Editorial

ಶ್ರೀಕಂಠ.ಚೌಕೀಮಠ.

ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ೧೮೬೭-೧೯೩೦ ಕಾಲಮಾನ ಮತ್ತು ಅಂದಿನ ಸಮಾಜದ ಸ್ತಿತಿ ಗತಿಗಳ ಬಗ್ಗೆ ವಿವರವಾದ ಸಂಗತಿಗಳ ಸಂಗ್ರಹ ಸಂಧರ್ಭದಲ್ಲಿ ಶ್ರೀ ಬಸವರಾಜ ಪುರಾಣಿಕ ಅವರ ಒಂದು ಲೇಖನ ಗಮನ ಸೆಳೆಯಿತು

ಶ್ರೀ ಕುಮಾರ ಶಿವಯೋಗಿಗಳ ಕಾಲವು ವೀರಶೈವ ಸ್ಥಿತಿಗತಿಗಳ ಶೋಚನೀಯ ಕಾಲವೂ ಹೌದು, ಸೌಭಾಗ್ಯದ ಕಾಲವೂ ಹೌದು ಎಂದೆನಬೇಕಾಗುತ್ತದೆ. ಹಲವಾರು ಆಂತರಿಕ ಹಾಗೂ ಬಾಹ್ಯ ಕಾರಣಗಳಿಂದಾಗಿ

ಸಮಾಜವು ಒಮ್ಮೆಲೇ ಮೈಕೊಡವಿಕೊಂಡು ಎಚ್ಚತ್ತು ವಿವೇಕಯುತವಾಗಿ ವರ್ತಿಸಿ ಸಮಾಜದ ನಿಶ್ಚಿತ ಗತಿ ಗಮನಗಳನ್ನು ಗುರುತಿಸಿಕೊಂಡುದು, ಸಕ್ರಿಯವಾಗಿ, ಸಾಂಘಿಕವಾಗಿ ಸಾಗಿ ಬಂದು ಸಾರ್ಥಕತೆಯ ನೆಲೆ ತಲುಪಿದುದನ್ನು ಇತಿಹಾಸವಿಂದು ತಿಳಿಯಪಡಿಸುತ್ತದೆ.

ಈ ಕಾಲ ಸಂದರ್ಭದ ವೀರಶೈವ ಸಮಾಜದಲ್ಲಿ ಅನೇಕ ಮಹನೀಯರು ಕಂಡುಬರುತ್ತಾರೆ.

ಗ್ರಂಥ ಪ್ರಚಾರ ಮಾಡಿದ ಮಹನೀಯರು ಕೆಲವರು,

ವಿದ್ಯಾಪ್ರಚಾರ ಮಾಡಿದ ಪುಣ್ಯಾತ್ಮರು ಕೆಲವರು

ತತ್ವೋಪದೇಶ ಮಾಡಿದವರು ಕೆಲವರು,

ಪಾಠಶಾಲೆಗಳನ್ನು ಸ್ಥಾಪಿದವರು ಕೆಲವರು,

ಯೋಗವಿದ್ಯೆಯನ್ನು ಕಲಿಸಿದವರು ಕೆಲವರು,

ಪರವಾದಿಗಳ ನಿಗ್ರಹ ಮಾಡಿದವರು ಕೆಲವರು,

ಸದಾಚಾರಕ್ಕೆ ಮಾರ್ಗದರ್ಶಕ ರಾದವರು ಕೆಲವರು,

ಸಮಾಜದ ಸಂಘಟನೆಗಾಗಿ ಪ್ರಯತ್ನಿಸಿದವರು ಕೆಲವರು,

ಸರ್ವಾರ್ಪಣ ಮಾಡಿದವರು ಕೆಲವರು,

ಜನರನ್ನು ಸಂಘಟಿಸಿ ಒಂದು ಧೈಯಕ್ಕೆ ಒಡ್ಡಿದವರು ಕೆಲವರು.

ಈ ಎಲ್ಲರನ್ನೂ ಇವೆಲ್ಲವನ್ನೂ ಸಾಧಿಸಿದ ಸಿದ್ಧಿಸಿದ ಏಕೈಕ ವ್ಯಕ್ತಿ ಎಂದರೆ ಹಾನಗಲ್ಲ ಶ್ರೀ ಕುಮಾರಸ್ವಾಮಿಗಳು,

 

ಶ್ರೀಗಳು ಕೀರ್ತಿಯನ್ನು ತಿರಸ್ಕರಿಸಿದರು. ಆದರೆ ಕೀರ್ತಿ ಅವರನ್ನು ಎಡಬಿಡದೆ ಪುರಸ್ಕರಿಸಿತು.

ಅವರು ಪಲ್ಲಕ್ಕಿಯನ್ನೇರಲಿಲ್ಲ. ಆದರೆ ಪಲ್ಲಕ್ಕಿಯನ್ನೇರಿದವರು ಇವರ ಸನ್ನಿಧಿಗೆ ಎರಗದಿರಲಿಲ್ಲ.

ಪರಮಾಶ್ಚರ್ಯ ದ ಸಂಗತಿಯೆಂದರೆ,

ಶ್ರೀಗಳ ೬೩ ವರ್ಷದ ಈ ಜೀವನ ಯಾತ್ರೆಯಲ್ಲಿ ಅವರು ಸಾರ್ವಜನಿಕ ರಂಗಕ್ಕೆ ಪ್ರವೇಶಿಸಿದ್ದು ತಮ್ಮ ೩೬ನೆಯ ಪ್ರಾಯಕ್ಕೆ, ಮುಂದಿನ ೨೭ ವರ್ಷದ ಆಯುಷ್ಯದ ಪ್ರತಿ ಕ್ಷಣವೂ ಅವರ ಪ್ರಾಣವೀಣೆ ಸಮಾಜೋನ್ನತಿಯ ರಾಗವನ್ನು ಹಾಡುತ್ತಿತ್ತು ಸಮಾಜದ ಏಳೆಯ ಬಯಕೆಯು ಅವರ ಹಸ್ತವು ಅವರ ಸನಿಹಕ್ಕೆ ಬರುತ್ತಿದ್ದ ಸಮರ್ಥ ವ್ಯಕ್ತಿ ತಂತಿಗಳನ್ನು ಮೀಟುತ್ತಿತ್ತು’ ಎಂಬ

ಜಚನಿಯವರ ಮಾತುಗಳು ಕಾವ್ಯಮಯವಾಗಿದ್ದರೂ ಶ್ರೀಗಳ ಅಂತಶ್ವೇತನದ ಚಿತ್ರವನ್ನೇ ನೀಡುತ್ತವೆ.


ಶ್ರೀಕುಮಾರ ತರಂಗಿಣಿ  ೨೦೨೪ ಫೆಭ್ರುವರಿ  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-32 : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ತಪೋಭೂಮಿ-ತತ್ವಪ್ರೇಮಿ “ಕಾರುಣಿಕ ಕುಮಾರಯೋಗಿ “ ಧಾರವಾಹಿ : ಲೇಖಕರು ಜ.ಚ.ನಿ.
  4. ಆಶೆ-ಆಮಿಷ;ಲೇಖಕರು :ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯಮಠ ಗದಗ.
  5. ಗುರುವಿನ ಅವಶ್ಯಕತೆ ನಮಗೆ ಏಕೆ ಬೇಕು : ಶ್ರೀ ಮ.ನಿ.ಪ್ರ.ಚನ್ನವೀರ ಮಹಾಸ್ವಾಮಿಗಳು ಹೂವಿನಶಿಗ್ಲಿ ಶ್ರೀ ವಿರಕ್ತಮಠ
  6. ಶ್ರೀ ಮೈಲಾರ ಬಸವಲಿಂಗ ಶರಣರ ದೃಷ್ಟಿಯಲ್ಲಿ ಅಷ್ಟಾವರಣ. ಸಂಗ್ರಹ -ಸಂಪಾದನೆ : ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

 

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣ ತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

 

 

-ಶ್ರೀಕಂಠ.ಚೌಕೀಮಠ.

ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

ಸಂಪಾದಕೀಯ:

ಶ್ರೀಕಂಠ.ಚೌಕೀಮಠ.

ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ಶ್ರೀಕುಮಾರ ತರಂಗಿಣಿ ,ವಿಶ್ವಾದ್ಯಂತ ೧೫೦೦೦ ಓದುಗರನ್ನು ಹೊಂದುವದರ ಜೊತೆಗೆ ,ವರ್ಣರಂಜಿತ ಶೋಭೆಯೊಂದಿಗೆ ತಮ್ಮ ಅಕ್ಷಿಪಟಲದ ಮುಂದೆ ಅನಾವರಣಗೊಳ್ಳುತ್ತಿರುವದು ಅತ್ಯಂತ ಹರ್ಷವನ್ನುಂಟು ಮಾಡುತ್ತಿದೆ.

ಹೊಸ ರೂಪದಲ್ಲಿ  “ಶ್ರೀಕುಮಾರ ತರಂಗಿಣಿ”ಬ್ಲಾಗ್‌ ಅನಾವರಣ ವನ್ನು

ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ  ಪೂಜ್ಯಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ  ಮಹಾಸ್ವಾಮಿಗಳವರು

ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ  ಹೊಸಪೇಟೆ-ಬಳ್ಳಾರಿ-ಹಾಲಕೆರೆ ಅವರ ಅಮೃತಹಸ್ತದಿಂದ ಜರಗಿತು.

ಶ್ರೀಕುಮಾರೇಶ್ವರರ  ಶಿಲ್ಪಸನ್ನಿಧಿಯಲ್ಲಿ, ನೂತನ ಶಿಲಾ ಮಠ ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ  ಹೊಸಪೇಟೆ

ಜರುಗಿದ ಈ ಕಾರ್ಯಕ್ರಮದಲ್ಲಿ

ಪೂಜ್ಯ. ಮ.ನಿ.ಪ್ರ.ಕೊಟ್ಟೂರು ಮಹಾಸ್ವಾಮಿಗಳು ಶ್ರೀ ಸಂಗನಬಸವೇಶ್ವರ ವಿರಕ್ತಮಠ ದರೂರು.

ಪೂಜ್ಯಶ್ರೀ ನಿರಂಜನ ಪ್ರಭು ದೇಶಿಕರು ಶ್ರೀ ಮಠ  ಕುರುಗೋಡು

ಪೂಜ್ಯಶ್ರೀ ಸಿದ್ದಲಿಂಗ ದೇಶಿಕರು ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇಶಿಕರು ಶ್ರೀಧರಗಡ್ಡೆ

ಪೂಜ್ಯ ಶ್ರೀ ಸಿದ್ದೇಶ್ವರ ದೇವರು ಬೂದಗುಂಪ .

ಪೂಜ್ಯಶ್ರೀ ವಿಶ್ವೇಶ್ವರ ದೇವರು ಅಡನೂರು. ಪೂಜ್ಯರು ಭಾಗವಹಿಸಿದ್ದರು

 

ಹೊಸರೂಪ ಮತ್ತು ಓದುಗರ ಪ್ರೋತ್ಸಾಹಗಳು ಶ್ರೀಕುಮಾರ ತರಂಗಿಣಿ ಯನ್ನು ಅರ್ಥಪೂರ್ಣವಾಗಿ ಹೊರಬರಲು ಸಹಾಯಕವಾಗಿವೆ.

 

 

ಶ್ರೀಕುಮಾರ ತರಂಗಿಣಿ  ೨೦೨೪ ಜನೆವರಿ  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಯೋಗಿವರೇಣ್ಯ ನಾನಪರಾಧಿ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೩೧ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಯೋಗ್ಯ ಗುರುವಿನ ಭಾಗ್ಯ “ಕಾರುಣಿಕ ಕುಮಾರಯೋಗಿ “ ಧಾರವಾಹಿ : ಲೇಖಕರು ಜ.ಚ.ನಿ.
  4. ಭಕ್ತಿ-ಮುಕ್ತಿ ;ಲೇಖಕರು :ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯಮಠ ಗದಗ.
  5. ಪದಾರ್ಥ ಮತ್ತು ಪ್ರಸಾದ:-ಲೇಖಕರು:- ಶ್ರೀ ಸಿದ್ದೇಶ್ವರ ದೇಶಿಕರು ಶ್ರೀ ಜಗದ್ಗುರು ಕೊಟ್ಟೂರು ಸ್ವಾಮಿ ಶಾಖಾಮಠ ಬೂದಗುಂಪ

 

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

 

 

-ಶ್ರೀಕಂಠ.ಚೌಕೀಮಠ.

ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

 

 

 

ಸಂಪಾದಕೀಯ :

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ಶ್ರೀಕುಮಾರ ತರಂಗಿಣಿ  ೨೦೨೩ ನವಂಬರ  ಸಂಚಿಕೆಯನ್ನು ಹೊಸರೂಪದಲ್ಲಿ ತಮಗೆ ಅರ್ಪಿಸಲು  ಅತ್ಯಂತ ಹರ್ಷವೆನಿಸುತ್ತದೆ.

೨೦೨೧ ಬಸವ ಜಯಂತಿ ಯಂದು ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.ಶ್ರೀ ಜಗದ್ಗುರು  ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ ಅವರ ಅಮೃತಹಸ್ತದಿಂದ ಆರಂಭಗೊಂಡ ಶ್ರೀಕುಮಾರ ತರಂಗಿಣಿ  ಬ್ಲಾಗ ಇಂದು ಪೂಜ್ಯಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳ ಅಮೃತಹಸ್ತದಿಂದ ಹೊಸ ರೂಪ ದೊಂದಿಗೆ ಅನಾವರಣಗೊಳ್ಳುತ್ತಿದೆ.

ಕನ್ನಡಿಗರ ಜೀವನವನ್ನೇ ತಮ್ಮ ದಿವ್ಯವಾದ ತಪೋತೇಜಸ್ಸಿನಿಂದ ಬೆಳಗಿ ಮುನ್ನಡೆಸಿ ಹೋದ ಕಾರಣಿಕ ಶ್ರೀ ಕುಮಾರಯೋಗಿಯ ಪುಣ್ಯ ಸ್ಮರಣೆಯ ನಮಗೆ ಸ್ಫೂರ್ತಿಯನ್ನು ನೀಡುವುದರಲ್ಲಿ ಸಂದೇಹವಿಲ್ಲ.

 ನಿರುತ್ಸಾಹದ ನಿಬ್ಬೆರಗಿನಲ್ಲಿರುವ ಇಂದಿನ ಕನ್ನಡದ ಮಣ್ಣಿಗೆ ಕಾಯಕಯೋಗಿ ಕುಮಾರೇಶ್ವರನ ನೆನಹು ಆಶಾದಾಯಕವಾದ ಹೊಸ ಜೀವರಸವನ್ನು ಕರೆಯುವುದರಲ್ಲಿ ಯಾವ ಅಭ್ಯಂತರವೂ ಇಲ್ಲ.

ಇಂಥ ಮಹಾಮಹಿಮರ ಜೀವನ ಚರಿತ್ರೆಯಿಂದ ನಾವಿಂದು ಬೆಳಕನ್ನು ತುಂಬಿಕೊಳ್ಳಬೇಕಾಗಿದೆ. ಕಾರ್ಯೋತ್ಸಾಹದ ಕಿಡಿಯನ್ನು ಹೊತ್ತಿಸಿಕೊಳ್ಳಬೇಕಾಗಿದೆ.  ಅವರಿತ್ತ ಆ ದಿವ್ಯ ಸಂದೇಶವು ಇಂದಿನವರಾದ ನಮಗೆ ಬಾಳಬಟ್ಟೆಯ ಪರಮಾಗಮ ವಾಗಿದೆ.

ಅಂತೆಯೇ ಇಂದು ಶ್ರೀಗಳ ಸವಿನೆನಹು ಭಾರತ ಹುಣ್ಣಿಮೆಯ ಬೆಳದಿಂಗಳಂತೆ ನಮ್ಮ ಬುವಿ ಬಾನುಗಳನ್ನು ತುಂಬಿ ಮೈಮನಗಳನ್ನು ಅರಳಿಸಿ  ಚೇತನಕಾರಿಯಾಗಿ ತೂರಿ ಬರುತ್ತದೆ.

2023 ಸಪ್ಟಂಬರ ಮತ್ತು ಅಕ್ಟೊಬರ ತಿಂಗುಳಗಳಲ್ಲಿ ಕರ್ನಾಟಕ,ಮಹಾರಾಷ್ಟ್ರ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳ ಗಡಿಪ್ರದೇಶಗಳಲ್ಲಿ ನಡೆದ ಶ್ರೀಕುಮಾರೇಶ್ವರರ ೧೫೬ನೆಯ ಜಯಂತಿ ಮಹೋತ್ಸವದ ಚಿತ್ರಸಂಪುಟ “ಶ್ರೀಕುಮಾರೇಶ್ವರ ವೈಭವ”

ಚಿತ್ರಸಂಪುಟದ ಸಂಗ್ರಹಕ್ಕೆ ಸಹಕರಿಸಿದ ಸಮಸ್ತ ಶ್ರೀಕುಮಾರೇಶ್ವರರ ಅಭಿಮಾನಿ ಭಕ್ತರಿಗೆ ತುಂಬುಹೃದಯದ ಕೃತಜ್ಞತೆಗಳು

 

ಶ್ರೀಕುಮಾರ ತರಂಗಿಣಿ  ೨೦೨೩ ನವಂಬರ  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ರೇವಣಸಿದ್ಧ ಗುರುದೇವ ಭಾವಜ ಹರಜೀವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೩೦ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ವೇದಾಂತಾಭ್ಯಾಸ-ಸಿದ್ಧಾಂತ ಹವ್ಯಾಸ “ಕಾರುಣಿಕ ಕುಮಾರಯೋಗಿ “ ಧಾರವಾಹಿ : ಲೇಖಕರು ಜ.ಚ.ನಿ.
  4. ನರಜನ್ಮ-ಹರಜನ್ಮ ಲೇಖಕರು :ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯಮಠ ಗದಗ

 

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

 

 

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

 

 

 

 

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ವಚನಪಿತಾಮಹ ಶ್ರೀ ಫ.ಗು.ಹಳಕಟ್ಟಿಯವರ  ಶಿವಾನುಭವ ಫೆ. ೧೯೩೦  ಅವರ ಸಂಪಾದಕೀಯ ಲೇಖನದ ಆಯ್ದ ಭಾಗ

ಸಮಾಜವು ಹಿಂದೆ ಬಿದ್ದ ಕಾಲಕ್ಕೆ ಅದನ್ನು ಮುಂದಕ್ಕೆ ದೂಡಲು ಒಬ್ಬಾನೊಬ್ಬನು ಮೊದಲು ಪ್ರವೃತ್ತನಾಗುತ್ತಾನೆ. ಅವನು ಈ ಪ್ರಕಾರ ಉದ್ಭವಿಸಿ ಅದಕ್ಕೆ ಯೋಗ್ಯ ದಾರಿಯನ್ನು ತೋರಿಸಿಕೊಡುತ್ತಾನೆ. ಆ ಮೇಲೆ ಅವನ ತರುವಾಯ ಅವನು ಹಾಕಿಕೊಟ್ಟ ಹಾದಿಯಂತೆ ಸಮಾಜವು ಕೆಲದಿವಸ ಹೋದ ಬಳಿಕ ಅದು ಪುನಃ ಸ್ತಬ್ಧವಾಗುವ ಪ್ರಸಂಗವು ಬರಲು ಮತ್ತೊಬ್ಬರು ಉತ್ಪನ್ನರಾಗಿ ಅದರಲ್ಲಿ ಹೊಸ ಚೈತನ್ಯವನ್ನು ಹುಟ್ಟಿಸುತ್ತಾರೆ. ಇಂಥವರೆಲ್ಲರೂ ಮಹಾವಿಭೂತಿಗಳೇಸರಿ. ಇಂಥವರ ವರ್ಗ ದಲ್ಲಿ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಇರುತ್ತಾರೆ.

ಶ್ರೀ, ಹಾನಗಲ್ಲ ಕುಮಾರ ಸ್ವಾಮಿಗಳು ಮುಂದಕ್ಕೆ ಬಂದು ವೀರಶೈವ ಸಮಾಜದಲ್ಲಿ ಧರ್ಮದ ನಿಜವಾದ ಸಂಸ್ಕೃತಿಯನ್ನು ಹಬ್ಬಿಸಲಿಕ್ಕೆ ಕಾರಣವಾದರು. ಧರ್ಮ ಸಂಸ್ಕೃತಿಯೇ ಸಮಾಜದ ತಳಹದಿಯಾಗಿರುತ್ತದೆಂದು ಭಾವಿಸಿ ಅದಕ್ಕೋಸ್ಕರವೇ ಅವರು ತಮ್ಮ ಇಡೀ ಆಯುಷ್ಯವನ್ನೇ ಅರ್ಪಿಸಿದರು.

ವೀರಶೈವ ಮಹಾಸಭೆಯು ಇರುವ ವರೆಗೆ ವೀರಶೈವ ಜನ ಸಮುದಾಯದಲ್ಲಿ ಅದು ವಿಶೇಷ ಚಳವಳಿಯನ್ನು ಹಬ್ಬಿಸಲಿಕ್ಕೆ ಸಾಧನೀಭೂತವಾಯಿತು. ಅದರ ಮೂಲಕ ಸಾರ್ವಜನಿಕ ಕಾರ್ಯ ಮಾಡಲಿಚ್ಛಿಸುವವರಿಗೆ ತಮ್ಮ ಚಳವಳಿಗಳನ್ನು ಸಾಗಿಸಲಿಕ್ಕೆ ಬಹಳ ಉಪಯೋಗವಾಯಿತು. ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಈ ಮಹಾಸಭೆಯನ್ನು ಆರಂಭಿಸಿ, ಅದರ ೭-೮ ಅಧಿನಿವೇಶನಗಳಲ್ಲಿ ಪ್ರತ್ಯಕ್ಷ ಕಾರ್ಯ ಮಾಡಿ.ಜನರಲ್ಲಿ ಜಾಗ್ರತೆಯನ್ನು ಹುಟ್ಟಿಸಿದರು. ಇದು ಅವರು ಮಾಡಿದ ಮಹತ್ವದ ಕಾರ್ಯವಾಗಿದೆ. ಶ್ರೀ ಸ್ವಾಮಿಗಳು ಧಾರ್ಮಿಕ ಕಾರ್ಯಗಳಲ್ಲಿ ಅತ್ಯಂತ ಉತ್ಸುಕರಾದ್ದರಿಂದ ಮಹಾಸಭೆಯು ಜಾಗ್ರತೆಯ ಮೂಲಕ ಅವರು ಬದಾಮಿ ಮಹಾಕೂಟದಲ್ಲಿ ಶಿವಯೋಗಮಂದಿರವೆಂಬ ಮಹತ್ವದ ಸಂಸ್ಥೆಯನ್ನು ಸ್ಥಾಪಿಸಿದರು. ಇದು ಅವರು ಮಾಡಿದ ಎರಡನೇ ಮಹತ್ವದ ಕಾರ್ಯವಾಗಿದೆ.

ಶಿವಯೋಗವು ವೀರಶೈವ ಧರ್ಮದಲ್ಲಿ ಒಂದು ವಿಶಿಷ್ಟ ಯೋಗಪದ್ಧತಿಯಾಗಿರುತ್ತದೆ. ಇದನ್ನು ಪ್ರಸಾರಗೊಳಸಬೇಕೆಂಬುದೇ ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳ ಮುಖ್ಯ ಧ್ಯೇಯವಾಗಿತ್ತು. ಇದಕ್ಕೋಸ್ಕರವಾಗಿಯೇ ಅವರು ಶಿವಯೋಗ ಮಂದಿರವನ್ನು ಸ್ಥಾಪಿಸಿದರು. ಹೀಗೆ ಶಿವಯೋಗ ಮಂದಿರದಲ್ಲಿ ಶಿಕ್ಷಣಹೊಂದಿ ಮಠಾಧಿಕಾರಿಗಳು ಮಠಗಳಲ್ಲಿ ಪಟ್ಟಾಧ್ಯಕ್ಷರಾಗುವದರಿಂದ ಸಮಾಜದ ಪ್ರಗತಿಯು ಬಹು ಬೇಗನೆ ಆಗುವದೆಂದು ಅವರ ಪೂರ್ಣ ತಿಳುವಳಿಕೆಯಾಗಿತ್ತು

ಈ ಶಿವಯೋಗ ಸಾಧನೆಗೋಸ್ಕರ, ಅತ್ಯಂತ ಬಿಗಿತರವಾದ ವರ್ತನೆಯು ಅವಶ್ಯವೆಂದು ಅವರ ಭರವಸೆ ಇದ್ದ ದರಿ೦ದ ಅವರು ಅಲ್ಲಿ ಶಿಕ್ಷಣ ಹೊಂದುವವರಿಗೆ ಬಹು ಕಟ್ಟಾಚರಣೆಗಳನ್ನು ಕಲ್ಪಿಸಿದರು. ಆ ಪ್ರಕಾರ ಈ ಆಚರಣೆಗೆ ಒಳಗಾಗಿ ಈ ಸಂಸ್ಥೆಯಿಂದ ಅನೇಕರು ಹೊರಬಿದ್ದು ಬಹುಕಡೆಗೆ ಮಠಾಧಿಕಾರಿಗಳಾಗಿದ್ದದ್ದೂ ಅವರು ಅನೇಕ ಬಗೆಯ ಸಮಾಜ ಕಾರ್ಯಗಳಲ್ಲಿ ತೊಡಗಿದ್ದೂ ತೋರಿಬರುತ್ತಿದೆ. ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಮಾಡಿದ ಈ ಕಾರ್ಯವು ಸಾಮಾನ್ಯವಾದುದಲ್ಲ.

ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳು ಈ ಪ್ರಕಾರ ಕೇವಲ ಧಾರ್ಮಿಕ ಭಾವನೆಯುಳ್ಳವರಾಗಿದ್ದರೂ ಅವರು ವ್ಯವಹಾರವನ್ನು ತಿರಸ್ಕರಿಸಿಬಿಡಲಿಲ್ಲ. ಅವರು ಆಧುನಿಕ ಸುಧಾರಣೆಗಳನ್ನು ಕೈಕೊಳ್ಳಲು ಯಾವಾಗಲೂ ಉತ್ಸುಕರಾಗಿರುತ್ತಿದ್ದರು. ಅವರು ಅಸಂಖ್ಯ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣವನ್ನು ದೊರಕಿಸಲು ಬಹಳ ಸಹಾಯ ಮಾಡಿದರು. ಮತ್ತು ತಮ್ಮ ಶಿವಯೋಗಮಂದಿರದಲ್ಲಿಯೇ ಒಂದು ಇಂಗ್ಲಿಷ್ ಶಿಕ್ಷಣ ಸಂಸ್ಥೆಯನ್ನೂ ಸ್ಥಾಪಿಸಿದರು. ಅವರು ಶಿವಯೋಗಮಂದಿರದ ಹಣದಿಂದಲೇ ಗಿರಣಿಯನ್ನು ಸ್ಥಾಪಿಸಿದ್ದು. ಅವರು ಶಿವಯೋಗಮಂದಿರದ ಜಮೀನುಗಳಲ್ಲಿ ಹೊಸ ತರದ ಒಕ್ಕಲುತನ ಸುಧಾರಣೆಗಳನ್ನು ಕೈಕೊಳ್ಳಲು ಬಹಳ ಆತುರ ಪಡುತ್ತಿದ್ದರು. ಮತ್ತು ಈ ದೃಷ್ಟಿಯಿಂದಲೇ ಅವರು ಅನೇಕ ಕಡೆಗೆ ಶಿವಯೋಗಮಂದಿರಕ್ಕೋಸ್ಕರ ಜಮೀನುಗಳನ್ನು ಸಂಪಾದಿಸಿರುವರು. ಅವರ ಮನಸ್ಸಿನಲ್ಲಿ ಶಿವಯೋಗ ಮಂದಿರದ ಮುಖಾಂತರ ಇಡೀ ದೇಶದಲ್ಲಿ ಧಾರ್ಮಿಕ ಪ್ರಚಾರ ಕಾರ್ಯಮಾಡಬೇಕೆಂದು ಬಹಳ ಇದ್ದ ದರಿಂದ ಅವರು ಅನೇಕ ಕಡೆಗೆ ಕೀರ್ತನಕಾರರೂ ಉಪನ್ಯಾಸಕರೂ ಹೋಗಿ ಉಪದೇಶ ಮಾಡಲು ಬಹಳ ಪ್ರೋತ್ಸಾಹಿಸುತಿದ್ದರು. ಹಾಗೆಯೇ ಅವರು ಗವಾಯಿಗಳಿಗೂ ಉತ್ತೇಜನ ಕೊಡುತ್ತಿದ್ದರು.

ಶ್ರೀಕುಮಾರ ತರಂಗಿಣಿ  ೨೦೨೩ ಅಕ್ಟೋಬರ  ಸಂಚಿಕೆಯ ಲೇಖನಗಳ ವಿವರ

  1. ಕೊಡು ಮಂಗಲವನು ಬೇಗನೆ ಶಿವನೆ ನೀನಿದನು” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೯ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3.   ಪುಸ್ತಕದ ಒಂದು ಸನ್ನಿವೇಶ: ಶ್ರೀಕಂಠ.ಚೌಕೀಮಠ
  4.  
  5. ೨ : ಶ್ರೀಕುಮಾರೇಶ್ವರ ಅಭಂಗ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,‌

ಸಪ್ಟಂಬರ ತಿಂಗಳು ಪರಮ ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರು ಭುವಿಗೆ ಅವತರಿಸಿದ ಪವಿತ್ರ ಮಾಸ.

೧೫೬ ನೆಯ ಜಯಂತಿ ಮಹೋತ್ಸವ ಸಂಭ್ರಮಾಚರಣೆಯ ಪರ್ವಕಾಲ.

ಈ ಸಂಧರ್ಭದಲ್ಲಿ ಪ್ರಕಟವಾಗುತ್ತಿರವ  “ಋಣಮುಕ್ತರು” ಎಂಬ ಲೇಖನದ ಆಯ್ದ ಸಾಲುಗಳು ಹೀಗಿವೆ……

ಅನೀತಿ-ಅನ್ಯಾಯ-ಅನಾಚಾರ ಹಾಗೂ ಧರ್ಮಗ್ಲಾನಿಯಾದ ಸಂದರ್ಭದಲ್ಲಿ ಸಿಡಿಲಿನಂತೆ ಸ್ಫೋಟಗೊಂಡು ಆವಿರ್ಭವಿಸಿದ ವಿಭೂತಿ ಪುರುಷರು ಅಜ್ಞಾನಾಂಧಕಾರದಲ್ಲಿ ಮುಳುಗಿದ ಜನತೆಯನ್ನು ಮೇಲೆತ್ತಲೆತ್ನಿಸಿ, ನೂತನ ಪ್ರಜ್ಞಾವಂತ ಸಮಾಜವೊಂದರ ರೂವಾರಿಗಳೆನಿಸುತ್ತಾರೆ. ಸಮಾಜಕ್ಕೆ ತಮ್ಮನ್ನು ಸಮರ್ಪಿಸಿಕೊಂಡು, ಜನಸಾಮಾನ್ಯರ ನೋವನ್ನು ಕಂಡು, ಮರುಗಿ ಸುಮ್ಮನಾಗದೆ, ಅದರಿಂದ ಕಳವಳಗೊಂಡು, ಸಂತಾಪವನ್ನು ತೋಡಿಕೊಂಡು, ತಮ್ಮ ಸಾತ್ವಿಕ ಶಕ್ತಿಯಿಂದ ಅದಕ್ಕೆ ಪರಿಹಾರ ಹುಡುಕಲು ಶ್ರಮಿಸುತ್ತಾರೆ; ಸಮಾಜದಲ್ಲಿ ಧರ್ಮವನ್ನು ನೆಲೆಗೊಳಿಸಿ, ಶೈಕ್ಷಣಿಕ ಕ್ರಾಂತಿಯನ್ನು ಗೈದು ಅದರ ಸರ್ವತೋಮುಖ ಅಭಿವೃದ್ಧಿಗಾಗಿ ಹೆಣಗುತ್ತಾರೆ.

ಸೈಪಿನ ಆಗರವೆನಿಸಿದ ಭರತಭೂಮಿಯಲ್ಲಿ ಅವತರಿಸಿದಷ್ಟು ವಿಭೂತಿ ಪುರುಷರು ಜಗತ್ತಿನ ಮತ್ತಾವ ದೇಶದಲ್ಲೂ ಕಾಣಸಿಗುವುದಿಲ್ಲ. ಭಾರತಾಂಬೆಯ ಜೇಷ್ಠ ಸುಪುತ್ರಿಯೆನಿಸಿದ ಕನ್ನಡಾಂಬೆಯ ಪುಣ್ಯೋದರದಲ್ಲಂತೂ ಅಸಂಖ್ಯ ಶರಣ-ದಾಸ-ಸಂತ-ಮಹಂತರು ಉದಯಿಸಿದ್ದಾರೆ. ಅವರಲ್ಲಿ ಹಾನಗಲ್ಲ ವಿರಕ್ತಮಠದ ಪೀಠಾಧ್ಯಕ್ಷರಾದ ಲಿಂ. ಶ್ರೀ ಮ. ನಿ. ಪ್ರ ಕುಮಾರ ಮಹಾಸ್ವಾಮಿಗಳು  ಈ ಮಾಲಿಕೆಯೊಳಗಿನ ದಿವ್ಯರತ್ನವೆನ್ನಬೇಕು.

ವೀರವಿರಾಗಿಗಳಾಗಿ ಕೆಲವರು, ಶಾಲೆ-ಪಾಠಶಾಲೆಗಳನ್ನು ಸ್ಥಾಪಿಸಿ ವಿದ್ಯಾಪ್ರಸಾರ ಕಾರಕೈಕೊಂಡು ವಿದ್ಯಾಪ್ರೇಮಿಗಳಾಗಿ ಮತ್ತೆ ಕೆಲವರು, ತತ್ವಜ್ಞಾನ ತತ್ವೋಪದೇಶದ ಬೋಧನೆಯ ಪುಣ್ಯಕಾರದಿಂದ ಇನ್ನು ಕೆಲವರು, ಪರಧರ್ಮೀಯರೊಂದಿಗೆ ವಾದಕ್ಕಿಳಿದು ಗೆದ್ದು ಪರವಾದಿಗಳೆನಿಸಿ ಹಲವರು, ಸಮಾಜವನ್ನು ಸಮರ್ಪಕವಾಗಿ ಸಂಘಟಿಸಿ ಯಶಸ್ವಿಯಾದ ಕೆಲವರು ನಮ್ಮಲ್ಲಿದ್ದಾರೆ, ಬಿಡಿಬಿಡಿಯಾಗಿ ಈ ಎಲ್ಲ ಕಾರ್ಯಗಳನ್ನು ಕೈಕೊಂಡು, ಇಡಿಯಾಗಿ ಎಲ್ಲ ಕ್ಷೇತ್ರಗಳಲ್ಲೂ ನಿಷ್ಠೆಯಿಂದ ದುಡಿದೂ, ಅಪರೂಪವಾದುದನ್ನೇ ಸಾಧಿಸಿದ ಹಾನಗಲ್ಲ ಕುಮಾರ ಸ್ವಾಮಿಗಳು ವೀರಶೈವ -ಲಿಂಗಾಯತರೆಲ್ಲರಿಗೂ  ಪರಮಾರಾಧ್ಯರು. ಅವರು ವಟುವತ್ಸಲರು, ಕಲಾಯೋಗಿಗಳು, ಕಾಯಕಪ್ರೇಮಿಗಳು, ನಮಗೆ ಅವರ ವ್ಯಕ್ತಿತ್ವ ಹಾಗೂ ಚಾರಿತ್ರ್ಯ ತುಂಬ ಮುಖ್ಯ.

ವ್ಯಕ್ತಿಯೊಬ್ಬ ಈ ಭೂಮಿಯ ಮೇಲೆ ಹುಟ್ಟುತ್ತಲೇ ಎಷ್ಟೋ ಋಣಗಳನ್ನು ಹೊತ್ತುಕೊಂಡೇ ಹುಟ್ಟಿ ಬರುತ್ತಾನೆ. ಮಾತಾಪಿತರ ಋಣ, ಮಾತೃಭೂಮಿಯ ಋಣ, ಗುರು ಋಣ, ಪರಿವಾರದ ಋಣ, ಅನ್ನದ ಋಣ, ಧರ್ಮದ ಋಣ, ಸಮಸ್ತ ಸಮಾಜದ ಋಣ-ಹೀಗೆ ಋಣದ ಜಾಲವು ಅನಂತವಾಗಿದೆ. ಡಿ.ವಿ.ಜಿ.ಯವರು ಹೇಳುವ-

ಋಣವ ತೀರಿಸಬೇಕು ಋಣವ ತೀರಿಸಬೇಕು

ಋಣವ ತೀರಿಸುತ ಜಗದಾದಿ ಸತ್ವವನು

ಜನದಿ ಕಾಣುತ್ತದರೊಳ್ ಒಂದುಗೂಡಬೇಕು.

ಎಂಬ ಮಾತು ಅತ್ಯಂತ ಗಮನಾರ್ಹವಾಗಿದೆ. ವ್ಯಕ್ತಿ ತಾನು ಹೊತ್ತು ತಂದ ಹಲವು ಹತ್ತು ಋಣಗಳನ್ನು ಹೊತ್ತು ಹೊತ್ತಿಗೆ ತೀರಿಸಿ ಋಣಮುಕ್ತನಾಗ ಬೇಕಾಗುತ್ತದೆ. ಹೀಗೆ ಸಕಾಲಕ್ಕೆ ಸಮಸ್ತ ಋಣಗಳನ್ನು ಅರ್ಥಪೂರ್ಣವಾಗಿ ತೀರಿಸಿ ಋಣವಿಮುಕ್ತರೆನಿಸಿದವರು ಹಾನಗಲ್ಲ ಶ್ರೀ ಗುರು ಕುಮಾರೇಶರು.

ಶ್ರೀಕುಮಾರ ತರಂಗಿಣಿ  ೨೦೨೩ ಸಪ್ಟಂಬರ್  ಸಂಚಿಕೆಯ ಲೇಖನಗಳ ವಿವರ

  1. ಮಂಗಳಾರತಿಯನು ನಾನು ಎತ್ತಿ ಪಾಡುವೆ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೮ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ೬: ಮಾತೆಯ ಆಗಮನ, ಮದುವೆಯ ಆಲೋಚನೆಲೇಖಕರು: ಪೂಜ್ಯ ಜ.ಚ.ನಿ
  4. : ಲೇಖಕರು :ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಲೇಖಕರು : ಡಾ. ಬಸವರಾಜ ಜಗಜಂಪಿ
  6.   ಲೇಖಕರು : ಬಿ. ಶಿವಮೂರ್ತಿ ಶಾಸ್ತ್ರಿ
  7. ಲೇಖಕರು : ಪಂಡಿತ ನಾಗಭೂಷಣ ಶಾಸ್ತ್ರಿಗಳು
  8.  
  9. ೨ : ಶ್ರೀಕುಮಾರೇಶ್ವರ ಅಭಂಗ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು.

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ಪ್ರಸ್ತುತ ಪಡಿಸಿದ  ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳ  ಜೀವನ ಚರಿತ್ರೆ ಆಧಾರಿತ ಸಾಕ್ಷ್ಯಚಿತ್ರ “ಯುಗ ಪುರುಷ ಮರಾಠಿ ಭಾಷೆಯ ಆವೃತ್ತಿ ದಿ. ೨೧-೦೭-೨೦೨೩”ಲೋಕಾರ್ಪಣೆ

ಶ್ರೀ.ಶ್ರೀ.ಶ್ರೀ.೧೦೦೮ ಜಗದ್ಗುರು.ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಗಿರಿರಾಜ ಸೂರ್ಯಸಿಂಹಾಸನ ಪೀಠ.ಶ್ರೀಶೈಲ  ಅವರ ಅಮೃತಹಸ್ತದಿಂದ  ಪರಳಿ ವೈದ್ಯನಾಥ ಜ್ಯೋತಿರ್ಲಿಂಗ ಮಂದಿರ ಮಹಾರಾಷ್ಟ್ರ ದಲ್ಲಿ ಜರುಗಿತು.

 ಪರಳಿಯ ಮಹತ್ವ :

     ಹೈದ್ರಾಬಾದ್ ಸಂಸ್ಥಾನದಲ್ಲಿದ್ದ ಪರಳಿ ವೈಜ್ಯನಾಥ ಹನ್ನೆರಡು ಜ್ಯೋರ್ತಿಲಿಂಗಗಳಲ್ಲೊಂದು. ಆ ಲಿಂಗದ ಪೂಜೆಯನ್ನು ಮೊದಲು ವೀರಶೈವರೇ ಮಾಡುತ್ತಿದ್ದರು. 1925ನೇ ಸಾಲಿನಲ್ಲಿ ವೈಜ್ಯನಾಥನನ್ನು ಬ್ರಾಹ್ಮಣರೇ ಪೂಜಿಸಬೇಕು. ವೀರಶೈವರು, ಶೂದ್ರರು ಇವರಿಗೆ ಲಿಂಗವನ್ನು ಪೂಜಿಸಲು ಹಕ್ಕಿಲ್ಲವೆಂದು ವೀರಶೈವ-ಲಿಂಗಾಯತರನ್ನು ಅಪಮಾನಮಾಡಿದ ಘಟನೆಯೊಂದು ಮಹಾರಾಷ್ಟ್ರ ದಲ್ಲಿ ಜರುಗಿತು. ಅದನ್ನು  ಕೇಳಿದ ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳಿಗೆ ತಡೆಯಲಿಕ್ಕಾಗಲಿಲ್ಲ.

ಹಾನಗಲ್ಲ ಮಹಾಸ್ವಾಮಿಗಳವರು ಶೀಲಾಚಾರದಲ್ಲಿದ್ದರೂ ಅನ್ಯಾಯವನ್ನು ಸಹಿಸುತ್ತಿರಲಿಲ್ಲ. ಪಂ.ಸೋಮನಾಥ ಶಾಸ್ತ್ರೀಗಳು ಬಸವಲಿಂಗ ಶಾಸ್ತ್ರಿಗಳು ಮೊದಲಾದವರನ್ನು ಕೂಡಿಕೊಂಡು ಹೈದ್ರಾಬಾದಿಗೆ ದಯಮಾಡಿಸಿದರು. ಅಲ್ಲಿ ಒಂದು ಮನೆಯನ್ನು ಬಾಡಿಗೆ ಹಿಡಿದು ಅನುಕೂಲಮಾಡಿಕೊಳ್ಳಲು ಮೂರು ದಿನ ಉಪವಾಸವಿದ್ದು ವ್ಯವಸ್ಥೆಮಾಡಿಕೊಂಡರು.  ಸುಪ್ರಸಿದ್ದ ವಕೀಲರು, ಪಂ.ಬಾಪಟರನ್ನು ಕರೆಸಿದ್ದರು. ಪಂ.ಸೋಮನಾಥ ಶಾಸ್ತ್ರಿಗಳ ಸಂಸ್ಕೃತ ದಲ್ಲಿ ಅಪಾರ ವಿದ್ವಾಂಸರು. ಆದರೆ ವಕೀಲ ಸನದು ಇಲ್ಲದ ಕಾರಣಕ್ಕೆ ಕೋರ್ಟಿನಲ್ಲಿ ವ್ಯಾಜ್ಯ ನಡೆಸಲು ಅನುಮತಿ ಸಿಗಲಿಲ್ಲ. ನವಾಬರ ಸರಕಾರದ ಒಬ್ಬ ವಕೀಲರನ್ನು ನೇಮಿಸಿಕೊಂಡು ಅವರಿಗೆ ಶಾಸ್ತ್ರೀಗಳವರೇ ಎಲ್ಲಾ ವಿಷಯ ತಿಳಿಸಿ ವ್ಯಾಜ್ಯ ನಡೆಸಲು     ಬಗೆಯನ್ನು ಹೇಳುತ್ತಿದ್ದರು.

           ಬ್ರಾಹ್ಮಣರು ತಂದ ಆಗಮಗಳಲ್ಲಿ ನಾಲ್ಕಾರು ಕಡೆ ‘ಶೂದ್ರ’ ಶಬ್ದ ದೊರೆಯಿತು. ಶಿವಯೋಗ ಮಂದಿರದಲ್ಲಿರುವಾಗಲೇ ಆಗಮಗಳನ್ನು ಅಭ್ಯಸಿಸಿ ಟಿಪ್ಪಣಿ ಮಾಡಿದ್ದು ಉಪಯೋಗವಾಯಿತು. ಮಂದಿರದಿಂದ ಆ ಆಗಮಗಳನ್ನು ತರಿಸಿದರು ಆ ಗ್ರಂಥಗಳಲ್ಲಿ ‘ಶೂದ್ರ’ ವಿದ್ದ ಸ್ಥಳಗಳಲ್ಲಿ ‘ರುದ್ರ’ ವಿರುವುದನ್ನು ಶಾಸ್ತ್ರಿಗಳು ಎಲ್ಲರಿಗೂ ತೋರಿಸಿ ಆಗಮಗಳನ್ನು ತಿದ್ದುಪಡಿ ಮಾಡಿರುವುದನ್ನು ತಿಳಿಸಿದರು. “ವೀರಶೈವರು ರುದ್ರಗಣಾಧೀಶರು” ರುದ್ರವಂಶಜರು ಹೀಗಿರುವಾಗ ‘ಶೂದ್ರ’ರೆಂತಾಗುವರು? ರುದ್ರ ಗಣಾದೀಶರು, ಪೂಜ್ಯರೂ ಉಚ್ಚಕುಲದವರು, ನಿತ್ಯ ಇಷ್ಟಲಿಂಗ ಪೂಜಕರು ಎಂಬುದನ್ನು  ತಿಳಿಸಿ ಹೇಳಲು ಶಾಸ್ತ್ರಿಗಳು ಮೂರು ತಿಂಗಳ ಕಾಲ ಅಲ್ಲಿ ಉಳಿದರು. ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳವರು  ಈ ವ್ಯಾಜ್ಯಕ್ಕಾಗಿ 1925ರಲ್ಲಿ ಸುಮಾರು 30000 ರೂಗಳ ಸಂಗ್ರಹಿಸಿ ಕೊಟ್ಟರು. ಪಂ.ಸೋಮನಾಥಶಾಸ್ತ್ರಿಗಳು ಅಷ್ಟುಕಾಲ ಹೆಂಡರು ಮಕ್ಕಳನ್ನು ಮರೆತು ಕಾರ್ಯ ಮಾಡಿದ್ದರು. ಹೈದ್ರಾಬಾದ್ ಹೈಕೋರ್ಟಿನಿಂದ ತೀರ್ಮಾನ ಬಂದಿತು. ಜಯಶಾಲಿಗಳಾದರು.

ಈ ಜಯ “ಸ್ಥಾವರ ಲಿಂಗ” ದ ಪೂಜೆ ಗಾಗಿ ಅಲ್ಲ.

ಅದು ಅಖಂಡ ವೀರಶೈವ-ಲಿಂಗಾಯತ ಧರ್ಮೀಯರಿಗೆ ಆದ ಸಾರ್ವಜನಿಕ ಅವಮಾನಕ್ಕೆ ಸ್ವಾಭಿಮಾನದ ಜಯ. ಆ ಜಯವನ್ನು ಪರಮಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳ   ತಂದು ಕೊಟ್ಟಿದ್ದರು ೧೯೨೫-೨೯ ರಲ್ಲಿಯೇ ತಂದುಕೊಟ್ಟಿದ್ದರು. ಆ ಕಾರಣಕ್ಕಾಗಿ ಪರಳಿಯಲ್ಲಿ ಮರಾಠಿ ಭಾಷೆಯ “ಯುಗ ಪುರುಷ” ಲೋಕಾರ್ಪಣೆಯಾಯಿತು.

ಜೊತೆಗೆ ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ಪ್ರಸ್ತುತ ಪಡಿಸಿದ “ಶ್ರೀ ಕುಮಾರೇಶ್ವರ ಅಭಂಗ” ಲೋಕಾರ್ಪಣೆ ಕಾರ್ಯಕ್ರಮ ಜರುಗಿತು

ಮಳೆಗಾಗಿ ನಿತ್ಯ ಜಲಾಭಿಷೇಕ ಪೂಜೆಯ ಒಂದು ತಿಂಗಳು ನಡೆದ ಪ್ರಾರ್ಥನೆ ಯ ಮಂಗಲ ಕಾರ್ಯಕ್ರಮ ದಿ.17 ಜುಲೈ 2023 ಖಡಕಲಾಟ ಗ್ರಾಮ (ನಿಪ್ಪಾಣಿ ತಾಲೂಕು)
ಶ್ರೀ ಕುಮಾರೇಶ್ವರರ ವಿರಕ್ತಮಠ
ಮಳೆಯಿಂದಲೇ ಸ್ವಾಗತಿಸಿ
ಮಳೆಯಿಂದಲೇ ಕಾರ್ಯಕ್ರಮ ದ ಸ್ಥಳ ಬದಲಿಸಿ
ಅಭೂತಪೂರ್ವ ಸನ್ನಿವೇಶದಲ್ಲಿ
ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ಪ್ರಸ್ತುತ ಪಡಿಸಿದ
“ಶ್ರೀಕುಮಾರೇಶ್ವರ ಅಭಂಗ” ಲೋಕಾರ್ಪಣೆ ಸಮಾರಂಭ ಖಡಕಲಾಟ ಅಪ್ಪನವರ ಕುಮಾರೇಶ್ವರ ವಿರಕ್ತಮಠದಲ್ಲಿ ಅದ್ದೂರಿಯಾಗಿ ಜರುಗಿತು ಹಿರಿಯ ಶ್ರೀಗಳಾದ ಶ್ರೀ ಮ ನಿ ಪ್ರ ಸ್ವ ಶಿವಬಸವ ಮಹಾಸ್ವಾಮಿಗಳ ಅಮೃತ ಲಿಂಗಹಸ್ತದಿಂದ ಅಭಂಗ ಲೋಕಾರ್ಪಣೆಗೊಂಡಿತು ಸಮ್ಮುಖವನ್ನು ಬಸವನಬಾಗೆವಾಡಿ ಹುಣಶ್ಯಾಳ ಹಿರೇಮಠದ ಪೂಜ್ಯ ಆನಂದ ದೇವರು ವಹಿಸಿದ್ದರು ಅಭಂಗ ಕುರಿತು ಪ್ರೊ ಮಿಥುನ ಅಂಕಲಿ ಪರಿಚಯಿಸಿದ

ಶ್ರೀಕುಮಾರ ತರಂಗಿಣಿ  ೨೦೨೩ ಅಗಸ್ಟ  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಶಿವಮೂರ್ತಿಯೆ ತವೆ ಪೂಜಿಸುವೆ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೭ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕಾರುಣಿಕ ಯುಗಪುರುಷ ಧಾರವಾಹಿ : ಭಾಗ ೫: ವಿದ್ಯಾಶಿಕ್ಷಣ, ವೇದಾಂತ ನಿರೀಕ್ಷಣಲೇಖಕರು: ಪೂಜ್ಯ ಜ.ಚ.ನಿ
  4. ನಯ-ವಿನಯ:ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಕಾವ್ಯ: ಶಿವಯೋಗಿ ಕುಮಾರಯೋಗಿ ರಚನೆ: ಪೂಜ್ಯ ಶಿವಬಸವ ದೇವರು ಧಾರವಾಡ
  6. ಸಾಧಕರ ಶಿವಯೋಗ ಮಂದಿರದ  ಸೇವಾ ಸಂಕಲ್ಪ ಯಾತ್ರೆಯ ಕಿರುವರದಿ.
  7. ವಿಶಿಷ್ಠ ವ್ಯಕ್ತಿತ್ವದ ಶ್ರೀ ಆರ್.ಎಸ್.ಕಲ್ಯಾಣಶೆಟ್ಟರು. (ಮಮದಾಪೂರ) .ಆಯ್.ಪಿ.ಎಸ್.(ನಿ) ಲೇಖಕ: ಶ್ರೀಕಂಠ.ಚೌಕೀಮಠ.
  • ಆಡಿಯೋ೧ : ಮರಾಠಿ ಭಾಷಾ ಆವೃತ್ತಿ “ ಯುಗ ಪುರುಷ” ಸಾಕ್ಷ್ಯ ಚಿತ್ರ
  • ಆಡಿಯೋ ೨ : ಶ್ರೀಕುಮಾರೇಶ್ವರ ಅಭಂಗ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಹುಲಿಯಾದರೂ ಹುಲಿಯ ತಿನ್ನುವದಿಲ್ಲ

ಇಲಿಯಾದರೂ ಇಲಿಯ ತಿನ್ನುವದಿಲ್ಲ

ಮಾನವನಾದ ನಾನು

ಮಾನವರ ಹಿಂಸಿಸಿ

ಅವರ ಸರ್ವಸ್ವ ವ ಭಕ್ಷಿಸುತ್ತಲಿದ್ದೇನೆ

ನಿಜ ಮಾನವತ್ವದ ಅರಿವು ನೀಡಿ

ರಕ್ಷಿಸೆನ್ನ

ಗುರುಕುಮಾರ

ಪಂಚಾಕ್ಷರೇಶ್ವರ

* ರಚನೆ ಪೂಜ್ಯ ಪುಟ್ಟರಾಜ ಗವಾಯಿಗಳು

ಕೃಪೆ: ಶ್ರೀಎಸ್. ಸ್ವಾಮಿ  ಜಂಗಮ ಯೋಗಧಾಮ (ಶರಣರ ಬಳಗ)

ಸಂಗೀತ ಗಾಯನ  ಕೃಪೆ :ಶ್ರೀ ಎಸ್. ಎಸ್. ಪಾಟೀಲ ಮಾಜಿ ಸಚಿವರು.ಮುಂಡರಗಿ.

ಈ ವಚನದ ಸಾಲುಗಳು ,ಪರಮ ವಿರಕ್ತರು , ವಿರಾಗಿಗಳು ಮತ್ತು “ಸಮಾಜವೇ ತನ್ನ ಬಂಧು ಬಳಗ ವನ್ನು ಮಾಡಿಕೊಂಡಿದ್ದ

ಪೂಜ್ಯ ಪುಟ್ಟರಾಜ ಗವಾಯಿಗಳ ಲೇಖನಿಯಿಂದ ಹೇಗೆ ಮೂಡಿದವು? ಎಂಬ ಜಿಜ್ಞಾಸೆ ಗೆ ಒಳಗಾದೆ !.

ಸ್ವಾರ್ಥಿ ಮನುಷ್ಯತ್ವ ಒಂದು ವರ್ಗ

ಪೂಜ್ಯ ಪುಟ್ಟರಾಜ ಗವಾಯಿಗಳನ್ನು ನೋವಿಸಿದ್ದನ್ನು ,ಅವರು ಪಟ್ಟುಕೊಂಡ ಯಾತನೆಗಳನ್ನು 80ರ ದಶಕದಲ್ಲಿ ಪೂಜ್ಯರನ್ನು ಹತ್ತಿರದಿಂದ ಕಂಡಿದ್ದ ನನಗೆ ಕಣ್ಣೆದರು ಬಂದವು.

ಗದುಗಿನ ವೀರೇಶ್ವರ ಪುಣ್ಯಾಶ್ರಮದ ರಕ್ಷಣಾ ಗೋಡೆಯ ಪಕ್ಕದಲ್ಲಿದ್ದ ರೆಡ್ಡಿ ಹಾಸ್ಟೆಲ್ ನಲ್ಲಿ ಇದ್ದುಕೊಂಡು ನನ್ನ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿದ್ದ ನಾನು  ಹಲವಾರು ಬಾರಿ ಪೂಜ್ಯ ಪಂಚಾಕ್ಷರಿ ಗವಾಯಿಗಳ ಕ್ರಿಯಾಸಮಾಧಿಯ ದರ್ಶನಕ್ಕೆ ಹೋದಾಗ  ಪೂಜ್ಯ ಪುಟ್ಟರಾಜ ಗವಾಯಿಗಳು ಆಶ್ರಮದ ಮಕ್ಕಳ ಉಪಹಾರಕ್ಕೆ ಪಡುತ್ತಿದ್ದ  ವ್ಯವಸ್ಥೆಯ ಹಿಂದಿನ ಕಷ್ಟದ ಅರಿವು ನನಗಿದೆ.ಅಕಸ್ಮಾತ್ ಪೂಜ್ಯರಿಗೆ ನಾನು ಬಂದದ್ದು ಗೊತ್ತಾದರೆ ಆ ಕಷ್ಟದ ವ್ಯವಸ್ಥೆಯಲ್ಲೂ ನನಗೆ ಪ್ರಸಾದ ನೀಡುತ್ತಿದ್ದ ಅಂಥಕರುಣೆಯ ವಾತ್ಸಲ್ಯ ನಾನು ಮರೆಯುವಂತಿಲ್ಲ. ಸೇವಕರಿಂದ ನನ್ನ ಎದೆಯ ಮೇಲೆ ಇಷ್ಟ ಲಿಂಗ ಕಟ್ಟಿಕೊಂಡಿರುವನೋ ಇಲ್ಲವೋ ಎಂಬ ಪರೀಕ್ಷೆಯಂತೂ ನನ್ನನ್ನು ಯಾವಾಗಲೂ ಎಚ್ಚರಗೊಳಿಸುತ್ತಲೇ ಇರುತ್ತದೆ.

ಈ ವಚನ, ಅವರಿಗಾದ ನೋವು ಅಪಮಾನಗಳನ್ನು ತಮ್ಮ ಮೇಲೆಯೇ ಹಾಕಿಕೊಂಡು ಬರೆದ ಸಾಲುಗಳು..

ಅವರೆಂದೂ ಯಾರನ್ನು ಹಿಂಸಿಸಲಿಲ್ಲ.

ಅವರು ಎಂದೂ ಯಾರ ಸರ್ವಸ್ವವನ್ನೂ ಭಕ್ಷಿಸಲಿಲ್ಲ..

ಅವರು ಎಂದೂ ,ಮತ್ತೊಬ್ಬರ ಶ್ರಮವನ್ನು ಜೀವಂತ ಹೂತು ಹಾಕಿ ಆ ಸಮಾಧಿಯ ಮೇಲೆ ರಣಕೇಕೆ ಹಾಕಲಿಲ್ಲ.

ಅವರು ಎಂದೂ ಬಲಿಷ್ಠ, ಬಂಡವಾಳಶಾಹಿ ಭಕ್ತರ ಮೋಹಕ್ಕೆ

ಬಲವಿಲ್ಲದ ಭಕ್ತರ ಸೇವೆಯನ್ನು. ಬಲಿ ಕೊಡಲಿಲ್ಲ.

ಅವರು ಎಂದೂ ಗುರುವಿನ ಮಹಾಗುರುವಿನ ಹೆಸರನ್ನು ಭಕ್ತ ರು ಕೊಟ್ಟ ಋಣ ಕ್ಕೆ ಅಡುವಿಡಲಿಲ್ಲ, ಹರಾಜು ಹಾಕಲಿಲ್ಲ.

ಅವರು ಸ್ವಾಭಿಮಾನಿಗಳಾಗಿದ್ದರು.

ಪದ್ಮಭೂಷಣ ಪ್ರಶಸ್ತಿಗೆ ದೆಹಲಿಗೆ ಬಂದಾಗಲೂ ಸ್ನಾನ ಪೂಜಾದಿ ಗಳಿಗೆ ಭಾವಿ ಇರುವ ಮನೆಯನ್ನೇ ಆಯ್ಕೆಮಾಡಿಕೊಂಡು, ಶ್ರೀಕುಮಾರೇಶ್ವರರ ಕಟ್ಟುನಿಟ್ಟಿನ ಶೀಲಾಚಾರಣೆಮಾಡಿದ್ದು ಅವರ ನಿಷ್ಠುರ ಬದುಕಿಗೆ ಹಿಡಿದ ಕನ್ನಡಿ.

ಬಾಲ್ಯದ

ಆರಂಭದ ದಿನಗಳಲ್ಲಿ ಶ್ರೀ ಶಿವಯೋಗ ಮಂದಿರದ ಪವಿತ್ರ ನೆಲದಲ್ಲಿ ಆಶ್ರಯ ಪಡೆದಿದ್ದ ಪೂಜ್ಯ ಪುಟ್ಟರಾಜ ಗವಾಯಿಗಳು ,ಮೈತುಂಬಾ ಗಾಯಗಳಿಂದ ಅಳುತ್ತ ಕುಳಿತ್ತಿದ್ದರಂತೆ, ಅವರನ್ನು ಮೈದಡವಿ ವಾತ್ಸಲ್ಯದಿಂದ ಎತ್ತಿಕೊಂಡು ಹೋಗಿ ,ರಕ್ತಸಿಕ್ತ ಗಾಯವನ್ನು ತೊಳೆದು ,ಗಿಡಮೂಲಿಕೆ ಯ ಔಷಧ ಹಚ್ಚಿ ಆರೈಕೆ ಮಾಡಿದ ಮಹಾತ್ಮ ಪೂಜ್ಯ ಹಾನಗಲ್ಲ ಶ್ರೀಕುಮಾರ ಶಿವಯೋಗಿಗಳು ಎಂದು ಆ ಕ್ಷಣಕ್ಕೆ  ಪೂಜ್ಯ ಪುಟ್ಟರಾಜ ಗವಾಯಿಗಳಿಗೆ ಗೊತ್ತಾಗಲಿಲ್ಲ ವಂತೆ.  ಬೇರೆಯವರಿಂದ ಕೇಳಿತಿಳಿದುಕೊಂಡ   ಪೂಜ್ಯ ಪುಟ್ಟರಾಜ ಗವಾಯಿಗಳು ಅಂಥ ಮಹಾತ್ಮರ ಕೈಯಲ್ಲಿ ಸೇವೆ ಮಾಡಿಸಿಕೊಂಡೆನೆಲ್ಲ ಎಂಬ ಕೊರಗು ಅವರಲ್ಲಿ ಕೊನೆವರೆಗೂ ಇತ್ತು ಅದನ್ನು ನೆನಪಿಸಿ ಕೊಂಡು ಅವರು ಹಾಕುತ್ತಿದ್ದ ಕಣ್ಣೀರು ಎಂಥವರನ್ನೂ ಸ್ತಂಭೀಭೂತಗೊಳಿಸಿ  ಮಂತ್ರಮುಗ್ಧ ಗೊಳಿಸುತ್ತಿತ್ತು.

ಪೂಜ್ಯರ ನೆನಹು ಇಂದು ಅವರ ವಚನವನ್ನು ಕೇಳುವ ಸಂದರ್ಭದಲ್ಲಿ ಹೃದಯ ಸ್ಪರ್ಶಿಯಾಗಿ ಕಾಡಿತು.

ಅವರ ಬರೆದ ನೋವಿನ ಸಾಲುಗಳು

ಹಲವು ಅರ್ಥಗಳನ್ನು ನೀಡಿತು

ಘಾಸಿಗೊಂಡಿರುವ ನನ್ನ ಹೃದಯದ

ಯಕ್ಷಪ್ರಶ್ನೆ ಗೆ

ಸ್ಪಷ್ಟ ಉತ್ತರವನ್ನೀಯಿತು.

ಶ್ರೀಕುಮಾರ ತರಂಗಿಣಿ  ೨೦೨೩ ಜುಲೈಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ದೇವ  ಪೊರೆಯೊ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೬ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕಾರುಣಿಕ ಯುಗಪುರುಷ ಧಾರವಾಹಿ : ಭಾಗ ೪: ಬಾಳಿನ ಬವಣೆ-ವಿದ್ಯಾಸ್ಮರಣೆ ಲೇಖಕರು: ಪೂಜ್ಯ ಜ.ಚ.ನಿ
  4. ಅನುಭವ-ಅನುಭಾವ :ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಗುರುಕರುಣ ಸೌಂಧರ್ಯ ಲಹರಿ: ಲೇಖಕರು : ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
  6. ದೇವಸ್ಥಾನ: -ಜಿ. ಎಸ್. ಶಿವರುದ್ರಪ್ಪ
  7. ಆಡಿಯೋ೧ :
  8. ಶ್ರೀಕುಮಾರೇಶ್ವರ ಭಜನ್‌ “ಗುರುದೇವ ದೇವ ಗುರುಕುಮಾರ” ರಚನೆ
  9. ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ಶ್ರೀ ಸಿದ್ಧೇಶ್ವರಮಠ. ಹಂದಿಗುಂದ.
  10. ಆಡಿಯೋ ೨ : ಶ್ರೀಕುಮಾರೇಶ್ವರ ದೊಹೆಗಳು

ರಚನೆ

:ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ಶ್ರೀ ಸಿದ್ಧೇಶ್ವರಮಠ. ಹಂದಿಗುಂದ.

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಶ್ರೀ ಡಿ.ಎಸ್‌ ಕರ್ಕಿಯವರ  ಶಿವಯೋಗಮಂದಿರ ಕುಇತು ಬರೆದ ಲೇಖನದ  ಸಾಲುಗಳು ಅತ್ಯಂತ ಅರ್ಥಪೂರ್ಣ ಮತ್ತು ಸುಂದರವಾಗಿವೆ

ಇದೋ ಮಂದಿರ ಶಿವಮಂದಿರ

ಶಿವಯೋಗದ ಮಂದಿರ

ಪ್ರಕೃತಿಯ ಪರಮಾನಂದದ

ಸುಧೆ ಸೂಸುವ ಚಂದಿರ

…….

ಶಿವಯೋಗಮಂದಿರ ! ಸುಂದರವಾದ ಸ್ಥಳಕ್ಕೆ ತುಂಬಾ ಸಮಂಜಸವಾದ ಹೆಸರು, ಶಿವ, ಯೋಗ, ಮಂದಿರ- ಈ ಮೂರರಲ್ಲಿ ನಮಗೆ ಮೂರೂ ಬೇಕು. ಮಹೇಶ್ವರನ ಹೆಸರುಗಳಲ್ಲಿ ‘ಶಿವ’ ಎಂಬ ಹೆಸರು ಎಷ್ಟು ಚಿಕ್ಕದೋ ಅಷ್ಟೇ ಅರ್ಥಪೂರ್ಣವಾದುದು. ಸತ್ಯಂ, ಶಿವಂ ಸುಂದರಂ-ಎಂಬ ಜೀವನದ ಸರ್ವೋತ್ಕೃಷ್ಟ ತತ್ವಗಳಲ್ಲಿ ‘ಶಿವ’ ಶಬ್ದವು ಮಧ್ಯವರ್ತಿಯಾಗಿ, ಎಂದರೆ ಸತ್ಯವನ್ನು ಸೌಂದರ್ಯವನ್ನು ಸಮರಸಗೊಳಿಸುವ ಶುಭ ಸತ್ವವಾಗಿ ಸಮಾವೇಶವಾಗಿದೆಯೆಂಬುದನ್ನು ನೆನೆಯಬೇಕು. ಮಹಾದೇವನ ಮಂಗಲಮಯವಾದ, ಕರುಣಾ ಪೂರ್ಣವಾದ ಮಹೋನ್ನತವಾದ ಸ್ವರೂಪವನ್ನು ‘ಶಿವ’ ಶಬ್ದವು ಎರಡೆಂದರೆ ಎರಡೇ ಅಕ್ಷರಗಳಲ್ಲಿ ನಿರೂಪಿಸುತ್ತದೆ. ‘ಶಿವ’ ಶಬ್ದಕ್ಕೆ ‘ಶುಭ’ ಎಂಬ ಅರ್ಥವೂ ಉಂಟು. ಹೀಗೆ ಶುಭದಿಂದ ಪ್ರಾರಂಭವಾಗುತ್ತದೆ ‘ಶಿವಯೋಗಮಂದಿರದ ಹೆಸರು ಶುಭಕ್ಕೆ ‘ಯೋಗ’ದ ಯೋಗ ದೊರೆತು ಆನಂದದ ಆಗರವಾದಂತಿದೆ ಶಿವಯೋಗಮಂದಿರ.

ಶಿವಯೋಗಮಂದಿರದ ರಚನೆಗಾಗಿ ಸುಂದರವಾದ ಸನ್ನಿವೇಶವನ್ನು ಆಯ್ದ ಪ್ರತಿಭೆ ಸಾಮಾನ್ಯವಾದುದಲ್ಲ. 

ಸೌಂದರ್ಯರ್ಯಾನುಭವವನ್ನು ಶಿವಾನುಭವವನ್ನು ತನ್ನಲ್ಲಿ ಸಮರಸಗೊಳಿಸಿಕೊಂಡ ಪ್ರತಿಭೆಯದು. ಅದು  ಹಾನಗಲ್ಲ ಕುಮಾರ ಸ್ವಾಮಿಗಳಮಹಾ ವ್ಯಕ್ತಿತ್ವವನ್ನು ಬೆಳಗಿದ ಪ್ರತಿಭೆ……

ಶ್ರೀಕುಮಾರ ತರಂಗಿಣಿ  ೨೦೨೩ ಜೂನಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ ಬೋಧವ ಕೊಡು ದೇವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-25 : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕಾರುಣಿಕ ಯುಗಪುರುಷ ಧಾರವಾಹಿ : ಭಾಗ 3 ಉದಂತ ಉದಯ, ಉಜ್ವಲಂತ ಉತ್ಕ್ರಮಣ: ಲೇಖಕರು: ಪೂಜ್ಯ ಜ.ಚ.ನಿ
  4. ನೇಮ-ನಿತ್ಯ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  5. ಸುಕುಮಾರ ಗುರುಕುಮಾರ ನಿವೇದನ ಕಾವ್ಯ : ರಚನೆ: ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು.ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ.
  6. ಧ್ಯಾನ ಮತ್ತು ಅನುಷ್ಠಾನ : ಲೇಖಕರು : ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು
  7. ದಯಾನಿಧಿ ಹಾನಗಲ್ಲ ಶ್ರೀ ಕುಮಾರೇಶ : ಲೇಖಕರು: ಚಿಂದೋಡಿ ಬಂಗಾರೇಶ.ರಂಗಭೂಮಿ ಕಲಾವಿದರು,ಚಿತ್ರ ನಿರ್ದೇಶಕ ಕಲಾವಿದರು,ರಾಜ್ಯ ಪ್ರಶಸ್ತಿ ಪುರಸ್ಕೃತರು
  8. ಆಡಿಯೋ೧ :
  9. ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ)  ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗೆ ಲೋಕಾರ್ಪಣೆಯ ಸವಿನೆನಪು
  10. ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ
  11. ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು
  12. ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.
  13. ಶ್ರೀ ಜಗದ್ಗುರು  ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ
  14. ಪೂಜ್ಯರ ಆಶೀರ್ವಚನ ೧೪-೦೫-೨೦೨೧
  15. ಆಡಿಯೋ ೨ : ವಿಶೇಷ ಉಪನ್ಯಾಸ ಪೂಜ್ಯ ಶ್ರೀಕುಮಾರೇಶ್ವರರು ಗೌರವಿಸಿದ ಮಹನಿಯರು” 

               ಪರಮಪೂಜ್ಯ ಶ್ರೀ ಅಭಿನವ ಸಿದ್ಧಾರೂಡ  ಮಹಾಸ್ವಾಮಿಗಳಿಂದ  ಶಾಂತಾಶ್ರಮ ಹುಬ್ಬಳ್ಳಿ.

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ)  ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಹಾರ್ದಿಕ ಶುಭಾಶಯಗಳು. ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ)  ಮಾಸಿಕ ಬ್ಲಾಗನ ೨೪ತಿಂಗಳಲ್ಲಿ ೨೧೮ ಲೇಖನಗಳುನ೨೮ ಕಾವ್ಯಗಳು ಹಾಗು ೧೦ ಮುದ್ರಿತ ವಾಚನಗಳು

ಜೊತೆಗೆ ೧೧೧೪೮ ಓದುಗರು. ಈ ಯಶಸ್ಸಿಗೆ ಸಹಕರಿಸಿದ ಎಲ್ಲ ಪರಮಪೂಜ್ಯರಿಗೆ ಭಕ್ತಿಪೂರ್ವಕ ಮತ್ತು ಹೃದಯಪೂರ್ವಕ ಕೃತಜ್ಞತೆಗಳು

ಶ್ರೀಕುಮಾರ ತರಂಗಿಣಿ  ೨೦೨೩ ಮೇಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ ಪರಾತ್ಪರ ಬಸವೇಶ್ವರನನು” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೪ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಶ್ರೀ ಕುಮಾರ ಸ್ವಾಮಿಗಳ ವಿಚಾರಗಳು : ಸಖರಾಯಪಟ್ಟಣದ ಶ್ರೀ ಸದಾಶಿವ ಪಟ್ಟಾಧ್ಯಕ್ಷರು
  4. ಕಾರುಣಿಕ ಯುಗಪುರುಷ ಧಾರವಾಹಿ : ಭಾಗ ೨ ಪ್ರವೇಶ: ಲೇಖಕರು: ಪೂಜ್ಯ ಜ.ಚ.ನಿ
  5. ವಿದ್ಯೆ-ಅವಿದ್ಯೆ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  6. ಪಂಚಾಚಾರ: ಪರಿಕಲ್ಪನೆ : ಡಾ:ಸ್ನೇಹಾ ಭೂಸನೂರ
  7. ಆಡಿಯೋ೧ :
  8. ಶ್ರೀಕುಮಾರ ತರಂಗಿಣಿ (ಆರಂಭದಲ್ಲಿ ಸುಕುಮಾರ)  ಮಾಸಿಕ ಬ್ಲಾಗ ದ್ವೀತಿಯ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗೆ ಲೋಕಾರ್ಪಣೆಯ ಸವಿನೆನಪು
  9. ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ
  10. ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು
  11. ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ.
  12. ಶ್ರೀ ಜಗದ್ಗುರು  ಕೊಟ್ಟೂರುಸ್ವಾಮಿ ಸಂಸ್ಥಾನಮಠ ಹೊಸಪೇಟೆ-ಬಳ್ಳಾರಿ-ಹಾಲಕೆರೆ
  13. ಪೂಜ್ಯರ ಆಶೀರ್ವಚನ ೧೪-೦೫-೨೦೨೧
  14. ಆಡಿಯೋ ೨ : ವಿಶೇಷ ಉಪನ್ಯಾಸ ಪೂಜ್ಯ ಶ್ರೀಕುಮಾರೇಶ್ವರರು ಗೌರವಿಸಿದ ಮಹನಿಯರು” 

               ಪರಮಪೂಜ್ಯ ಶ್ರೀ ಅಭಿನವ ಸಿದ್ಧಾರೂಡ  ಮಹಾಸ್ವಾಮಿಗಳಿಂದ  ಶಾಂತಾಶ್ರಮ ಹುಬ್ಬಳ್ಳಿ.

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಬದುಕು ಮತ್ತು ಸವಿಸುವ ದಾರಿಯಲ್ಲಿ ಸಂಚರಿಸುವಾಗ ಜರಗುವ ಪ್ರಕ್ರಿಯೆಗಳು ನಮಗೊಂದು ದೊಡ್ಡ ಪಾಠವಾಗಿ ಮಾರ್ಪಾಡುತ್ತವೆ ಎನ್ನುವದರ ಕುರಿತು ಚಿಂತಿಸುವಾಗ,
ಹನ್ನೆರಡನೆಯ ಶತಮಾನದಲ್ಲಿ ಬರೆದಿಟ್ಟಿರುವ ಬಸವಣ್ಣನವರ ಈ ವಚನ ಬದುಕಿನ ಕರಾಳ ಮುಖದ ವಿರಾಟದರ್ಶನ ಮಾಡಿಸಿತು

ಮಾಡಿದೆನೆಂಬುದು ಮನದಲ್ಲಿ ಹೊಳೆದರೆ,

ಏಡಿಸಿ ಕಾಡಿತ್ತು ಶಿವನ ಡಂಗುರ!

ಮಾಡಿದೆನೆನ್ನದಿರಾ ಲಿಂಗಕ್ಕೆ,

ಮಾಡಿದೆನೆನ್ನದಿರಾ ಜಂಗಮಕ್ಕೆ.

ಮಾಡಿದೆನೆಂಬುದು ಮನದಲ್ಲಿಲ್ಲದಿದ್ದರೆ,

ಬೇಡಿತ್ತನೀವ ಕೂಡಲಸಂಗಮದೇವ

If it flashes across the mind that one is performing service,

the drum of Lord Shiva warns with a harsh sound.

Never say that you served the Lord!

Never say that you served His wandering (mobile) devotees!

If the thought that you served does not occur in your mind,

the Lord Kudala Sangama will grant you whatever you aspire for.

ಭಕ್ತನು ಸೇವಕ, ಶಿವನು ಯಜಮಾನ. ಸೇವಕನು ಯಜಮಾನನ ಕೆಲಸವನ್ನು ಮಾಡಿ-ಮಾಡಿಸಿದವನು ಯಜಮಾನನೆಂದು-ಅವನ ಹೆಸರನ್ನು ಮುಂದುಮಾಡದೆ ತಾನೇ ಮಾಡಿದವನೆಂದು-ಒಳಗೊಳಗೇ ಆದರೂ ಬಡಿವಾರ ಮಾಡಿದರೆ ಯಜಮಾನನು ಗಮನಿಸಿ ಶಿಕ್ಷಿಸುತ್ತಾನೆ.

ಹಾಗೆಯೇ ಭಕ್ತನು ತನ್ನ ಯಜಮಾನನಾದ ಶಿವನಿಗಾಗಲಿ, ಅವನ ಪ್ರತಿನಿಧಿಯಾದ ಜಂಗಮಕ್ಕಾಗಲಿ ಮಾಡಿ ನೀಡಿ ದಾಸೋಹಂಭಾವದಿಂದಿರದೆ ಅಹಂಭಾವಿಯಾದರೆ ಸವಾಲೆಸೆದು ಕಾಡುತ್ತಾನೆ. ಮಾಡುವವನು ನೀನೆ ಮಾಡಿಸುವವನು ನೀನೆ ಎಂದು ಶಿವನಿಗೆ ವಿನಮ್ರವಾಗಿ ನಡೆದರೆ ಅವನನ್ನು ಶಿವನು ತನ್ನ ಅರ್ಧಾಸನದಲ್ಲಿ ತೊಡೆಯಲ್ಲಿ ತಲೆಯಲ್ಲಿ ಮೆರೆಸುತ್ತಾನೆ.

– ವ್ಯಾಖ್ಯಾನಕಾರರು

ಡಾ.ಎಲ್. ಬಸವರಾಜು

ಶ್ರೀಕುಮಾರ ತರಂಗಿಣಿ  ೨೦೨೩ ಎಪ್ರಿಲ್ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ ದೇವ ಕಾಯೋ ನೀ ಮಾಯಾತೀತನೆ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೩ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ನಾನು ಕಂಡ ಕುಮಾರ ಯೋಗಿ: ಲೇಖಕರು: ಪೂಜ್ಯ ಜ.ಚ.ನಿ
  4. ಷಟ್‌ಸ್ಥಲ : ಪರಿಕಲ್ಪನೆ :• ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  5. ದೃಷ್ಟಿ- ಸೃಷ್ಟಿ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  6. ವಚನ ವಾಙ್ಮಯದ ಮಹತ್ವ :ಫ. ಗು. ಹಳಕಟ್ಟಿ, ವಿಜಾಪೂರ
  7. ಅಪ್ಪ ಹಾನಗಲ್ಲ ಕುಮಾರೇಶ : ರಚನೆ:ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ
  8. ಆಡಿಯೋ೧ : ವಿಶೇಷ ಉಪನ್ಯಾಸ
  9. ಶ್ರೀಕುಮಾರೇಶ್ವರರ ಶಿಷ್ಯ ಸಂಪತ್ತು” ಪರಮಪೂಜ್ಯ
  10. ಶ್ರೀ ಮ.ನಿ.ಪ್ರ. ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳಿಂದ
  11. ಶ್ರೀ ಅನ್ನದಾನೇಶ್ವರ ದೇವಮಂದಿರಮಠ.ಸುಕ್ಷೇತ್ರ ಮಣಕವಾಡ
  12. ಆಡಿಯೋ ೨ : ದೇವ..ದೇವಾ..ಶ್ರೀಕುಮಾರೇಶ
  13. ಗಾಯನ: ಶ್ರೀಸಿದ್ಧೇಂದ್ರಕುಮಾರ ಹಿರೇಮಠ
  14. ರಚನೆ : ಶ್ರೀಕಂಠ. ಚೌಕೀಮಠ

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ