Editorial

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

“ಸುಕುಮಾರ”  ಮುದ್ರಣರೂಪದಲ್ಲಿ ದೈಮಾಸಿಕವಾಗಿ ,ಶ್ರೀ ಶಿವಯೋಗಮಂದಿರದ ಮುಖವಾಣಿಯಾಗಿ ಹೊರಹೊಮ್ಮಿದ ಪರ್ವಕಾಲದಲ್ಲಿ  , ಬ್ಲಾಗ ರೂಪದಲ್ಲಿ ಎರಡು ವರ್ಷಗಳಿಂದ ಮಾಸಿಕವಾಗಿ ನಿರಂತರವಾಗಿ  ಪ್ರಕಟಗೊಳ್ಳುತ್ತಿರುವ  ಮಾಸಿಕ ಬ್ಲಾಗ ಬರುವ ಮಾರ್ಚ ತಿಂಗಳಿಂದ  “ಶ್ರೀಕುಮಾರ ತರಂಗಿಣಿ” ಹೆಸರಿನಿಂದ ಆನಲೈನ ನಲ್ಲಿ ಮುಂದುವರೆಯುತ್ತದೆ ಎಂದು ತಿಳಿಸಲು ಹರ್ಷವೆನಿಸುತ್ತದೆ.

೧೯೧೧ ರಲ್ಲಿ ಪೂಜ್ಯ ಹಾನಗಲ್ಲ ಲಿಂ. ಶ್ರೀ ಕುಮಾರ ಶಿವಯೋಗಿಗಳು  ಶಿವಯೋಗಮಂದಿರದಲ್ಲಿ ಆರಂಭಿಸಿದ್ದ ತರಂಗಿಣಿ  ಮಾಸ ಪತ್ರಿಕೆಯನ್ನು ಆನ್ ಲೈನ ಮೂಲಕ  ಮತ್ತೋಮ್ಮೆ ಪ್ರಕಟಿಸುವ ಹೆಬ್ಬಯಕೆಯೊಂದಿಗೆ ನಮ್ಮದೊಂದು ಸಣ್ಣ ಪ್ರಯತ್ನ.

ಶ್ರೀಕುಮಾರ ತರಂಗಿಣಿ ಮಾರ್ಚ ೨೦೨೩  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ ಪರ ಶಿವಯೋಗದ ಸಾರ ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೨ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಮಾನವೀಯತೆಯ ಮಹಾಮೂರ್ತಿ ಸಿಂದಗಿ ಪಟ್ಟಾಧ್ಯಕ್ಷರು. ಲೇಖಕರು  :ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್
  4. ಶ್ರೀ ಚನ್ನಬಸವಣ್ಣನವರು• ಶ್ರೀ ನಿ.ಪ್ರ. ಶ್ರೀ ಶಿವಬಸವಸ್ವಾಮಿಗಳು ಹೊಸಮಠ,ಅಕ್ಕಿಹೊಂಡ, ಹುಬ್ಬಳ್ಳಿ
  5. ಕರಣ ಹಸಿಗೆ ಅರ್ಥಾತ್‌ ದೇಹಾತ್ಮವಿಜ್ಞಾನ ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  6. ಗುರುಪಥ-ಶಿವಪಥ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  7. . ಷಟ್‌ಸ್ಥಲ ಚಕ್ರವರ್ತಿ ಶ್ರೀ ಚನ್ನಬಸವರಾಜ ದೇವರು ನಿರೂಪಿಸಿದ ಕರಣ ಹಸಿಗೆ ಅರ್ಥಾತ್ ದೇಹಾತ್ಮ ವಿಜ್ಞಾನ: ಲೇಖಕರು ಡಾ.ಸ. ಜ. ನಾಗಲೋಟಿಮಠ
  8. . ಲಿಂಗಾಂಗ ಸಾಮರಸ್ಯ : ಪರಿಕಲ್ಪನೆ :ಲೇಖಕರು ಶ್ರೀ ಷಣ್ಮುಖಯ್ಯ ಅಕ್ಕೂರಮಠ
  9. ಆಡಿಯೋ೧ : ಶ್ರೀಕುಮಾರ ಭಜನ್
  10. ಆಡಿಯೋ ೨ : ದ್ಯಾಂಪುರ ಚನ್ನಕವಿಗಳು : ಪರಮಪೂಜ್ಯ ಶ್ರೀ ಮ.ನಿ.ಪ್ರ. ಕುಮಾರ ವಿರುಪಾಕ್ಷ ಹಾಸ್ವಾಮಿಗಳಿಂದ ಮೂರುಸಾವಿರ ವಿರಕ್ತಮಠ. ಉಪ್ಪಿನಬೆಟಗೇರಿ ಪೂಜ್ಯರಿಂದ.

ಶ್ರೀಕುಮಾರ ತರಂಗಿಣಿ  ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾ

ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ಈ ತಿಂಗಳು ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಎರಡು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಶ್ರೀ ಕುಮಾರೇಶ್ವರರ ಭಜನ್‌

“ಗುರುದೇವ  ದೇವ  ಗುರುಕುಮಾರ”

ರಚನೆ:ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ಶ್ರೀ ಸಿದ್ಧೇಶ್ವರಮಠ. ಹಂದಿಗುಂದ.

ಪರಿಕಲ್ಪನೆ :   ಶ್ರೀಕಂಠ ಚೌಕೀಮಠ ನವದೆಹಲಿ

ಗಾಯಕರು :ಶ್ರೀ ರಾಮಚಂದ್ರ ಹಡಪದ

ಕನ್ನಡ ಚಲನಚಿತ್ರ ರಂಗದ ಹಿನ್ನಲೆ ಗಾಯಕರು

 ನವೀನ ಸಂಗೀತ ಸಂಯೋಜನೆಯ ಅಲ್ಬಂ  ಲೋಕಾರ್ಪಣೆ ಮತ್ತು ಕವಿರತ್ನ ದ್ಯಾಂಪುರ ಚನ್ನಕವಿಗಳ  ಸಮಾಧಿ ಮಂಟಪ ಜೀರ್ಣೋದ್ಧಾರ ಮತ್ತು ಅಮೃತಶಿಲಾ ಮೂರ್ತಿಯ ಲೋಕಾರ್ಪಣೆಯನ್ನು ಅವರ ಪುಣ್ಯಸ್ಮರಣೆ -ಮಹಾಶಿವರಾತ್ರಿಯಂದು ನೆರವೇರಿಸವ ಹರ್ಷವನ್ನು ತಮ್ಮ ಜೊತೆ ಹಂಚಿಕೊಳ್ಳಲು ಸಂತಸವೆನಿಸುತ್ತದೆ.

ಈ ತಿಂಗಳು ಪೂಜ್ಯ ಶ್ರೀ ಕುಮಾರಶಿವಯೋಗಿಗಳ  ಪುಣ್ಯಾರಾಧನೆ ಒಂದು ವಿಶೇಷ ಲೇಖನ ವನ್ನು ಸುಕುಮಾರ ಪ್ರಕಟಿಸುತ್ತಿದೆ, “ಹಾನಗಲ್ಲ ಶ್ರೀಗಳವರ ವ್ಯಕ್ತಿತ್ವ”  ಲೇಖಕರು :ಪೂಜ್ಯಶ್ರೀ ಲಿಂ. ಬಸವಲಿಂಗ ಸ್ವಾಮಿಗಳು, ನವಲಗುಂದ.

ಈ ಲೇಖನದ ಮೊದಲ ಸಾಲುಗಳು ..

 “ ಈ ಜಗತ್ತೆಂಬ ರಂಗಭೂಮಿಗೆ ಬಂದವರು, ತಾವು ಹೋಗುವಾಗ ತಮ್ಮದೊಂದು ಚರಿತ್ರೆಯನ್ನು ಅನ್ಯರಿಗಾಗಿ ಬಿಟ್ಟುಹೋಗಬೇಕಾಗುತ್ತದೆ. ಬಾಳಿದವರ ಸಚ್ಚರಿತ್ರೆ ಮುಂದೆ ಬಾಳುವವರಿಗೆ ಆದರ್ಶಮಯವಾಗುವುದರಲ್ಲಿ ಸಂದೇಹವಿಲ್ಲ. ಜೀವನದಲ್ಲಿ ಬದುಕಿ ಸತ್ತವರಿಗಿಂತಲೂ ಸತ್ತು ಬದುಕಿದವರು ಮೇಲು, ಇಂತಹ ಆದರ್ಶವ್ಯಕ್ತಿಗಳ ಮಾಲಿಕೆಯಲ್ಲಿ ಮಧ್ಯಸ್ಥಾನವು ಹಾನಗಲ್ಲ ಶ್ರೀಗಳವರಿಗೆ ದೊರೆಯುವುದೆಂಬ ಹೇಳಿಕೆ ನಿಸ್ಸಂದೇಹವಾದುದು.

ಹನ್ನೆರಡನೆಯ ಶತಮಾನದ ಶ್ರೀ ಬಸವ ಮಹಾನುಭಾವರಂತೆ ಸಮಾಜದ ಧಾರ್ಮಿಕ, ನೈತಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಶ್ರೀಗಳವರು ಹೊಸದೊಂದು ವಾತಾವರಣವನ್ನೇ ನಿರ್ಮಿಸಿ, ಇಪ್ಪತ್ತನೆಯ ಶತಮಾನದ ಬಸವನೆನಿಸಿಕೊಂಡರು. ಇವರು ಕೇವಲ ಮುಖಕ್ಕೆ ಹಾಕಿದ ಮುಸುಕಿನ ಮರೆಯಲ್ಲಿ ಮಣಿಗಳನ್ನೆಣಿಸುತ್ತ ದೇವರನ್ನು ಹುಡುಕಲಿಲ್ಲ; ಅದರ ಜೊತೆಗೆ, ಜಗವ ತುಂಬಿದ ಶಿವತತ್ವವನ್ನು ಕಂಡು ನಲಿದು-ಸೇವಿಸುವ ಮಹಾಸ್ವಾಮಿಗಳಾಗಿದ್ದರು”

ಈ ಸಾಲುಗಳು ಸಾಮಾನ್ಯ ಸಾಲುಗಳಲ್ಲ ! ಅಸಮಾನ್ಯವ್ಯಕ್ತಿತ್ವ ವನ್ನು ವರ್ಣಿಸುವ ಅನರ್ಘ್ಯ ಸಾಲುಗಳು !!

ಫೆಬ್ರುವರಿ ೨೦೨೩  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “  ಪಾಹಿ ಶಿವ ನೀ ಪಾಹಿ ಶಿವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-21 : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಸಂಸ್ಕತಿ-ನಾಗರಿಕತೆ-ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ
  4. ಹಾನಗಲ್ಲ ಶ್ರೀಗಳವರ ವ್ಯಕ್ತಿತ್ವ -ಪೂಜ್ಯಶ್ರೀ ಲಿಂ. ಬಸವಲಿಂಗ ಸ್ವಾಮಿಗಳು, ನವಲಗುಂದ
  5. ಮೈಲಾರ ಬಸವಲಿಂಗ ಶರಣರು-ಡಾ. ಎಸ್. ವಿ. ಅಯ್ಯನಗೌಡರ.
  6. – ಶ್ರೀ ನಿರಂಜನ ಪ್ರಭು ಡಾ.ಚೆನ್ನಮಲ್ಲ ಮಹಾಸ್ವಾಮಿಗಳು ಶ್ರೀ ಸುವರ್ಣಗಿರಿ ಸಂಸ್ಥಾನ ವಿರಕ್ತಮಠ ಕನಕಗಿರಿ
  • ಇಷ್ಟಲಿಂಗ : ಪರಿಕಲ್ಪನೆ- ಡಾ. ಎಂ. ಶಿವಕುಮಾರಸ್ವಾಮಿ.
  • ಗುರುವೆ ಸುಜನಕುಲ ಕಲ್ಪತರುವೆ -ಶ್ರೀ ವೇ.ಮೂ.ಲಿಂ.ಪಂಡಿತ ಚೆನ್ನಬಸವ ಶಾಸ್ತ್ರಿಗಳು ಸೋ.ಹಿರೇಮಠ
  • ಹಾನಗಲ್ಲ ಸ್ವಾಮಿ ನಿಮಗೆ ವಂದಿಸುವೆ-ಪೂಜ್ಯ ಕೇದಾರನಾಥ ದೇವರು ಯಾಳವಾರ
  1. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

  1. ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿಅರ್ಪಿಸುವ“ ನೀನೇಕೆ ಮರೆಯಾದೆ ಗುರು ಸದಾಶಿವ”

ರಚನೆ: ಪೂಜ್ಯ ಶ್ರೀ ಕುಮಾರದೇವರು ಅಂತೂರುಬೆಂತೂರು

ಗಾಯನ: ಶ್ರೀಮತಿ ಉಷಾ ಪ್ರಭು ಹುನಗುಂದ್ ಕ್ಯಾಲಿಫೋರ್ನಿಯ.ಅಮೇರಿಕಾ

  1. ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿಅರ್ಪಿಸುವ“ಜಯ..ಜಯ.. ಶ್ರೀಕುಮಾರೇಶ”

ಸಂಗೀತ -ಗಾಯನ : ಶ್ರೀ ಸಿದ್ಧೇಂದ್ರಕುಮಾರ ಹಿರೇಮಠ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು,

ವಿರಾಟಪುರ ವಿರಾಗಿ” ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರ ಜೀವನ ಚರಿತ್ರೆ ಆಧಾರಿತ ಚಿತ್ರ ಬಿಡುಗಡೆಗೆ ಹಾರ್ದಿಕ ಶುಭಾಶಯಗಳನ್ನು ಕೋರುತ್ತ,

ಪರಮಪೂಜ್ಯ ಶ್ರೀ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು , ಶ್ರೀ ಗುರುದೇವ ಸೇವಾ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಿದ ,ಶ್ರೀ ಬಿ.ಎಸ್.ಲಿಂಗದೇವರು ಚಿತ್ರಕಥೆ ಬರೆದು ನಿರ್ದೇಶಿಸಿದ ಚಿತ್ರ “ವಿರಾಟಪುರ ವಿರಾಗಿ” ಪರಮ ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರ ಜೀವನ ಚರಿತ್ರೆ ಆಧಾರಿತ ಚಿತ್ರ ಬಿಡುಗಡೆಯ ದಿನಾಂಕ ೧೩ ಜನೆವರಿ ೨೦೨೩ ಎಂದು ಘೋಷಣೆಯಾಗಿರುವದು ಅತ್ಯಂತ ಸಂತೋಷದ ಸಂಗತಿ.

ಪ್ರಸ್ತುತ ಚಿತ್ರದ ಕಾರ್ಯಕಾರಿ ನಿರ್ಮಾಪಕತ್ವ ಹೊಣೆಹೊತ್ತು ಸತತ ಮೂರುವರ್ಷಗಳ ನಿರಂತರ ಪರಿಶ್ರಮದಿಂದ ನವದೆಹಲಿಯ ಹಾನಗಲ್ಲ ಶ್ರೀಕುಮಾರ ಶಿವಯೋಗಿ ಸೇವಾ ಸಮಿತಿ (ಟ್ರಸ್ಟ್)   ಕಾರ್ಯಕಾರಿ ನಿರ್ಮಾಪಕತ್ವದ ಎಲ್ಲ ಜವಾಬ್ದಾರಿಗಳನ್ನು ಭಕ್ತಿ ಶ್ರದ್ಧೆಯಿಂದ ಪೂರೈಸಿ ದಿ. 1 ಡಿಸೆಂಬರ್ 2022 ರಂದು ಪರಮಪೂಜ್ಯ ಶ್ರೀ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ಹಸ್ತಾಂತರಿಸಿದ ವಿಷಯವನ್ನು ಪ್ರಕಟಿಸಲು ಹೆಮ್ಮೆಯೆನಿಸುತ್ತದೆ.

ದಿ.29 ಫೆಬ್ರವರಿ 2020 ರಂದು ದೆಹಲಿಗೆ ದಯಮಾಡಿಸಿದ್ದ ಪರಮಪೂಜ್ಯ ಶ್ರೀ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು ,ನಮ್ಮ ಸೇವಾ ಸಮಿತಿಯು ವಾರಣಾಸಿಯಲ್ಲಿ ಲೋಕಾರ್ಪಣೆ ಮಾಡಿದ್ದ ಶ್ರೀಕುಮಾರೇಶ್ವರರ ಆಂಗ್ಲ ಭಾಷೆಯ ಸಾಕ್ಷ್ಯಚಿತ್ರ “ಯುಗಪುರುಷ”ವನ್ನು ಗಮನಿಸಿ ,ಕನ್ನಡ ಬೆಳ್ಳಿತೆರೆಗೆ ಶ್ರೀ ಕುಮಾರೇಶ್ವರರ ಚಿತ್ರ ನಿರ್ಮಿಸುವ ಜವಾಬ್ದಾರಿಯನ್ನು ನೀಡಿದ್ದರು.

30 ಸೆಪ್ಟೆಂಬರ್ 2020 ರಂದು ಚಲನಚಿತ್ರದ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕಾರ್ಯಾರಂಭ ಮಾಡಿದ  ದೆಹಲಿಯ ಸೇವಾ ಸಮಿತಿ, ಚಿತ್ರದ ಕಥಾಹಂದರ ,ಚೌಕಟ್ಟುಗಳನ್ನು ಯೋಜಿಸಿ  ಬೇಕಾದ ಎಲ್ಲ ಸಾಹಿತ್ಯಗಳನ್ನು ಮತ್ತು ಸಾಹಿತ್ಯಕೃತಿಗಳ ಅನುಮತಿ ಪತ್ರಗಳನ್ನು ಪಡೆದು   ಚಿತ್ರ ನಿರ್ದೇಶಕರಿಗೆ ಸಲ್ಲಿಸಿ, ಹಲವು ಬಾರಿ ದೆಹಲಿಯಿಂದ ಕರ್ನಾಟಕಕ್ಕೆ ಪ್ರಯಾಣ ಮಾಡಿ  ಚಿತ್ರ ನಿರ್ದೇಶಕರು ರಚಿಸಿ ಕೊಟ್ಟ ಕರಡುಪ್ರತಿ (ಸ್ಕ್ರಿಪ್ಟ) ಗೆ ಹಲವು  ಚಾರಿತ್ರಿಕ ವಿಷಯಗಳ ತಿದ್ದುಪಡಿಗಳನ್ನು ಮಾಡಿ , ಹಿರಿಯ ಸ್ವಾಮೀಜಿಗಳ ಮುಂದೆ ಗಮನಕ್ಕೆ ತಂದು ಅನುಮತಿ ಪಡೆದು , 2021 ನವಂಬರ ದಂದು ಹೊರಾಂಗಣ ಚಿತ್ರೀಕರಣವನ್ನು ಆರಂಭಿಸಿ  ಆಗಸ್ಟ್ ತಿಂಗಳು 2022ಕ್ಕೆ ಸಂಪೂರ್ಣ  ಹೊರಾಂಗಣ ಚಿತ್ರೀಕರಣವನ್ನು ಮುಕ್ತಾಯ ಕನ್ನಡ ಚಲನಚಿತ್ರ ಮಂಡಳಿಯ ನಿಯಮಾವಳಿಗಳಂತೆ  ಹೊರಾಂಗಣ ಚಿತ್ರೀಕರಣ ನಡೆಯಿಸಲಾದ ಎಲ್ಲ ಸ್ಥಳಗಳಲ್ಲಿ ಜಿಲ್ಲಾಡಳಿತ,ಪೊಲೀಸ ಠಾಣಾಧಿಕಾರಿಗಳ ಪೂರ್ವಾನುಮತಿ ,ಪುರಸಭೆಗಳ ಅನುಮತಿ, ಮಠಗಳ,ವಿಶ್ವವಿದ್ಯಾಲಯದ,   ಹಳೆಯ ಮನೆಗಳ ವಾಡೆಗಳ ಮಾಲೀಕರ ಪೂರ್ವಾನುಮತಿಗಳನ್ನು ಪಡೆದು ನಿರ್ವಹಿಸಿದ ಕಾರ್ಯ  ನಮ್ಮ ಸೇವಾ ಸಮಿತಿಗೆ  ದೊಡ್ಡ ಸವಾಲನ್ನೇ ಸೃಷ್ಠಿಸಿತು. ಚಿಕ್ಕಪುಟ್ಟ ಒಂದೆರಡು ತೊಂದರೆಗಳನ್ನು ಬಿಟ್ಟರೆ ,ಯಾವ ತೊಂದರೆಯೂ ಇಲ್ಲದೇ ಚಿತ್ರ ನಿರ್ಮಾಣವಾಗಿದ್ದು  ನಮ್ಮ ಸುದೈವವೇ ಸರಿ.

ಯಾವುದೇ  ಸಂಭಾವನೆ ಮತ್ತು ಹಣಕಾಸು ವ್ಯವಹಾರಗಳ  ಒಪ್ಪಂದವಿಲ್ಲದ ಪ್ರಾಂಜಲ ಸೇವೆಯ ನವದೆಹಲಿಯ ಹಾನಗಲ್ಲ ಶ್ರೀಕುಮಾರ ಶಿವಯೋಗಿ ಸೇವಾ ಸಮಿತಿಯ  ಶ್ರಮ, ಮಾನವ ಸಹಜ  ಮತ್ತು   ಚಾಣುಕ್ಯ   ಪ್ರವಾಹಕ್ಕೆ ಸಿಲುಕಿ,  ಇತಿಹಾಸದ ಕಾಲಗರ್ಭದಲ್ಲಿ ಅನಾಮಧೇಯವಾಗಿ ಲೀನವಾಗುವ ಲೌಕಿಕ ಲೀಲೆಯ ಇಳಿಹೊತ್ತಿನಲ್ಲಿ ಹೇಳಿ ಹೋಗುವ ಕೃತಜ್ಞತಾ ಸಂಸ್ಕೃತಿಯಂತೆ,  ನಾಡಿನ ಹಲವಾರು ಪೂಜ್ಯ ಜಗದ್ಗುರುಗಳು, ಮಹಾಸ್ವಾಮಿಗಳು, ಭಕ್ತಾದಿಗಳು  , ಕರ್ನಾಟಕ ಸರಕಾರದ ಮಂತ್ರಿ ಮಹೋದಯರು ಮತ್ತು ರಾಜಕೀಯ ಧುರಿಣರು ಪರಮಪೂಜ್ಯ ಶ್ರೀಕುಮಾರ ಶಿವಯೋಗಿಗಳ ಮೇಲಿಟ್ಟಿರುವ ಅನುಪಮ ಭಕ್ತಿ ಗೌರವಗಳಿಂದ ,ಕೆಲವೊಂದು ಪ್ರದೇಶಗಳಲ್ಲಿ ನಾವು ಅಪರಿಚಿತರಾದರೂ ನಮಗೆ ತೋರಿದ ಪ್ರೀತಿ ಅಂಥಕರುಣೆ ಮತ್ತು  ಸಹಾಯಗಳನ್ನು , ನೆನೆದು ಕೃತಾರ್ಥರಾಗಲು ಬಯಸುತ್ತೇವೆ..

ಜನೆವರಿ ೨೦೨೩  ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “  ಪಾಹಿ ಶಿವ ನೀ ಪಾಹಿ ಶಿವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೨೦ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. : ನಿಜಗುಣ ಶಿವಯೋಗಿಕೃತ ಕೈವಲ್ಯ ಪದ್ಧತಿಯಲ್ಲಿಯ ‘ʼಜ್ಞಾನಪ್ರತಿಪಾದನ ಸ್ಥಲʼ’ಸ. ಸ. ಮಾಳವಾಡ
  4.  ದ್ಯಾಂಪುರದ ಚನ್ನಕವಿಗಳ ಮಂತ್ರ ರಹಸ್ಯ-ಕೃತಿ ಕುರಿತು  ಡಾ|| ಎಸ್. ಎಂ. ಹಿರೇಮಠ
  5. ಶೈವ-ವೀರಶೈವ : ಪರಿಕಲ್ಪನೆ • ಡಾ. ಬಿ. ವ್ಹಿ. ಶಿರೂರ
  6. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

  • ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿ
  • ಅರ್ಪಿಸುವ
  • “ ನೀನೇಕೆ ಮರೆಯಾದೆ ಗುರು ಸದಾಶಿವ”

ರಚನೆ: ಪೂಜ್ಯ ಶ್ರೀ ಕುಮಾರದೇವರು ಅಂತೂರುಬೆಂತೂರು

ಗಾಯನ: ಶ್ರೀಮತಿ ಉಷಾ ಪ್ರಭು ಹುನಗುಂದ್ ಕ್ಯಾಲಿಫೋರ್ನಿಯ.ಅಮೇರಿಕಾ

  • ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿ
  • ಅರ್ಪಿಸುವ
  • “ಜಯ..ಜಯ.. ಶ್ರೀಕುಮಾರೇಶ”

ಸಂಗೀತ -ಗಾಯನ : ಶ್ರೀ ಸಿದ್ಧೇಂದ್ರಕುಮಾರ ಹಿರೇಮಠ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

 

ಸಹೃದಯ ಓದುಗರಿಗೆ ,

ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಇಂದು ಕನ್ನಡಿಗರೆಲ್ಲಾ ಒಟ್ಟಿಗೆ ಇದ್ದೇವೆ. ಇದಕ್ಕೆ ಕಾರಣ ಕರ್ನಾಟಕದ ಏಕೀಕರಣ. ಹೌದು.. ಈಗಿನ ಕರ್ನಾಟಕ 20ಕ್ಕೂ ಹೆಚ್ಚು ವಿವಿಧ ಪ್ರಾಂತ್ಯಗಳಾಗಿ ಹರಿದು ಹಂಚಿ ಹೋಗಿತ್ತು. ಮುಂದೊಂದು ದಿನ ದೊಡ್ಡ ದೊಡ್ಡ ಹೋರಾಟಗಳು ನಡೆದು ಕರ್ನಾಟಕ ಏಕೀಕರಣ ಆಗಿ ಕರ್ನಾಟಕ ರಾಜ್ಯ ಹುಟ್ಟಿಕೊಂಡಿತು.

ಏಕೀಕರಣ ಚಳುವಳಿ 19ನೇ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳು ಮಾತ್ರ ಇದ್ದವು.

ಛಿದ್ರ ಛಿದ್ರವಾಗಿ ಹರಿದು ಯಾವ್ಯಾವುದೋ ಪ್ರಾಂತ್ಯಗಳಿಗೆ ಸೇರಿದ್ದೆಲ್ಲವ್ರನ್ನೂ ಒಂದುಗೂಡಿಸಬೇಕು ಅನ್ನೋ ಕಲ್ಪನೆಯೇ ಒಂದು ಅದ್ಭುತವಾಗಿತ್ತು. ಆರಂಭದಲ್ಲಿ ಯಾರೂ ಕೂಡ ಇದಕ್ಕೆ ನೀರು ಮತ್ತು ಸೊಪ್ಪು ಹಾಕದಿದ್ದರೂ ಮುಂದೊಂದು ದಿನ ಕಲ್ಪನೆಗಳಿಗೆ ಹೊಸ ಬೇರು, ಚಿಗರು ಮೊಳಕೆಯೊಡೆಯುವ ಕಾಲ ಕೂಡ ಪರಿಪಕ್ವವಾಗಿತ್ತು.

ಈ ತಿಂಗಳ ಸುಕುಮಾರ ಸಂಚಿಕೆ ಈ ಇತಿಹಾಸದ ಮೇಲೊಂದು ಹೊಸ ಬೆಳಕನ್ನು ಚಲ್ಲುತ್ತಿದೆ, ಅದು ಕರ್ನಾಟಕದ ಏಕೀಕರಣಕ್ಕೆ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆ….

ಪೂಜ್ಯ ಹಾನಗಲ್ಲ  ಕುಮಾರ ಶಿವಯೋಗಿಗಳವರು ಕರ್ನಾಟಕ ಏಕೀಕರಣ ಎಂಬ ವಿಷಯದ ಮೇಲೆ ಹೋರಾಟ ಮಾಡದೇ ಇರಬಹದು .ಆದರೆ ಒಂದು ಕರ್ನಾಟಕದ ಬಹುಸಂಖ್ಯಾತ  ಸಮುದಾಯದ ಏಕಿಕರಣಕ್ಕೆ ಮಾಡಿದ ಹೋರಾಟ ಮತ್ತು ಅದರ ಫಲಶೃತಿಯ ಪರಿಣಾಮಗಳು ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆಗೆ ಅಂತರ್ಗಾಮಿಯಾಗಿ ಚೈತನ್ಯವನ್ನು ತುಂಬಿತು ಎನ್ನುವದರಲ್ಲಿ ಎರಡು ಮಾತಿಲ್ಲ.

ನವಂಬರ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಮಾನವಾ, ನೀನಾರೋ ? ಕಾಯಾ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೮ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಕರ್ನಾಟಕದ ಏಕೀಕರಣಕ್ಕೆ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆ:ಲೇಖಕ ಶ್ರೀಕಂಠ.ಚೌಕೀಮಠ.
  4. ಪುರುಷಾರ್ಥ ಚತುಷ್ಟಯ : ಲೇಖಕರು ಪರಮಪೂಜ್ಯ ಶ್ರೀ ಜಗದ್ಗುರು ತೋಂಟದ ಡಾ.ಸಿದ್ಧರಾಮ ಮಹಾಸ್ವಾಮಿಗಳು, ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ.
  5. ತೋಂಟದ ಸಿದ್ಧಲಿಂಗ ಶಿವಯೋಗಿಗಳ  ಜೀವನ ಹಾಗೂ ಸಂದೇಶ ಲೇಖಕರು: ಡಾ. ವಿ. ಜಿ. ಪೂಜಾರ
  6. ಷಣ್ಮುಖ ಶಿವಯೋಗಿಗಳು; ಇತಿವೃತ್ತ ಮತ್ತು ಕೃತಿಗಳು : ಲೇಖಕರು ಡಾ||  ಸಿ .ನಾಗಭೂಷಣ
  7. ಪೂರ್ಣತ್ವಕಾರ ಶ್ರೀಷ.ಬ್ರ. ಲಿಂ ಡಾ||ಗುರುಸಿದ್ಧ ದೇವ ಶಿವಾಚಾರ್ಯ ಮಹಾಸ್ವಾಮಿಗಳು, ಲೇಖಕರು ಶ್ರೀ ಮಲ್ಲನಗೌಡ  ಹಿರೇಸಕ್ಕರಗೌಡ್ರ , ಗದಗ
  8. ಶ್ರೀ ಹಾನಗಲ್ಲ ಕುಮಾರೇಶ್ವರರ ಪದಗಳು ರಚನೆ: ಶ್ರೀ ವೇ. ಮೂ.ಲಿಂ.ಪಂಡಿತ ಚೆನ್ನಬಸವ ಶಾಸ್ತ್ರಿಗಳು.
  9. ಸುಕುಮಾರಗೆ ಸುಪ್ರಭಾತ. ರಚನೆ: ಡಾ. ಶಿವಯೋಗಿ ದೇವರು ಕಾರಂಜಿಮಠ ಬೆಳಗಾವಿ
  10. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

 

ಸಹೃದಯ ಓದುಗರಿಗೆ ,

ಕಳೆದ ಸಪ್ಟಂಬರ ತಿಂಗಳು ಪೂರ್ತಿ ಕರ್ನಾಟಕ , ಮಹಾರಾಷ್ಟ್ರ ಮತ್ತು ದೆಹಲಿಗಳಲ್ಲಿ ಜರುಗಿದ ಪೂಜ್ಯ ಹಾನಗಲ್ಲ ಶ್ರೀ ಕುಮಾರಶಿವಯೋಗಿಗಳ ಜಯಂತಿ ಮಹೋತ್ಸವ ಅಭೂತಪೂರ್ವವಾಗಿದ್ದವು.

ಪೂಜ್ಯಜಗದ್ಗುರು  ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಬರೆದ ಲೇಖನದ ಸಾಲುಗಳು ಅತ್ಯಂತ ಅರ್ಥಗರ್ಭಿತ

ಕುಮಾರ ಶಿವಯೋಗಿಗಳು ಏನು ಮಾಡಿದ್ದಾರೆ ಏನ್ನ ಬೇಕಿಲ್ಲ; ಏನು ಮಾಡಿಲ್ಲ ಎಂದು ಕೇಳಬೇಕು. ನಡೆಗಲಿಸಿದ, ನುಡಿಗಲಿಸಿದ, ಉಡಗಲಿಸಿದ, ಉಣಗಲಿಸಿದ ಏನೆಲ್ಲವನ್ನೂ ಅರುಹಿ, ಇಲ್ಲಿ ಸಲ್ಲಿ, ಎಲ್ಲೆಲ್ಲಿಯೂ ಸಲ್ಲುವ ಬಲ್ಲಿದರನ್ನಾಗಿಸಿದ ಜನತೆಯನ್ನು, ಅವರು ಪವಾಡಗಳನ್ನು ಮಾಡಲಿಲ್ಲ; ಅವರ ಜೀವನವೇ ಒಂದು ದೊಡ್ಡ ಪವಾಡ. ಅವರ ಜೀವನವೇ ತೆರೆದಿಟ್ಟ ಪುಸ್ತಕ.

 ಸಮಗ್ರ ಅರವತ್ತೂರು ವರ್ಷದ ತಮ್ಮ ಜೀವಿತ ಕಾಲದಲ್ಲಿ : ನಾಡು, ನುಡಿ, ಧರ್ಮ, ಸಮಾಜ ಇವುಗಳ ಚಿಂತನೆಯಲ್ಲಿ ಸ್ವಸ್ವಾಸ್ಥ್ಯವನ್ನು ಗಮನಿಸದೆ, ಅವಿಶ್ರಾಂತವಾಗಿ ದುಡಿದು, ಮೈ ಮುಪ್ಪಾಗಿದ್ದರೂ ಮನ ಮುಪ್ಪಾಗದ ತೇಜಸ್ವಿ ಶಿವಯೋಗಿಗಳು, ಕಾಯಿಲೆಯಿಂದ ಹಾಸಿಗೆ ಹಿಡಿದಾಗಲೂ, ಲೋಕದ ಲೋಗರ ಕಲ್ಯಾಣದ ಬಗ್ಗೆ ಚಿಂತಿಸುತ್ತಿದ್ದರು. ಆರೋಗ್ಯದ ಬಗ್ಗೆ  ವಿಚಾರಿಸಿದಾಗ ನೊಂದು : ʼʼ ನನ್ನ ಆರೋಗ್ಯ ಏನು ಮಾಡ್ತಿರಿ, ಸಮಾಜದ ಬಗ್ಗೆ ಯೋಚಿಸಿ ಕಾರ್ಯಪ್ರವೃತ್ತರಾಗಿರಿ; ಎಚ್ಚರಾಗಿ ಜಾಗ್ರತೆ ಗುರಿಯನ್ನು ಸಾಧಿಸಿರಿ ʼʼಎನ್ನುತ್ತಿದ್ದರು. ಕೊನೆಯಲ್ಲೂ ಈ ಸಮಾಜ, ಸಮಾಜ ” ಎಂದು ಕನವರಿಸುತ್ತಿದ್ದುದಲ್ಲದೆ, ಅವಶ್ಯ ಬಿದ್ದರೆ ಮತ್ತೊಮ್ಮೆ ಜನ್ಮವೆತ್ತುವೆನೆಂದು ನುಡಿದ ಆ ಜ್ಯೋತಿ, ಮಹಾ ಜ್ಯೋತಿಯಲ್ಲಿ ಒಡವೆರೆದು ಒಂದಾಗಿ, ನಾಡ ನಂದಾದೀಪವಾಗಿ ಎಲ್ಲರ ಹೃನ್ಮಂದಿರದಲ್ಲಿ ಬೆಳಗುತ್ತಿದೆ.

ಅಕ್ಟೋಬರ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಬೋಧವ ಕೊಡು ದೇವ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೭ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಶಿವಯೋಗಮಂದಿರದ ಮೊದಲ ಸಪ್ತರ್ಷಿಗಳು : ಸೌಜನ್ಯ “ಬೆಳಗು”
  4. ಶಾಖಾ ಶಿವಯೋಗಮಂದಿರಗಳು : ಸೌಜನ್ಯ “ಬೆಳಗು”
  5. ಯುಗಾದಿ ಲೇಖಕರು : ಲಿಂ. ಡಾ :ಗುರುಸಿದ್ದದೇವ ಶಿವಾಚಾರ್ಯ ಮಹಾಸ್ವಾಮಿಗಳು, ಕೆಳದಿ. ಸಂಸ್ಥಾನ ರಾಜಗುರು ಹಿರೇಮಠ, ಕೆಳದಿ,-ಶಿವಯೋಗಮಂದಿರ – ಮಂಗಳೂರು
  6. ಯೋಗಪರಂಪರೆಯ ಇತಿಹಾಸ
  7. ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಶ್ರೀ ಮಲ್ಲಿಕಾರ್ಜುನದೇವರು, ಬಿ. ಎ., ಆನಂದಪುರಂ
  8. ಸದಾಶಿವ ಲೀಲೆ ; ಕವಿರತ್ನ ದ್ಯಾಂಪುರ ಚನ್ನಕವಿಗಳು
  9. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ ,

ಪವಿತ್ರ ಸಪ್ಟಂಬರ್‌ ತಿಂಗಳು ಪರಮಪೂಜ್ಯ ಹಾನಗಲ್ಲ ಕುಮಾರ ಶಿವಯೋಗಿಗಳು  ಭುವಿಗೆ ಅವತರಿಸಿ ಬಂದ ವಿಷೇಶ ತಿಂಗಳು.

“ಕತ್ತಲುಂಡ ಸಮಾಜಕ್ಕೆ ಬೆಳಕಾಗಿ ಬಂದ ಶಿವಯೋಗಿಗಳ ಕುರಿತು ಈ ತಿಂಗಳು ಪ್ರಕಟಿಸಿದ ವಿಶೇಷ ಲೇಖನಗಳಲ್ಲಿ ಒಂದಾದ “ಋಣ ವಿಮುಕ್ತರು” ಲೇಖನದ ಈ ಸಾಲುಗಳು ಅತ್ಯಂತ ಅರ್ಥಪೂರ್ಣ.

ವ್ಯಕ್ತಿಯೊಬ್ಬ ಈ ಭೂಮಿಯ ಮೇಲೆ ಹುಟ್ಟುತ್ತಲೇ ಎಷ್ಟೋ ಋಣಗಳನ್ನು ಹೊತ್ತುಕೊಂಡೇ ಹುಟ್ಟಿ ಬರುತ್ತಾನೆ. ಮಾತಾಪಿತರ ಋಣ, ಮಾತೃಭೂಮಿಯ ಋಣ, ಗುರು ಋಣ, ಪರಿವಾರದ ಋಣ, ಅನ್ನದ ಋಣ, ಧರ್ಮದ ಋಣ, ಸಮಸ್ತ ಸಮಾಜದ ಋಣ-ಹೀಗೆ ಋಣದ ಜಾಲವು ಅನಂತವಾಗಿದೆ. ಡಿ.ವಿ.ಜಿ.ಯವರು ಹೇಳುವ-

ಋಣವ ತೀರಿಸಬೇಕು ಋಣವ ತೀರಿಸಬೇಕು

ಋಣವ ತೀರಿಸುತ ಜಗದಾದಿ ಸತ್ವವನು

ಜನದಿ ಕಾಣುತ್ತದರೊಳ್ ಒಂದುಗೂಡಬೇಕು.

ಎಂಬ ಮಾತು ಅತ್ಯಂತ ಗಮನಾರ್ಹವಾಗಿದೆ. ವ್ಯಕ್ತಿ ತಾನು ಹೊತ್ತು ತಂದ ಹಲವು ಹತ್ತು ಋಣಗಳನ್ನು ಹೊತ್ತು ಹೊತ್ತಿಗೆ ತೀರಿಸಿ ಋಣಮುಕ್ತನಾಗ ಬೇಕಾಗುತ್ತದೆ. ಹೀಗೆ ಸಕಾಲಕ್ಕೆ ಸಮಸ್ತ ಋಣಗಳನ್ನು ಅರ್ಥಪೂರ್ಣವಾಗಿ ತೀರಿಸಿ ಋಣವಿಮುಕ್ತರೆನಿಸಿದವರು ಹಾನಗಲ್ಲ ಶ್ರೀ ಗುರು ಕುಮಾರೇಶರು.

ಸಪ್ಟಂಬರ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಪರ ಶಿವಯೋಗದ ಸಾರ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೬ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಹಾನಗಲ್ಲ ಕುಮಾರಸ್ವಾಮಿಗಳು • ಬಿ. ಶಿವಮೂರ್ತಿ ಶಾಸ್ತ್ರಿ
  4. ಹಾನಗಲ್ಲ ಕುಮಾರ ಶಿವಯೋಗಿಗಳು • ಪಂಡಿತ ನಾಗಭೂಷಣ ಶಾಸ್ತ್ರಿಗಳು.
  5. ಋಣವಿಮುಕ್ತರು *ಡಾ. ಬಸವರಾಜ ಜಗಜಂಪಿ
  6. ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳೂ ಶಿಕ್ಷಣ ಪ್ರಸಾರವೂ • ಶ್ರೀ ಶಿ. ಫ. ಮರಡೂರ ಧಾರವಾಡ
  7. ಶ್ರೀ ಹಾನಗಲ್ಲ ಕುಮಾರ ಸ್ವಾಮಿಗಳೂ ಪ್ರಾಣಿದಯೆಯೂ • ಶ್ರೀ ಆನೆಕೊಂಡದ ಮುಪ್ಪಣ್ಣನವರು, ಡಾವಣಗೆರೆ
  8. ಕುಮಾರ ಮಹಾಸ್ವಾಮಿಗಳು : ಮಹಿಳೆಯರ ಹಿತಚಿಂತಕರು • ಡಾ. ಗುರುದೇವಿ ಹುಲೆಪ್ಪನವರಮಠ
  9. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ ,

ಪೂಜ್ಯ ಹಾನಗಲ್ಲ ಶ್ರೀ ಕುಮಾರೇಶ್ವರರ  ನಿತ್ಯ ನೆನಹು ನಮಗೊಂದು ದಿವ್ಯ ಚೇತನ.

ನೀರು ಹರಿಯುತ್ತದೆ, ತನ್ನ ಸ್ವಾರ್ಥಕ್ಕಾಗಿ ಅಲ್ಲ .ಸರ್ವರ ತೃಷೆಯನ್ನು  ಹಿಂಗಿಸುವುದಕ್ಕಾಗಿ ಅದು ಗಿಡ ಮರಗಳನ್ನು ರಕ್ಷಿಸುತ್ತದೆ. ಜೀವಿಗಳಿಗೆ ಪ್ರಾಣಿಗಳಿಗೆ ಜೀವ ತುಂಬುತ್ತದೆ. ಹೂ ಅರಳಿಸುತ್ತದೆ. ಹಣ್ಣುಗಳಿಗೆ ಮಧುರತೆಯನ್ನು ತರುತ್ತದೆ,  ಹಾಗೆಯೆ ಪೂಜ್ಯರ ೬೩ ವರ್ಷಗಳ ಭೌತಿಕ ಬದುಕು ಸ್ವಾರ್ಥ ವಿಲ್ಲದ ತ್ಯಾಗದ ಬದುಕು .ಅವರ ತ್ಯಾಗದ ಫಲವಾಗಿಯೇ ಇಂದು ವೀರಶೈವ-ಲಿಂಗಾಯತ ಧರ್ಮೀಯರು ಗುಲಾಮಗಿರಿ ಮತ್ತು ಅನಕ್ಷರತೆಯಿಂದ ಹೊರಬಂದು ಸ್ವಾವಲಂಬನೆಯ ಮೂಲಕ ತಲೆಎತ್ತಿ ನಿಲ್ಲಲು ಸಾಧ್ಯವಾಗಿದೆಯೆಂದರೆ ಅತಿಶಯೋಕ್ತಿಯಲ್ಲ.

ಅಗಸ್ಟ ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಭೋದೇವ ಗಿರಿಜಾಧವ ಮುದವಿಲಸಿತ ಮದಹತ ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೫ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಸಿಂಗಿರಾಜ ಕವಿಕೃತ ಬಸವರಾಜ ಚಾರಿತ್ರ(  ಸಿಂಗಿರಾಜ ಪುರಾಣ )
  4. ಮುಪ್ಪಿನ ಷಡಕ್ಷರಿಗಳು : ಲೇಖಕರು :ಡಾ.ಚೆನ್ನಕ್ಕ ಪಾವಟೆ
  5. ಘನಮಠದಾರ್ಯ : ಲೇಖಕರು :ಡಾ|| ಬಸವರಾಜ ಸಬರದ
  6. ಕಡಕೋಳ ಮಡಿವಾಳಪ್ಪನವರು. : ಲೇಖಕರು :ಬಿ.ಮಹಾದೇವಪ್ಪ
  7. ಹಮ್ಮೀರ ಕಾವ್ಯ ಸಂಗ್ರಹ,ಸಂಪಾದಕರು ಶ್ರೀ ಎಮ್.ಎಸ್.ಸುಂಕಾಪುರ.ಸಂಗ್ರಹ: ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ
  8. ಆಡಿಯೋ ಬುಕ್‌ : Part 6A ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

  • ವಿಡಿಯೋ ೧ ಪಂಡಿತ ಕೈವಲ್ಯ ಕುಮಾರ ಗುರವ ಹಾಡಿರುವ ಪೂಜ್ಯ ಹಾನಗಲ್‌ ಶ್ರೀಕುಮಾರೇಶ್ವರರ ರಚನೆ
  • ವಿಡಿಯೋ ೨ ಶ್ರೀ ಸಿದ್ದೇಂದ್ರಕುಮಾರ ಹಿರೇಮಠ ತುಮುಕೂರು ಅವರು ಹಾಡಿದ ಪೂಜ್ಯ ಹಾನಗಲ್‌ ಶ್ರೀಕುಮಾರೇಶ್ವರರ ಕುರಿತು ಪದ್ಯ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ ,

ಇಂದು ನನಗೆ ಚಲನಚಿತ್ರ ನಿರ್ದೇಶಕ ಮಿತ್ರರು ಹತ್ತು ಸಾಲು ಗಳಲ್ಲಿ ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಕೊಡುಗೆಗಳ ಸಾರಾಂಶ ನೀಡಲು ಕೇಳಿಕೊಂಡರು.

ಸಂಗ್ರಹಿಸಲು ಕುಳಿತುಕೊಂಡಿರುವೆ,ಎಲ್ಲಿಂದ ಪ್ರಾರಂಭ ಮಾಡಲಿ ,ಎಲ್ಲಿಗೆ ಕೊನೆಗೊಳಿಸಲಿ ಎನ್ನುವ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.ಸಂಗ್ರಹದ ಪುಟ್ಟ ಪ್ರಯತ್ನದ ಸಾಲುಗಳು ಹೀಗಿವೆ

1.         ವ್ಯಕ್ತಿ ಯಾವನೇ ಇರಲಿ ಅವನು ಮಾನವೀಯತೆಯನ್ನು ಮೈಗೂಡಿಸಿಕೊಂಡು ಮೇಲೆರಬೇಕು, ಅನ್ಯರಿಗೂ ಬದುಕು ಕೊಡಬೇಕು, ಶ್ರೀ ಕುಮಾರ ಶಿವಯೋಗಿಗಳ ಸಂಕಲ್ಪವನ್ನು ಸಾಕಾರಗೊಳಿಸಲು ಲಿಂಗರಾಜ ದೇಸಾಯಿಯವರಂಥ ತ್ಯಾಗಿಗಳು ಮತ್ತು ಹಲವು ಗಣ್ಯ ವ್ಯಕ್ತಿಗಳು ಮುಂದೆ ಬಂದರು. ಈ ಮಹತ್ಕಾರ್ಯದ ಪ್ರತಿಫಲವಾಗಿ ಶ್ರೀ ಕುಮಾರ ಶಿವಯೋಗಿಗಳು 1904 ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಸಂಸ್ಠೆ ಯನ್ನು ಸ್ಥಾಪಿಸಿದರು.

2.        ಶ್ರೀ ಕುಮಾರ ಶಿವಯೋಗಿಗಳು  ಸಮಾಜವನ್ನು ಆಧುನಿಕ ಸಾಮಾಜಿಕ ದೃಷ್ಟಿಕೋನದಿಂದ ನೋಡಿ, ಯುವಜನಾಂಗದ ಗಮನವನ್ನು ತಮ್ಮ ಬದಲಾವಣೆಗಳತ್ತ ಸೆಳೆದು, ಅವರಲ್ಲಿ ಶಿಕ್ಷಣ ,ಕಾಯಕ ನಿಷ್ಠೆ ಮತ್ತು ಸಮಾಜ ನಿಷ್ಠೆ,ಯ ಚಿಂತನೆಯನ್ನು ಅಳವಡಿಸಿದರು.

3.        ಶ್ರೀ ಕುಮಾರ ಶಿವಯೋಗಿಗಳು ಸಮಕಾಲಿನ ಯುಗದ ಮಹಾನ್ ಸಾಮಾಜಿಕ ಚಿಂತಕರು, ಅವರು ಪ್ರತಿಯೊಂದು ಸಾಧನೆಗೂ ತ್ಯಾಗವೇ ಮೂಲವೆಂದು ಆಚರಿಸಿ ತೋರಿಸಿದವರು. “ಸ್ವಾಮಿಯ ಮೂಲ ಲಕ್ಷಣವೆಂದರೆ ಸರ್ವತ್ಯಾಗ” ಇದಕ್ಕಾಗಿಯೇ ವಿಶ್ವ ಶ್ರೇಷ್ಥ ಧಾರ್ಮಿಕ ಸಂಸ್ಥೆಯನ್ನು “ಶಿವಯೋಗಮಂದಿರ” ಎಂಬ ಹೆಸರಿನಲ್ಲಿ 1909ರಲ್ಲಿ ಸ್ಥಾಪಿಸಿದರು. ಶಿವಯೋಗಮಂದಿರದ ಮೂಲ ಉದ್ದೇಶ ಶ್ರೇಷ್ಠ ಮಠಾಧೀಶರನ್ನು ರೂಪಿಸುವದು.

4.        ಗಾನಯೋಗಿ ಪಂಚಾಕ್ಷರಿ ಗವಾಯಿಗಳನ್ನು ಬಾಲ್ಯದಿಂದ ಹಿಡಿದು  ಸ್ವತಂತ್ರವಾಗಿ ಬದುಕುವವರೆಗೂ ಕೈ ಹಿಡಿದು ನಡೆಸಿ ಸಂಗೀತ ಲೋಕಕ್ಕೆ ಅವರನ್ನು ಅರ್ಪಣೆ ಮಾಡಿದವರು ಶ್ರೀ ಕುಮಾರ ಶಿವಯೋಗಿಗಳು. ಸಂಗೀತ ಸಾಮ್ರಾಜ್ಯಕ್ಕೆ ಇದು  ಶ್ರೀಕುಮಾg ಶಿವಯೋಗಿಗಳ ಮೇರು ಕೊಡುಗೆ ಅಂಧರನ್ನು ಸಂಗೀತ ಸಾಮ್ರಾಜ್ಯದ ರಸ ಋಷಿಗಳನ್ನಾಗಿ ಮಾಡಿ ವಿಶ್ವವೇ  ಕಣ್ಣು ತೆರೆದು ನೋಡಿ ಕಿವಿ ತುಂಬ ಕೇಳಿ ಬಾಯಿ ತುಂಬ ಹೊಗಳುವಂತೆ ಮಾಡಿದ ಕೀರ್ತಿ  ಶ್ರೀ ಕುಮಾರ ಶಿವಯೋಗಿಗಳಿಗೆ ಸಲ್ಲುತ್ತದೆ.ಪಂಚಾಕ್ಷರಿ ಗವಾಯಿಗಳವರು  ಗದುಗಿನ ವೀರೇಶ್ವರಪುಣ್ಯಾಶ್ರಮವನ್ನು ಸ್ಥಾಪಿಸಿ ,ಆಶ್ರಮದ ಜವಾಬ್ದಾರಿಯನ್ನು ತಮ್ಮ ಸಮರ್ಥ ಶಿಷ್ಯ ಪುಟ್ಟರಾಜರಿಗೆ ವಹಿಸಿಕೊಟ್ಟರು.   ಬಡವ ಬಲ್ಲಿದÀ,ಮೇಲು ಕೀಳು,ಆ ಜಾತಿ ಈ ಜಾತಿ ಎಂಬ ಭೇಧಗಳಿಲ್ಲದೇ ಇಂದು ಗದುಗಿನ ವೀರೇಶ್ವರಪುಣ್ಯಾಶ್ರಮ ಸಮಾಜಕ್ಕೆ ಅದ್ಭುತ ಸೇವೆಯನ್ನು ಸಲ್ಲಿಸುತ್ತಿದೆ.

5.        ಶ್ರೀ ಕುಮಾರ ಶಿವಯೋಗಿಗಳ ಅನುಕಂಪ ಕೇವಲ ಮಾನವರಿಗಾಗಿ ಮೀಸಲಾಗಿರಲಿಲ್ಲ ಪ್ರಾಣಿಗಳಿಗೂ ತಮ್ಮ  ಮಾತೃ ಪ್ರೇಮವನ್ನು ತೋರಿಸಿದವರು.  ಶಿವಯೋಗಮಂದಿರದ ಗೋ ಶಾಲೆ ಇದಕ್ಕೊಂದು ಉತ್ತಮ ಉದಾಹರಣೆ.  ಅಂದು ನಿರ್ಮಿಸಿದ ಗೋ ಶಾಲೆ, ಇಂದಿಗೂ ತನ್ನ ಸ್ವಸ್ವರೂಪದಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು ಅಲ್ಲದೆ  ಶಿವಯೋಗಮಂದಿರದಿಂದ ವಿಭೂತಿ ನಿರ್ಮಾಣ ಕೇಂದ್ರಕ್ಕೆ, ಪ್ರಸಾದ ನಿಲಯಕ್ಕೆ ತನ್ನದೇ ಆದ ಕೊಡುಗೆ ಕೊಟ್ಟಿದೆ.

6.        ಗೋ ಶಾಲೆಯ ವ್ಯವಸ್ಥೆ, ವಿಭೂತಿ ನಿರ್ಮಾಣ ಕೇಂದ್ರ, ಪ್ರತಿ ತಿಂಗಳು ಶಿವಾನುಭವ ಗೋಷ್ಠಿಗಳ ವ್ಯವಸ್ಥೆ, ಪ್ರತಿನಿತ್ಯ ಪ್ರಸಾದ ವಿತರಣೆ, ಪುರಾಣ ಪ್ರವಚನ, ಶಿವ ಧರ್ಮದ ವ್ಯವಸ್ಥಿತ ಪ್ರಚಾರ, ಆಗಮ, ಉಪನಿಷತ್‍ಗಳ ಅಧ್ಯಯನ, ಅಪರೂಪದ ತಾಡಓಲೆಗಳ, ಗ್ರಂಥಗಳ ಸಂಗ್ರಹ, ಸಂಸ್ಕøತ ವಿಧ್ಯಾಪೀಠ, ವಟುಸಾಧಕರಿಗೆ ಮೇಲ್ಮಠದ ವ್ಯವಸ್ಥೆ  ಇವೆಲ್ಲವೂ  ಶ್ರೀಮದ್‍ಶಿವಯೋಗಮಂದಿರದ ಅಪರೂಪದ ಕ್ರಿಯಾಶೀಲತೆಗಳು, ಶ್ರೀ ಕುಮಾರ ಶಿವಯೋಗಿಗಳು ಶಿವಯೋಗಮಂದಿರದಲ್ಲಿ ರೇವಣಸಿದ್ದೇಶ್ವರ ವಾಚನಾಲಯವನ್ನು  ಸ್ಥಾಪಿಸಿ, ಗ್ರಂಥ ರಕ್ಷಣೆಯ ವ್ಯವಸ್ಥೆ ಮಾಡಿದರು, ವಚನ ಸಾಹಿತ್ಯ, ತಾಡಓಲೆಗಳ ಗ್ರಂಥಗಳು  ವೀರಶೈವ ತತ್ವಜ್ಞಾನದ ಅಪೂರ್ವ ಗ್ರಂಥಗಳ ರಾಶಿಗಳು, ವೇದ ವೇದಾಂತದ ಪುಸ್ತಕಗಳು, ಬೇರೆ ಬೇರೆ ಭಾಷೆಗಳಲ್ಲಿ ವೀರಶೈವ ತತ್ವಜ್ಞಾನದ  ರಚನೆಗಳು ಈ ಗ್ರಂಥಾಲಯದಲ್ಲಿ ಸಂರಕ್ಷಿಸಲ್ಪಟ್ಟಿವೆ.

7.         ಶ್ರೀ ಎಪ್.ಜಿ. ಹಳಕಟ್ಟಿಯವರ ತ್ಯಾಗ, ಶ್ರಮಗಳನ್ನು ಗುರುತಿಸಿದ ಶ್ರೀ ಕುಮಾರ ಶಿವಯೋಗಿಗಳು , ಮೊಟ್ಟ ಮೊದಲ ಬಾರಿಗೆ ಸಮಗ್ರ ಶಿವಶರಣರ ವಚನ ಸಾಹಿತ್ಯ ಸಂಗ್ರಹ ಮಾಡಿದರು.   ಇದು ವಚನ ಲೋಕಕ್ಕೆ ಶ್ರೀ ಕುಮಾರ ಶಿವಯೋಗಿಗಳ ಮಹತ್ತರ ಕೊಡುಗೆ, ವಚನ ಸಾಹಿತ್ಯ ಸಂಗ್ರಹಣೆಗೆ ಶ್ರೀ ಹಳಕಟ್ಟಿಯವರಿಗೆ ಸ್ಪೂರ್ತಿ ಸೆಲೆಯಾಗಿ ನಿಂತವರು ಶ್ರೀ ಕುಮಾರ ಶಿವಯೋಗಿಗಳು .

8.        ಶಿವಯೋಗಮಂದಿರದಲ್ಲಿ ಸ್ವಾಮಿಗಳಾಗುವವರ ಆರೋಗ್ಯ ಆತ್ಮಜ್ಞಾನ ರಕ್ಷಣಿ ಹಾಗೂ ಬೆಳವಣಿಗೆಗಾಗಿ ಯೋಗಾಭ್ಯಾಸವನ್ನು ಹುಟ್ಟುಹಾಕಿದವರು ಶ್ರೀ ಕುಮಾರ ಶಿವಯೋಗಿಗಳು , ಶರೀರ, ಮಾನಸಿಕ ಯೋಗಗಳ ಜೊತೆಗೆ ಶಿವಯೋಗದ ಕಲಿಕೆಗೂ ಅನುಕೂಲತೆಗಳನ್ನು ಮಾಡಿದರು.  ಅಷ್ಟಾಂಗಯೋಗದ ಜೊತೆಗೆ ಪತಂಜಲಿ ಯೋಗ ತರಬೇತಿಯನ್ನು ಪ್ರಾರಂಭಿಸಿ, ಉಳಿಸಿ ಬೆಳೆಸಿದರು.

9.        ಉದ್ಯಮ ಸೃಷ್ಟಿ : ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಸಂಪದಭಿವೃದ್ಧಿಗೆ ಮೂಲವಾದ ಆಧುನಿಕ ಯಾಂತ್ರಿಕ ಉದ್ಯೋಗಗಳ ಪ್ರಸ್ತಾವನೆಗೆ ಹೆಚ್ಚು ಶ್ರಮಪಟ್ಟವರು, ಶಿವಯೋಗಮಂದಿರದ ಆರ್ಥಿಕ ಭದ್ರತೆಯನ್ನು ಲಕ್ಷಿಸಿ, ಶ್ರೀಗಳವರು ಬಾಗಲಕೋಟೆಯಲ್ಲಿ ‘ಶಿವಾನಂದ ಜಿನ್ನಿಂಗ್‌ ಮತ್ತು ಪ್ರೆಸ್ಸಿಂಗ್‌  ಫ್ಯಾಕ್ಟರಿಯನ್ನು ಆಗ ಎರಡು ಲಕ್ಷ ರೂಪಾಯಿಗಳ ದೊಡ್ಡ ಬಂಡವಾಳ ಹಾಕಿ ಸ್ಥಾಪಿಸಿದರು, ಅದು ಶಿವಯೋಗಮಂದಿರ ಬೆನ್ನೆಲುವಿನಂತಿದೆ, ವಿರಕ್ತಸ್ವಾಮಿಗಳೊಬ್ಬರ ಉದ್ಯಮ ಸೃಷ್ಟಿಯ ಈ ಮಹದ್ಯೋಜನೆ ಎಂತಹ ಚಾಣಾಕ್ಷಸಿರಿವಂತನ ಉದ್ಯೋಗ ಪ್ರಗತಿಯ ಕಾರ್ಯದಕ್ಷತೆಯನ್ನೂ ಮೀರಿ ನಿಲ್ಲುತ್ತದೆ. ಶ್ರೀಗಳವರಲ್ಲಿಯ ಬುದ್ಧಿವೈಭವ, ದೂರದೃಷ್ಟಿ ಅಪರಿಮಿತವಾಗಿದ್ದವು, ಆಸಾಧಾರಣವಾಗಿದ್ದವು. ಅವರ ದೂರದೃಷ್ಟಿಯಿಂದಾಗಿ ಅಂದಿನ ಯುಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಹೊಸ ಸೃಷ್ಟಿಯೇನಿರ್ಮಿತವಾಗಿ ಅದು ಉಳಿದ ಉದ್ಯಮ ಪ್ರೇಮಿಗಳಿಗೂ ಮಾದರಿಯಾಯಿತು.

10.       ಬಾಗಲಕೋಟೆಯ ಶ್ರೀ ಗುರುಸಿದ್ದೇಶ್ವರ ಚಿತ್ರಮಂದಿರ:

ಶಿವಯೋಗಮಂದಿರ ಸಂಸ್ಥೆಯು ತನ್ನ ಕಾಲಮೇಲೆ ತಾನು ನಡೆಯುವಂತೆ ಮಾಡುವುದಕ್ಕಾಗಿ ಜಿನ್ನಿಂಗ್ ಫ್ಯಾಕ್ಟರಿ, ಕಬ್ಬಿಣ ವ್ಯಾಪಾರ ಕೇಂದ್ರ ಸ್ಥಾಪಿಸಿದರೆಂದು ಸ್ಪಷ್ಟ, ಬಾಗಲಕೋಟೆಯ ಶ್ರೀ ಶಿವಾನಂದ ಜೆನ್ನಿಂಗ್ ಫ್ಯಾಕ್ಟರಿಗೆ ಹೊಂದಿಕೊಂಡ ಪ್ರಾಯಶಃ ಶ್ರೀಗುರುಸಿದ್ಧೇಶ್ವರ ಚಿತ್ರಮಂದಿರವನ್ನು ೧೯೨೪ರ ವೇಳೆಗೆ ಸ್ಥಾಪನೆ ಮಾಡಿದರು.

ಈ ಕಾರ್ಯವನ್ನು ಸ್ವಾಮಿಗಳೇಕೆ ಕೈಕೊಂಡರು? ಎಂಬ ಪ್ರಶ್ನೆ ಉದ್ಭವಿಸುವುದು

ಸಹಜ. ಆದರೆ ಇದರ ಹಿಂದಿರುವ ಹಿನ್ನೆಲೆ ಉದ್ದೇಶ,ಕುಮಾರಶಿವಯೋಗಿಗಳ ಈ ಬಗೆಯ ಉದ್ದೇಶ ಮತ್ತು ದೂರದರ್ಶಿತ್ವವನ್ನು ಈ ಕೆಳಗಿನ

ಅಂಶಗಳಿಂದ ಮನವರಿಕೆ ಮಾಡಿಕೊಳ್ಳಬಹುದಾಗಿದೆ.

೧. ಕಲಾಕಾರರಿಗೆ ಪ್ರೋತ್ಸಾಹ.

೨. ರಂಗಕಲೆ, ಚಿತ್ರೋದ್ಯಮಕ್ಕೆ ಪ್ರೋತ್ಸಾಹ.

೩ ಸಂಗೀತ ವಾದನ ಕಲೆಗೆ, ಶಿವಧರ್ಮ ಪ್ರಚಾರಾದಿಗಳಿಗೆ ಪ್ರೋತ್ಸಾಹ.

ಈ ಮೂರು ಅವಶ್ಯಕತೆಗಳ ಜೊತೆಗೆ ಶಿವಯೋಗಮಂದಿರ ಸಂಸ್ಥೆಗೆ ಆರ್ಥಿಕ ಭದ್ರತೆ ಸರಿದೂಗಿಸಲು ಕೈಕೊಂಡ ಯೋಜನೆಯು.

ಒಂದು ಕಾಲಕ್ಕೆ ಬೇಕಾಗುವ ಅಗತ್ಯತೆಗಳನ್ನು ಗುರುತಿಸುವಲ್ಲಿ ಮತ್ತು ಅವುಗಳು ಸಾಕಾರಗೊಳ್ಳುವಲ್ಲಿ ಶ್ರೀ ಕುಮಾರಶಿವಯೋಗಿಗಳ ಕಾರ್ಯ ವೈಖರಿಯು ಮುಂದಿನವರಿಗೆ ಆದರ್ಶಪ್ರಾಯವಾಗಿ ಪರಿಣಮಿಸಿದೆ.

11.        ಭೂ ಅಭಿವೃದ್ಧಿ ಕಾರ್ಯ :

ಶಿವಯೋಗಮಂದಿರ ಸಂಸ್ಥೆಯು ಅಬಾಧಿತವಾಗಿ ಮುನ್ನಡೆಯಲೆಂಬ ಕಾರಣದಿಂದ ಶ್ರೀ ಕುಮಾರಶಿವಯೋಗಿಗಳು ನೂರಾರು ಎಕರೆ ಜಮೀನನ್ನು ಕೂಡಿಹಾಕಿದರು. ಅದರಲ್ಲಿ ನವೀನ ಮಾದರಿಯ ಕೃಷಿಯನ್ನು ಅಳವಡಿಸಿದರು. ಸ್ವತಃ ನೇಗಿಲು ಹಿಡಿದು ಉಳಿಮೆಯನ್ನು ಮಾಡಿದರು. ನೂರಾರು ಎತ್ತುಗಳನ್ನು, ಗೋವುಗಳನ್ನು ಸಾಕಿ ಸಲುಹಿದರು. ಸ್ವತಃ ಪರಿಸರ ಪ್ರೇಮಿಯಾಗಿದ್ದ ಶ್ರೀ ಕುಮಾರಶಿವಯೋಗಿಗಳು ಮಲಪ್ರಭಾ ನದಿಯಿಂದ ಭೂಮಿಗೆ ನೀರು ಒದಗಿಸಿ ಔಷಧೀಯ ಸಸ್ಯಗಳನ್ನು ಬೆಳೆಸಿ ಪ್ರಾಣಿ-ಪಕ್ಷಿಗಳನ್ನು ಸಂರಕ್ಷಿಸಿದ್ದಾರೆ. ಶಿವಯೋಗಮಂದಿರದ ಸುತ್ತಮುತ್ತ ಹಸಿರನ್ನು ಸಮೃದ್ಧಗೊಳಿಸಿದ್ದಾರೆ. ಅವರು ಬೆಳೆಸಿದ ಲತಾಮಂಟಪ, ವೃಕ್ಷಮೂಹ, ಔಷಧೀಯ ಸಸ್ಯ ಇಂದಿಗೂ ಶಿವಯೋಗಮಂದಿರದಲ್ಲಿ ಸಾಕ್ಷಿಯಾಗಿ ಬದುಕಿವೆ.

12.       ಶ್ರೀ ಕುಮಾರ ಸ್ವಾಮಿಗಳ ಪ್ರಭಾವ ಪರಿಮಳ  ನಾಡಿನ ತುಂಬೆಲ್ಲ  ಗುಪ್ತಗಾಮಿನಿಯಾಗಿ ಪಸರಿಸಿ ನಾಡಿನ ತುಂಬ ಹಲವಾರು ಶಿಕ್ಷಣ ಸಂಸ್ಥೆಗಳು ,ಶಾಲಾ ಕಾಲೇಜುಗಳು ಮತ್ತು ಬಡ ವಿಧ್ಯಾರ್ಥಿಗಳಿಗೆ ಉಚಿತ ವಸತಿ ಭೋಜನ ಶಾಲೆಗಳು ಆರಂಭಗೊಂಡು,ಜಾತಿ,ಮತ ಪಂಥಗಳನ್ನು ಪರಿಗಣಿಸದೆ ಸಮಾಜದ ಸರ್ವ ಜನತೆಗೆ ಸೇವೆಯ ಗುರಿಯನ್ನಾಗಿಸಿಕೊಂಡವು.

ಹಾಗೆ ಆರಂಭಗೊಂಡ ಶಿಕ್ಷಣ ಸಂಸ್ಥೆ ಗಳು ನೂರಾರು ಅವುಗಳಲ್ಲಿ

ಬಳ್ಳಾರಿಯ ವೀರಶೈವ ವಿದ್ಯಾವರ್ದಕ ಸಂಘ

ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ದಕ ಸಂಘ

ಬೆಂಗಳೂರಿನ ಕರ್ನಾಟಕ ವೀರಶೈವ ವಿದ್ಯಾಭಿವೃದ್ದಿ ಸಂಸ್ಥೆ

ಪ್ರಮುಖವಾದುವು.

ಆರ್ಥಿಕ ಸಂಕಷ್ಠದಲ್ಲಿದ್ದ ಬೆಳಗಾವಿಯ ಕೆ.ಎಲ್.ಇ ಶಿಕ್ಷಣ ಸಂಸ್ಥೆ ಆರ್ಥಿಕ ಸಹಾಯ ಮಾಡಿದ್ದು ಚಿರಸ್ಮರಣೀಯ

ಹಾನಗಲ್‌ ಶ್ರೀ ಕುಮಾರ ಶಿವಯೋಗಿಗಳ ಹೆಸರಿನಲ್ಲಿಯೇ ಆರಂಭಗೊಂಡ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯಗಳು   ಗಡಿನಾಡ ಭಾಗಗಳಾದ ಬೆಳಗಾವಿ ಮತ್ತು ಬೀದರಿನ ಭಾಲ್ಕಿ ಗಳು ಬಹುದೊಡ್ಡ ಕ್ರಾಂತಿಯನ್ನು ಮಾಡಿದ್ದು ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹದ್ದು

ಜುಲೈ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ದೇವ ದೇವ ಜೀವಗುಣವ ಜೀವದಿ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೪ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಶ್ರೀಗಳವರ ಮಹತ್ಕಾರ್ಯಗಳು ಲೇಖಕರು :- ಶ್ರೀ ಷ.ಬ್ರ. ಬಸವಲಿಂಗ ಪಟ್ಟಾಧ್ಯಕ್ಷರು, ತೆಲಸಂಗ
  4. ಯೋಗದ ಉಪಯೋಗವೇನು? ಲೇಖಕರು :ಶ್ರೀ ಕೊಟ್ಟೂರಸ್ವಾಮಿಗಳು ಜಡೆ ( ಪೂಜ್ಯ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು)
  5. ಶ್ರೀ ಕುಮಾರೇಶ್ವರರ ದಿವ್ಯ ಭೋದನೆಯ ಲೇಖನ ಮಾಲೆ-1 ಅರ್ಚನೆ :ಲೇಖಕರು : ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ
  6. ಶ್ರೀ ಕುಮಾರೇಶ್ವರರ ದಿವ್ಯ ಭೋದನೆಯ ಲೇಖನ ಮಾಲೆ-೨ ಅರ್ಪಣ            ಲೇಖಕರು :- ಪೂಜ್ಯ ಶ್ರೀ ಸಿದ್ದೇಶ್ವರ ದೇವರು ( ವಿಜಯ ಪ್ರಭು ದೇವರು) ಬೂದಗುಂಪ
  7. ಶ್ರೀ ಕುಮಾರೇಶ್ವರರ ದಿವ್ಯ ಭೋದನೆಯ ಲೇಖನ ಮಾಲೆ-೩ ಅನುಭಾವ ಲೇಖಕರು: ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು
  8. ವಚನ ಸಂಪಾದನೆ ಪರಂಪರೆ ಲೇಖಕರು: ಡಾ|| ಬಿ. ನಂಜುಂಡಸ್ವಾಮಿ
  9. ಹಾನಗಲ್ಲ ದೈವ ಶ್ರೀಕುಮಾರಸ್ವಾಮಿ  ಲೇಖಕರು ಡಾ. ಕಿರಣ ಪೇಟಕರ
  10. ವಿಡಿಯೋ ೧ Shri Kumareshwara Life & Contributions  : Smt Supriya  Antin Kaddargi
  11. ವಿಡಿಯೋ ೨ Yuga Purusha Shri Hanagal Kumareshwara  (Hindi) by Smt Sapna Jain
  12. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ

ಸುಕುಮಾರ ಬ್ಲಾಗ್‌ ನ ಎರಡನೇಯ ವಸಂತದ ಪಾದರ್ಪಣೆಯ ಮೊದಲ ಸಂಚಿಕೆಯನ್ನು ಅರ್ಪಿಸಲು ಸಂತಸವೆನಿಸುತ್ತಿದೆ.

ಇನ್ನು ಕೆಲವೇ ದಿನಗಳಲ್ಲಿ “ಸುಕುಮಾರ”ಹೊಸ ರೂಪದಲ್ಲಿ ಅನಾವರಣಗೊಳ್ಳಲಿದೆ.ಮೊದಲ ವಾರ್ಷಿಕೋತ್ಸವಕ್ಕೆ ಹಾರೈಕೆ,ಶ್ಲಾಘನೆ,ಮತ್ತು ಅತ್ಯುತ್ತಮ ಸಲಹೆಗಳನ್ನು ನೀಡಿದ ಪೂಜ್ಯರಿಗೆ ಹಾಗು ಸಹೃದಯ ಓದುಗರಿಗೆ ನನ್ನ ಕೃತಜ್ಞತೆಗಳು

ಜೂನ  ೨೦೨೨ ಸಂಚಿಕೆಯ ಲೇಖನಗಳ ವಿವರ

  1. ಕಾವ್ಯ : “ಭೋದೇವ ಗಿರಿಜಾಧವ ಮುದವಿಲಸಿತ ಮದಹತ” ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು
  2. ಧಾರವಾಹಿ: ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ      ಭಾಗ-೧೩ : ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ
  3. ಎಡೆಯೂರು ಸಿದ್ಧಲಿಂಗ ಶಿವಯೋಗಿ -ಲೇಖಕರು :ಹೀ.ಚಿ.ಶಾಂತವೀರಯ್ಯ
  4. ನಿಜಗುಣ ಶಿವಯೋಗಿ : -ಲೇಖಕರು  ವಿದ್ವಾನ್‌ ಜಿ.ವಿ.ಶಿವಸ್ವಾಮಿ.
  5. ಸರ್ಪಭೂಷಣ ಶಿವಯೋಗಿಗಳು -ಲೇಖಕರು  ಪ್ರೊ. ಜೆ.ಎಸ್.ಸಿದ್ದಲಿಂಗಯ್ಯ
  6. ಪಾದೋದಕ ಒಂದು ಅನಿಸಿಕೆ -ಲೇಖಕರು  ಡಾ. ಸ.ಜ.ನಾಗಲೋಟಮಠ
  7. ಮಹಿಳೆಯರ ಉನ್ನತಿಗಾಗಿ ಶರಣರು ಮಹೋನ್ನತ ಕಾರ್ಯ: ಅಖಿಲ ಭಾರತ ವೀರಶೈವ  ಮಹಾಸಭಾಧಿವೇಶನ ಮಹಿಳಾ ಪರಿಷತ್ತಿನಲ್ಲಿ ಶ್ರೀಮತಿ ಜಯದೇವಿ ಲಿಗಾಡೆಯವರ ಭಾಷಣ  ಸ್ಥಳ :ಕುಮಾರ ನಗರ ದಿ. ೨೨-೨-೧೯೬೦
  8. ಆಹಾರವೇ ಔಷಧಿ – ಔಷಧಿಯೇ ಆಹಾರ – ಒಂದು ವೈಜ್ಞಾನಿಕ ಪರಿಕಲ್ಪನೆ ಡಾ|| ಬಸವರಾಜ ಹಿರೇಮಠ
  9. ವಿಡಿಯೋ ೧ Shri Kumareshwara Life & Contributions  : Smt Supriya  Antin Kaddargi
  10. ವಿಡಿಯೋ ೨ Yuga Purusha Shri Hanagal Kumareshwara  (Hindi) by Smt Sapna Jain
  11. ಆಡಿಯೋ ಬುಕ್‌ : ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿ ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ

ತ್ರಿವಿಧಿ ಗಾಯನ : ಪೂಜ್ಯಶ್ರೀ ಕೊಟ್ಟೂರು ದೇಶಿಕರು, ಶ್ರೀ ಸಂಗನಬಸವೇಶ್ವರಮಠ, ದರೂರು

ನಿರೂಪಣೆ ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಸುಕುಮಾರ ಬ್ಲಾಗ ಗಾಗಿ ಪರಿವರ್ತನೆಗೊಳ್ಳುವ ಯುನಿಕೋಡ ಪ್ರತಿಗಳನ್ನು ಕೂಲಂಕುಷವಾಗಿ ನೋಡಿ ಮುದ್ರಣತಪ್ಪುಗಳನ್ನು ಸರಿಪಡಿಸಿ ಕೊಟ್ಟ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾಅವರಿಗೆ ತುಂಬು ಹೃದಯದ ಕೃತಜ್ಞತೆಗಳು

-ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕ -ಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ

ಸಹೃದಯ ಓದುಗರಿಗೆ

ನಮಸ್ಕಾರಗಳು.

ಸುಕುಮಾರ ಅಂತರ್ಜಾಲದ ಬ್ಲಾಗ್‌ ನ ವಾರ್ಷಿಕೋತ್ಸವ ಸಂಭ್ರಮದ ತಿಂಗಳು ಅಕ್ಷಯ ತೃತೀಯ ಬಸವಜಯಂತಿ.

ಸುಕುಮಾರದ ಬ್ಲಾಗ್‌ ನ ರಚನೆಯ ಹಿನ್ನಲೆ  ಒಂದು ಅವಿಸ್ಮರಣೀಯ ಅನುಭವ!.

ದಿನಾಂಕ ೮ ಎಪ್ರಿಲ್‌ ೨೦೨೧ ರಂದು ಪರಮ ಪೂಜ್ಯ ಮುಪ್ಪಿನ ಬಸವಲಿಂಗ ದೇವರು ಸದ್ಯದ ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ ಅವರ ಜೊತೆ ದೂರವಾಣಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಹುಟ್ಟಿದ ಒಂದು ಚಿಂತನೆ “ಸುಕುಮಾರ “ ದ ಬ್ಲಾಗ್‌ ಗೆ ನಾಂದಿ ಹಾಡಿತು.

ಪೂಜ್ಯರು ತಡಮಾಡದೆ, ಹಂಪಿಹೇಮಕೂಟ ಶೂನ್ಯಸಿಂಹಾಸನಾಧೀಶ್ವರ ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರು ಅಧ್ಯಕ್ಷರು, ಶ್ರೀ ಮದ್ವೀರಶೈವ ಶಿವಯೊಗ ಮಂದಿರ ಸಂಸ್ಥೆ, ಶಿವಯೋಗ ಮಂದಿರ. ಅವರಿಂದ ಅನುಮತಿ ಆಶೀರ್ವಾದಗಳನ್ನು ಕೊಡಿಸಿಯೇ ಬಿಟ್ಟರು .

ಪೂಜ್ಯರ ಬೆಂಬಲ ಮತ್ತು ಆಶೀರ್ವಾದಗಳು ನನ್ನಲ್ಲಿ ಹೊಸ ಹುರುಪು ಚೈತನ್ಯ ವನ್ನು ತುಂಬಿದವು  ಐತಿಹಾಸಿಕ ಸುಕುಮಾರಕ್ಕೆ ಓರ್ವ ವಿದ್ವಾಂಸರನ್ನು ಸಂಪಾದಕ ಸ್ಥಾನಕ್ಕೆ ಗೊತ್ತುಮಾಡಿದೆವು.ಆದರೆ ಅವರು ಒಪ್ಪಿಕೊಳ್ಳಲಿಲ್ಲ ಪೂಜ್ಯರು ಸಂಪಾದಕತ್ವದ ಹೊಣೆಯನ್ನು ನನಗೊಪ್ಪಿಸಿದರು

ಕೇವಲ ಒಂದು ತಿಂಗಳಲ್ಲಿ  ಬ್ಲಾಗ್‌ ನ ವಿನ್ಯಾಸ ,ಲೇಖನಗಳ ಸಂಗ್ರಹಗಳು ಸಿದ್ಧಗೊಂಡವು. ಹಲವು ತೊಂದರೆಗಳು ಆಕಸ್ಮಿಕವಾಗಿ ಬಂದರೂ ,ಬ್ಲಾಗನ ವಿನ್ಯಾಸಕಾರ ತಂಡದ ಸದಸ್ಯರು ಕೊರೊನಾ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದರೂ. ಬಸವ ಜಯಂತಿ -ಸುಕುಮಾರ  ಲೋಕಾರ್ಪಣೆಯ ಎರಡುದಿನದ ಮೊದಲು ನನ್ನ ಹಿರಿಯ ಸಹೋದರ  ಲಿಂಗೈಕ್ಯರಾದರೂ,ಸುಕುಮಾರ ೨೦೨೧ ರ ಬಸವಜಯಂತಿಯ ಪವಿತ್ರ ದಿನದಂದು  ಪೂಜ್ಯಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರ ಅಮೃತಹಸ್ತದಿಂದ ಲೋಕಾರ್ಪಣೆ ಗೊಂಡಿತು.

ಆರಂಭದಲ್ಲಿ ಕೇವಲ ೮೫ ಓದುಗರಿಂದ  ಅಂಬೆಗಾಲನ್ನಿಕ್ಕಿದ ಸುಕುಮಾರ ಬ್ಲಾಗ್‌ ಹನ್ನೊಂದು ತಿಂಗಳಲ್ಲಿ 90 ಅಪರೂಪದ ಲೇಖನಗಳು,14 ಪದ್ಯಗಳು , 4 ಅಡಿಯೋ ಬುಕ್‌ ,11 ಧಾರವಾಹಿಗಳು, ಮತ್ತು11 ಸಂಗೀತ ಮುದ್ರಿಕೆ ವಿಡಿಯೊಗಳನ್ನು  ಪ್ರಕಟಿಸಿ ದೇಶ ವಿದೇಶಗಳಿಂದ ಎಳು ಸಾವಿರಕ್ಕೂಹೆಚ್ಚು ಓದುಗರನ್ನು ಪಡೆದುಕೊಂಡಿದೆ.

ಈ ಯಶಸ್ಸಿನ ಹಿಂದೆ ನನ್ನನ್ನು ತಿದ್ದಿದ ,ಲೇಖನಗಳ ಯುನಿಕೋಡ ಪರಿವರ್ತನೆಯಲ್ಲಿ ಆಗುವ ತಪ್ಪುಗಳನ್ನು ಪರಿಷ್ಕರಿಸಿದ

ಪೂಜ್ಯಶ್ರೀ ಮ.ನಿ.ಪ್ರ. ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ-ಬಳ್ಳಾರಿ

ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು

ಪೂಜ್ಯಶ್ರೀ ಸಿದ್ಧಲಿಂಗ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಸೋಮಸಮುದ್ರ

ಪೂಜ್ಯಶ್ರೀ ಮರಿಕೊಟ್ಟೂರು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಶ್ರೀಧರಗಡ್ಡೆ

ಪೂಜ್ಯಶ್ರೀ ಸಿದ್ದೇಶ್ವರ ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಬೂದಗುಂಪಾ

ಪೂಜ್ಯರುಗಳನ್ನು ಈ ಸಂದರ್ಭದಲ್ಲಿ ಹೃದಯಪೂರ್ವಕ ನೆನೆದು ಕೊಳ್ಳುತ್ತೇನೆ.

ಸುಕುಮಾರ ಬ್ಲಾಗ್‌ನ ಪ್ರಕಟಣೆಗಳಿಗೆ ಲೇಖನಗಳನ್ನಕೊಟ್ಟು ಪ್ರೋತ್ಸಾಹಿಸಿದ

ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.ಮುಂಡರಗಿ.

ಪೂಜ್ಯಶ್ರೀ ಜಗದ್ಗುರು ತೋಂಟದ ಡಾ . ಸಿದ್ಧರಾಮ ಸ್ವಾಮಿಗಳು ,ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ.

ಪೂಜ್ಯ ಡಾ. ಅಭಿನವ ಕುಮಾರ ಚನ್ನಬಸವ ಸ್ವಾಮಿಗಳು ಓಲೆಮಠ ಜಮಖಂಡಿ

ಪೂಜ್ಯ ಶ್ರೀ ಮ.ನಿ.ಪ್ರ.ಶಿವಾನಂದ ಮಹಾಸ್ವಾಮಿಗಳವರು ,ಹಂದಿಗುಂದ

ಪೂಜ್ಯ ಪ್ರಭು ಚೆನ್ನಬಸವ ಸ್ವಾಮಿಗಳು ಮೋಟಗಿ ಮಠ ಅಥಣಿ

ಪೂಜ್ಯ ಮ.ನಿ.ಪ್ರ.ಶಿವಬಸವ ಸ್ವಾಮಿಗಳು  ವಿರಕ್ತಮಠ, ಅಕ್ಕಿಆಲೂರು

ಪೂಜ್ಯ ಡಾ.ಚೆನ್ನಮಲ್ಲ ಸ್ವಾಮೀಜಿ ಶ್ರೀ ಸುವರ್ಣಗಿರಿ ಸಂಸ್ಥಾನ ವಿರಕ್ತಮಠ ಕನಕಗಿರಿ

ಪೂಜ್ಯ ಸದಾಶಿವ ದೇವರು ವಳಬಳ್ಳಾರಿ.

ಪೂಜ್ಯರ ಪಾದಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವೆ

ಸುಕುಮಾರದ ಶ್ರೇಯೋಭಿವೃದ್ದಿಗೆ ಬೆಂಬಲ ಮತ್ತು ಆಶೀರ್ವಾದಗಳನ್ನು ದಯಪಾಲಿಸಿದ

ಶ್ರೀಮನ್ಮಹರಾಜ ನಿರಂಜನ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮಿಗಳು.  ಶ್ರೀ ಜಗದ್ಗುರು ಮೂರುಸಾವಿರಮಠ ಹುಬ್ಬಳ್ಳಿ

ಪೂಜ್ಯ ಮ.ನಿ.ಪ್ರ. ಶ್ರೀ ಸದಾಶಿವ ಸ್ವಾಮಿಗಳು ಹುಕ್ಕೇರಿಮಠ ಹಾವೇರಿ ಉಪಾಧ್ಯಕ್ಷರು ಶ್ರೀ  ಶಿವಯೋಗಮಂದಿರ

ಪೂಜ್ಯರ ಪಾದಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವೆ

ಹಾಗೂ ಲೇಖನಗಳನ್ನು ಬರೆದು ಕಳುಹಿಸಿಕೊಟ್ಟ ಎಲ್ಲ ಲೇಖಕರನ್ನು  ತುಂಬು ಹೃದಯದ ಕೃತಜ್ಞತೆಗಳೊಂದಿಗೆ ಸ್ಮರಿಸಿಕೊಳ್ಳತ್ತೇನೆ

ಸಹೃದಯರ ಕೈಸೇರುತ್ತಿರುವ ಹೊಸಹುಟ್ಟು ಪಡೆದ ಈ “ ಸುಕುಮಾರ ” ಪತ್ರಿಕೆಗೆ ಉಜ್ವಲ ಇತಿಹಾಸವಿದೆ. ಆ ಇತಿಹಾಸದ ಒಂದು ನೋಟವನ್ನು ಹೀಗೆ ಅವಲೋಕಿಸಬಹುದು :

ಲಿಂಗೈಕ್ಯ ಶ್ರೀ ಕುಮಾರಸ್ವಾಮಿಗಳವರಿಂದ ಸ್ಥಾಪನೆಗೊಂಡ ಶ್ರೀ ಶಿವಯೋಗಮಂದಿರ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿದ್ದ ಸಾಧಕರ ಶಿಕ್ಷಣಕ್ಕೆ ನೆರವಾಗಲೆಂಬ ಸದುದ್ದೇಶದಿಂದ ಆಗ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ನವಲಗುಂದದ ಪೂಜ್ಯ

ಶ್ರೀ ಬಸವಲಿಂಗ ಸ್ವಾಮಿಗಳವರು “ ಶ್ರೀ ರೇವಣಸಿದ್ದೇಶ್ವರ ವಾಚನಾಲಯ ‘ವನ್ನು ಮಂದಿರದ ಗ್ರಂಥಾಲಯದಲ್ಲಿ ಆರಂಭಿಸಿದರು. ಗ್ರಂಥಾಲಯ ಮತ್ತು ವಾಚನಾಲಯದಲ್ಲಿ ಲಭ್ಯವಿದ್ದ ಅಮೂಲ್ಯ ಪುಸ್ತಕ ಮತ್ತು ಉನ್ನತ ಮಟ್ಟದ ಪತ್ರಿಕೆಗಳ ಓದಿನಲ್ಲಿ ಸಾಧಕರು ತಮ್ಮನ್ನು ತಾವು ತೊಡಗಿಸಿಕೊಂಡರು. ಇದಲ್ಲದೆ ನಾಡಿನ ಹಿರಿಯ ಸಾಹಿತಿಗಳ ಮತ್ತು ವಿದ್ವಾಂಸರ ಪಾಂಡಿತ್ಯಪೂರ್ಣ, ವೈಚಾರಿಕ ಉಪನ್ಯಾಸ ಕೇಳುವ ಅವಕಾಶವೂ ಸಾಧಕರಿಗೆ ಆಗಾಗ ದೊರೆಯುತ್ತಿತ್ತು. ತತ್ಫಲವಾಗಿ ತಾವೂ ಏನನ್ನಾದರೂ ಬರೆಯಬೇಕೆಂಬ ಉತ್ಸುಕತೆ ಸಾಧಕರಲ್ಲಿ ಉಂಟಾಗುವುದು ಸಹಜ. ಅದನ್ನು ಗುರುತಿಸಿದ ಪೂಜ್ಯ ಶ್ರೀಗಳು, ಆ ಉತ್ಸಾಹ ಕಾರ್ಯರೂಪಕ್ಕಿಳಿಯಲೆಂದು ಹಾರೈಸಿ, ಆಹೊತ್ತಿಗಾಗಲೇ ಸ್ಥಾಪನೆಗೊಂಡಿದ್ದ “ ಶಿವಯೋಗಿ ಸಂಘ ‘ದ ಹಿರಿಯ ಸದಸ್ಯರ ಬೆನ್ನು ತಟ್ಟಿದರು. ಅರ್ಥಪೂರ್ಣ ಹೆಸರು ಹೊತ್ತ ʼ ಸುಕುಮಾರ ‘ ಪತ್ರಿಕೆಯನ್ನು ಅವರು ಹೊರತಂದೇ  ಬಿಟ್ಟರು(ಕ್ರಿ.ಶ. ೧೯೩೩), ಪತ್ರಿಕೆಯ ಉತ್ತಮಿಕೆಗಾಗಿ, ಅದರ ಶ್ರೇಯೋಭಿವೃದ್ಧಿಗಾಗಿ ಶಿವಯೋಗಿ ಸಂಘದ ಸದಸ್ಯರು ಒಮ್ಮನದಿಂದ ದುಡಿದರು.

 ಆಗ “ ಸುಕುಮಾರ ‘ ಪತ್ರಿಕೆ ಇದ್ದುದು ಕೈಬರಹದಲ್ಲಿ, ಅದನ್ನು ತಮ್ಮ  ಮುತ್ತಿನಂತಹ ಅಕ್ಷರಗಳಿಂದ ಬರೆಯುತ್ತಿದ್ದವರು ಶ್ರೀ ಚಂದ್ರಶೇಖರ ದೇವರು ಅಡೂರ (ಮುಂದೆ ಜ. ಚ. ನಿ.), ಅದರ ಮುಖಪುಟವನ್ನು ತಮ್ಮ ಭಾವದುಂಬಿದ ಚಿತ್ರಗಳಿಂದ

ವಿನ್ಯಾಸಗೊಳಿಸುತ್ತಿದ್ದವರು, ಅಂದಿನ ಹಿರಿಯ ಸಾಧಕರೂ ಹುಟ್ಟು ಕಲಾವಿದರೂ ಆಗಿದ್ದ ಶ್ರೀ ರೇವಣಸಿದ್ಧ ದೇವರು (ಮುಂದೆ ಹಾನಗಲ್ ಸದಾಶಿವ ಸ್ವಾಮಿಗಳು), ಪತ್ರಿಕೆಯ ಸಂಪಾದಕರು ಶ್ರೀ ಬಸವಲಿಂಗದೇವರು ಗುತ್ತಲ (ಮುಂದೆ ಬಸವಲಿಂಗ ಪಟ್ಟಾಧ್ಯಕ್ಷರು, ತೆಲಸಂಗ). ಹೀಗೆ ಅತ್ಯಂತ ಹುರುಪಿನಿಂದ ಆರಂಭಗೊಂಡ ಪತ್ರಿಕೆ ತದನಂತರದ  ವರ್ಷಗಳಲ್ಲಿ ಏಳು-ಬೀಳುಗಳನ್ನು ಕಂಡರೂ ನಿಲ್ಲದೆ ಕೈಬರಹ ರೂಪದಲ್ಲಿಯೇ ಮುಂದುವರಿದುಕೊಂಡು ಬಂದಿತು.

ಹುಬ್ಬಳ್ಳಿಯ ಮೂರುಸಾವಿರ ಮಠದ ಅಂದಿನ ಪೂಜ್ಯ ಜಗದ್ಗುರುಗಳಾಗಿದ್ದ ಶ್ರೀ ಗುರುಸಿದ್ಧರಾಜಯೋಗೀಂದ್ರ  ಮಹಾಸ್ವಾಮಿಗಳವರ ಉದಾರ ಕೃಪೆ ಮತ್ತು ಅಂದು ಸಂಸ್ಥೆಯ ಅಧ್ಯಕ್ಷರಾಗಿದ್ದ ನಾಗನೂರು ರುದ್ರಾಕ್ಷಿಮಠದ ಪೂಜ್ಯ ಶ್ರೀ ಶಿವಬಸವ ಸ್ವಾಮಿಗಳವರ ಪ್ರೋತ್ಸಾಹದಿಂದ “ ಸುಕುಮಾರ ‘ ಪತ್ರಿಕೆ ಶ್ರೀ ಶಿವಯೋಗ ಮಂದಿರದ ಸದಾಶಿವ ಮುದ್ರಣಾಲಯ ‘ದಲ್ಲಿಯೇ ಅಚ್ಚಾಗಿ ಹೊರಬರಲಾರಂಭಿಸಿತು (೨೦-೧೦-೧೯೫೦ ವಿಜಯದಶಮಿ). ಆಗ ಅದರ ಸಂಪಾದಕರಾಗಿದ್ದವರು ಶ್ರೀ ಜಿ. ಎಂ. ಉಮಾಪತಿ ಶಾಸ್ತ್ರಿಗಳು. ಅದನ್ನು ಉದ್ಘಾಟಿಸಿದವರು ಪೂಜ್ಯ ಹಾನಗಲ್ ಸದಾಶಿವ ಮಹಾಸ್ವಾಮಿಗಳವರು. ಅವರು ಪತ್ರಿಕೆ ಬಿಡುಗಡೆಯ ಭಾಷಣದಲ್ಲಿ “ ವಿನಾಶದತ್ತ ನಡೆದಿರುವ ಸಮಾಜದ ಸುಧಾರಣೆಗಾಗಿ ಕರುಣಾಳು ಪರಮ ಪೂಜ್ಯ ಶ್ರೀ ಹಾನಗಲ್ ಕುಮಾರ ಮಹಾಸ್ವಾಮಿಗಳವರು ಈ ಮಂದಿರವನ್ನು ಕಟ್ಟಿದರು. ಶರಣರ ವ್ಯಾಪಕ ತತ್ವಗಳ ಪ್ರಚಾರದ ಮೂಲಕ ವಿಶ್ವಧರ್ಮ ಪ್ರಸಾರದ ಸದುದ್ದೇಶದಿಂದ ಪತ್ರಿಕೆಯೊಂದನ್ನು ಪ್ರಕಟಿಸಲು ಈ ಅಚ್ಚುಕೂಟವನ್ನು ಏರ್ಪಡಿಸಿದ್ದರು. ಇಂದು ಆ

ಆಚ್ಚಿನಮನೆಯಿಂದಲೇ ಅವರ ಸತ್ಸಂಕಲ್ಪವು ಅಂಕುರಿತವಾಗಿದೆ. ಅದು ಚಿಗುರಿ ಫಲಿಸಿ ಆ ಫಲದ ಸುಸ್ವಾದವನ್ನು ಸಮಾಜದ ಜನರೆಲ್ಲ ಉಣ್ಣುವಂತಾಗಲಿ ” ಎಂದು ಅಪ್ಪಣೆ ಕೊಡಿಸುವುದರ ಜೊತೆಗೆ ಈ ಸುಪ್ತ ಸಮಾಜವನ್ನು ಎಚ್ಚರಿಸಿ, ಸನ್ಮಾರ್ಗದಲ್ಲಿ

ಪ್ರವೃತ್ತಿಯನ್ನುಂಟುಮಾಡುವಂತಹ ಲೇಖನಗಳು ಪತ್ರಿಕೆಗಳಿಗೆ ಭೂಷಣಪ್ರಾಯವಾದವು. ಪತ್ರಿಕೆಯ ಉದ್ಯಮವು  ಅರ್ಥಾಗಮದ ಸಾಧನವಾಗಬಾರದು. ಹಾಳು ಹರಟೆಯ ನೋಟೀಸುಗಳಿಂದ ಅಶೋಭನೀಯವಾಗಬಾರದು. ಸಮಾಜದ ಪ್ರಗತಿಯ ಸಾಮಯಿಕ ಸಮಸ್ಯೆಗಳನ್ನು ಕುರಿತು ವಿವೇಚಿಸಿದ ಪ್ರೌಢಲೇಖನಗಳು ಬೇಕು. ಮಾನವನ ನೈತಿಕಮಟ್ಟವನ್ನು

ಉನ್ನತಗೊಳಿಸುವ ನೈತಿಕ ನಿಬಂಧ ಮತ್ತು ಪ್ರಬಂಧಗಳು ಪ್ರಕಟವಾಗಬೇಕು…. ಸಮಾಜಸೇವೆಯೊಂದಿಗೆ ಕನ್ನಡ ನುಡಿ ಮತ್ತು ಸಾಹಿತ್ಯ ಸೇವೆಗಾಗಿ ಪ್ರಕಟವಾದ ಚೆನ್ನಿಗ ʼ ಸುಕುಮಾರ ‘ನು ಕನ್ನಡಿಗರ ಹೃದಯವನ್ನು ಬೆಳಗಿ ಕನ್ನಡ ಮಾತೆಗೆ ಉನ್ನತ ಕೀರ್ತಿಯನ್ನು ತರಲಿ” ಎಂದು ಹಾರೈಸಿದರು.

 ಪೂಜ್ಯರ ಈ ಮಾತುಗಳಲ್ಲಿ ಲಿಂ. ಶ್ರೀ ಕುಮಾರ ಸ್ವಾಮಿಗಳವರ ಸತ್ಸಂಕಲ್ಪ ಅವರ ಸದುದ್ದೇಶ, ಸಮಾಜ ಸುಧಾರಣೆಯ ಬಗ್ಗೆ ಅವರಿಗಿದ್ದ ಕಾಳಜಿ, ಕಳಕಳಿಗಳನ್ನು ಗುರುತಿಸಬಹುದಾಗಿದೆ. ಅವರ ಮಾತುಗಳಲ್ಲಿರುವ ಇನ್ನೊಂದು ಮಹತ್ವದ ಅಂಶವೆಂದರೆ

ಪತ್ರಿಕೆಯಲ್ಲಿ ಎಂತಹ ಲೇಖನಗಳಿರಬೇಕು, ಎಂತಹ ಲೇಖನಗಳಿರಬಾರದು, ಅದರ ಧೈಯೋದ್ದೇಶಗಳೆಂಥವಿರಬೇಕು ಎಂಬುದರ ವಿವೇಚನೆ. ಇವು ಅಂದಿನ ಸಂಪಾದಕರನ್ನು ಕುರಿತು ಹೇಳಿರುವ ಮಾತುಗಳಾದರೂ ಇಂದಿನ ಸಂಪಾದಕರಿಗೂ ಅನ್ವಯಿಸುತ್ತವೆ.

 ಹೀಗೆ ಕ್ರಿ. ಶ. ೧೯೫೦ ರಿಂದ ಪ್ರೊ. ಜಿ. ಎಂ. ಉಮಾಪತಿ ಶಾಸ್ತ್ರಿ ಅವರ ಸಂಪಾದಕತ್ವದಲ್ಲಿ ಮುದ್ರಣರೂಪದಲ್ಲಿ ಪ್ರಕಟವಾಗುತ್ತ ಬಂದ ‘ ಸುಕುಮಾರ ‘ ಪತ್ರಿಕೆ ಹಲವಾರು ವರ್ಷ ಸರಾಗವಾಗಿ ನಡೆದುಕೊಂಡು ಬಂದು, ಮುಂದೆ ನಿಂತು ಹೋಯಿತು.

ಶಿವಯೋಗ ಮಂದಿರ, ಒಂದು ವಿಶಿಷ್ಟ ಧಾರ್ಮಿಕ ಸಂಸ್ಥೆ. ಇಲ್ಲಿ ತರಬೇತಿ ಹೊಂದಿದ ಸಾವಿರಾರು ಸಾಧಕರು ನಾಡಿನ ತುಂಬ ಹರಡಿರುವ ಮಠಗಳ ಮಠಾಧಿಪತಿಗಳಾಗಿ ಧರ್ಮ, ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಮಠಾಧಿಪತಿಗಳ ಟಂಕಸಾಲೆಯಾಗಿರುವ ಈ ಸಂಸ್ಥೆಯ ಬೆಳವಣಿಗೆಯಲ್ಲಿ ಹಾಗೂ ಧ್ಯೇಯೋದ್ದೇಶಗಳನ್ನು ಪ್ರಚುರಪಡಿಸುವಲ್ಲಿ ಸಂಸ್ಥೆಯ ಮುಖಪತ್ರಿಕೆಯ ಅವಶ್ಯಕತೆಯನ್ನರಿತು ಇತ್ತೀಚೆಗೆ ದಿನಾಂಕ ೭-೫-೨೦೦೨ ರಂದು ಸಭೆ

ಸೇರಿದ ಶಿವಯೋಗಮಂದಿರ ಸಂಸ್ಥೆಯ ಗೌರವಾನ್ವಿತ ಸದಸ್ಯರು ನಿಂತು ಹೋಗಿರುವ ʼ ಸುಕುಮಾರ ” ಪತ್ರಿಕೆಯನ್ನು ಪುನಃ ಪ್ರಕಟಿಸಬೇಕೆಂದು  ಸರ್ವಾನುಮತದಿಂದ ನಿರ್ಣಯಿಸಿದ ಹಿನ್ನೆಲೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹುಬ್ಬಳ್ಳಿ ಮೂರುಸಾವಿರಮಠದ

ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹಾಗೂ ಉಪಾಧ್ಯಕ್ಷರಾದ ನಾಗನೂರು ರುದ್ರಾಕ್ಷಿಮಠದ ಶ್ರೀ ಸಿದ್ಧರಾಮ ಸ್ವಾಮಿಗಳು ಪತ್ರಿಕೆಯ ಸಂಪಾದಕತ್ವದ ಹೊಣೆಯನ್ನು ಡಾ.ಬಿ.ವಿ.ಮಲ್ಲಾಪೂರ,ಡಾ.ಬಿ.ಆರ್.ಹಿರೇಮಠ ಮತ್ತು ಪ್ರೋ. ಬಿ.ವಿ.ಗುಂಜೆಟ್ಟಿ ಯವರಿಗೆ ವಹಿಸಿಕೊಟ್ಟರು. ಅವರೆಲ್ಲ ಅತ್ಯಂತ ಪ್ರಾಮಾಣಿಕವಾಗಿ ಕೆಲಸಮಾಡಿದರು ನಂತರ ಕೆಲವು ಕಾರಣಾಂತರಗಳಿಂದ ಸುಕುಮಾರ ಸ್ಥಗಿತಗೊಂಡಿತು. ಕಳೆದ ವರ್ಷ ಸುಕುಮಾರ ಮತ್ತೆ ಚಿಗರೊಡೆಯಿತು.

ಇಂಥ ಗುರುತರ ಕಾರ್ಯವನ್ನು ಆಗುಮಾಡುವುದಕ್ಕೆ ಕುಮಾರೇಶನ ಕೃಪಬೇಕು. ಹಾಗೆಯೇ ವಿದ್ವಾಂಸರ, ಸಂಶೋಧಕರ, ಸಾಹಿತಿಗಳ ಸಮಯೋಚಿತ ಸಹಾಯ- ಸಹಕಾರಗಳೂ ಬೇಕು. ಮೌಲಿಕ, ವೈಚಾರಿಕ ಹಾಗೂ ಸಂಶೋಧನಾತ್ಮಕ ಲೇಖನಗಳು ಪತ್ರಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ. ಕಾರಣ ಅಂಥ ಲೇಖನಗಳನ್ನು ನಾವು ನಿರೀಕ್ಷಿಸುತ್ತೇವೆ. ಹೊಸಹುಟ್ಟು, ಹೊಸರೂಪ ಪಡೆದು ಹೊರಬರುತ್ತಿರುವ ‘ ಸುಕುಮಾರ ʼಪತ್ರಿಕೆಯನ್ನು ಸಹೃದಯರು ತುಂಬು ಹೃದಯದಿಂದ ಸ್ವಾಗತಿಸುವರೆಂದು ಭಾವಿಸಿದ್ದೇನೆ.

ಮೇ ತಿಂಗಳ ಸುಕುಮಾರ ಸಂಚಿಕೆಯ ಲೇಖನಗಳ ವಿವರ.

  1. ಗುರು ಬಸವೇಶ- ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು
  2. ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-12

ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ.ಮುಂಡರಗಿ

  • ಶ್ರೀ ಹಾನಗಲ್ಲ ಕುಮಾರ ಶಿವಯೋಗಿ – ಪ್ರೋ. ಎಸ್, ಡಿ, ಇಂಚಲ.
  • ಕನ್ನಡಕ್ಕೆ ಬಸವಣ್ಣನವರ ಕಾಣಿಕೆ -ಡಾ. ಜಿ. ಎಸ್. ಶಿವರುದ್ರಪ್ಪ
  • ಅಕ್ಕಮಹಾದೇವಿ – ಡಾ. ಜಿ.ಎಸ್. ಶಿವರುದ್ರಪ್ಪ
  • ಅಲ್ಲಮನ ಅನುಭಾವ ಮತ್ತು ಅಭಿವ್ಯಕ್ತಿ ;ಡಾ. ಸಿ.ವಿ.ಪ್ರಭುಸ್ವಾಮಿಮಠ
  • ಬಸವ ಮತ್ತು ತುಕಾರಾಂ-ಡಾ.ಸರಜೂ ಕಾಟಕರ.

ಶ್ರೀಕಂಠ.ಚೌಕೀಮಠ.

ವ್ಯವಸ್ಥಾಪಕಸಂಪಾದಕರು.

ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ