 

  1. ಸಿದ್ದು ಯಾಪಲಪರ್ವಿ ಸದಸ್ಯರಾಗಿರುವ  ಜೆಎಲ್‌ಎಂ, ಬಸವಣ್ಣನವರ ವಚನನಾಮಾಂಕಿತ ವನ್ನೇ ಬದಲಿಸಿದವರ ಜೊತೆ ವೇದಿಕೆ ಹಂಚಿಕೊಂಡಿದ್ದನ್ನು ಮತ್ತು ಬಸವಣ್ನನವರ ಪತ್ನಿ ನೀಲಾಂಬಿಕೆ ವಚನ “ನೋಡು ನೋಡು ಲಿಂಗವೇ “ ವನ್ನೆ ಅಪಾರ್ಥ ಮಾಡಿದ,ಸಂಶೋದಕ ,ಚನ್ನಬಸವಣ್ಣ ನವರ ಜನನವನ್ನೇ ಅಪವಿತ್ರ ಗೊಳಸಿದ ವರನ್ನು ಒಪ್ಪಿಕೊಂಡು ಅವರ ಸಂಶೋದನೆಗಳನ್ನೆ ಹೊತ್ತು ಮೆರೆಸುವ ಜೆಎಲ್‌ಎಂ  ಕುರಿತು ಮೊದಲು ಚಿಂತಿಸಲಿ, ನಂತರ ಶತಮಾನದ ಇತಿಹಾಸ ವಿರುವ ಶಿವಯೋಗಮಂದಿರದ ಬಗ್ಗೆ ಮಾತನಾಡಲಿ.

 

ಈ ಮೂಲಕ ಇಂಥ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು  ಲಿಂಗಾಯತ ಮಠಾಧಿಪತಿಗಳ ಒಕ್ಕೂಟಕ್ಕೆ ನನ್ನ ಕಳಕಳಿಯ ಮನವಿ.ಇಂಥಹ ಅಚಾತುರ್ಯದ ಘಟನೆಗಳು ಮರುಕಳಿಸುವುದೇ ಆದಲ್ಲಿ ದಯವಿಟ್ಟು ಅದನ್ನು ಮುಂಚಿತವಾಗಿ  ಕಾರ್ಯಕ್ರಮದ  ಹಿಡನ್ನ ಅಜೆಂಡಾ ವನ್ನು ದಯವಿಟ್ಟು ಸಾರ್ವಜನಿಕವಾಗಿ ಬಹಿರಂಗಗೊಳಿಸಿ.

“ವಚನದರ್ಶನ ಮಿಥ್ಯ -ಸತ್ಯ ಎಂಬ ಪುಸ್ತಕದ ಹೆಸರಿನಲ್ಲಿ ಹಾನಗಲ್ಲ ಶ್ರೀ ಕುಮಾರೇಶ್ವರರ ನಿಂದನೆಯನ್ನು ಶಿವಯೋಗಮಂದಿರದ ಸಾಧಕ ಮಠಾಧಿಪತಿಗಳು ಶ್ರೀ ಕುಮಾರೇಶನ ಭಕ್ತ ಸಂಕುಲ ಒಪ್ಪಿಕೊಳ್ಳಲು ಸಾಧ್ಯವಿಲ್ಲ..

ಜಾಗತಿಕ ಲಿಂಗಾಯತ ಮಹಾಸಭಾ ಮತ್ತು  ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಿದ್ದು ಯಾಪಲಪರ್ವಿ ಮೂಲಕ ಆಡಿಸಿದ ಈ  ರೀತಿಯ ತುಚ್ಛ ಮಾತುಗಳನ್ನು ಸಹಿಸಲು ಇನ್ನು ಸಾಧ್ಯವಿಲ್ಲ.

ಈ ರೀತಿಯ ಶಬ್ದಪ್ರಯೋಗಗಳು, ವಿಶೇಷವಾಗಿ “ಅಟ್ಯಾಕ್” ಎಂಬ ಕ್ರೂರ ಪದದ ಬಳಕೆ, ಭಯೋತ್ಪಾದಕ ಛಾಯೆಯ ಮಾತುಗಳು ಸಮಾಜದಲ್ಲಿ ಭಾವನಾತ್ಮಕವಾಗಿ ತೀವ್ರ ಪ್ರತಿಕ್ರಿಯೆ ಉಂಟುಮಾಡಬಲ್ಲವು ಮತ್ತು ಭವಿಷ್ಯದಲ್ಲಿ ಶಾಂತಿಗೆ ಧಕ್ಕೆಯುಂಟುಮಾಡುವ ಆತಂಕವಿದೆ.

ವಚನ ಸಂಸ್ಕೃತಿಯ ಕುರಿತ ತಾತ್ವಿಕ ಚರ್ಚೆ ಮತ್ತು ಗ್ರಂಥಗಳ ಆಲೋಚನಾತ್ಮಕ ವಿಶ್ಲೇಷಣೆಗಳು, ಅರ್ಥಪೂರ್ಣ ರೀತಿಯಲ್ಲಿ ನಡೆಯುವುದು ಒಳ್ಳೆಯದು. ಆದರೆ, ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳವರ ನಾಮದೊಂದಿಗೆ ಯಾವುದೇ ಸಂಬಂಧವಿಲ್ಲದ ವಿಷಯವನ್ನು ಎಳೆದುಕೊಂಡು ಅವರು ಮೇಲೆಗೆ “ಅಟ್ಯಾಕ್” ಎಂಬ ಶಬ್ದವನ್ನು ಬಳಸುವುದು ನಿಜಕ್ಕೂ ಖಂಡನೀಯ.

ಈ ಕುರಿತು ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಮಠಾಧಿಪತಿಗಳ ಒಕ್ಕೂಟ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ಅಪೇಕ್ಷೆ ನಮ್ಮದಾಗಿದೆ. ಶತಮಾನದ ಪರಂಪರೆಯ ಘನತೆಯ ರಕ್ಷಣೆಯೇ ನಮ್ಮ ಆಶಯ.ಇದಕ್ಕೆ ಸಂಬಂಧಪಟ್ಟಂತೆ ತ್ವರಿತ ಕ್ರಮಕೈಗೊಳ್ಳಲಾಗುವುದು ಎಂಬ ವಿಶ್ವಾಸವಿದೆ.

-ಶ್ರೀಕಂಠ.ಚೌಕೀಮಠ

ಸೇವಕ-ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿ ಮತ್ತು ಕರ್ನಾಟಕ

 

Related Posts